AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಕಿವಿಯೋಲೆ ಕಿತ್ತು ಪರಾರಿಯಾದ ಕಳ್ಳ

ಕಳ್ಳ ಕಿವಿಯೋಲೆ ಕಿತ್ತು ಪರಾರಿಯಾದ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಕಿವಿಯೋಲೆ ಕಿತ್ತು ಪರಾರಿಯಾದ ಕಳ್ಳ
ವೃದ್ಧೆಯ ಕಿವಿಯೋಲೆ ಕಿತ್ತು ಪರಾರಿಯಾದ ಕಳ್ಳ
ಅಕ್ಷತಾ ವರ್ಕಾಡಿ
|

Updated on: Apr 11, 2024 | 7:24 PM

Share

ಪಂಜಾಬ್‌: ದರೋಡೆ, ಕೊಲೆ ಹೀಗೆ ಹಲವು ಅಪರಾಧಗಳ ವರದಿಗಳು ಪ್ರತಿದಿನವೂ ಹೊರಬರುತ್ತಿವೆ. ಇದೀಗ ಮನೆಯ ಹೊರಗೆ ಕುಳಿತಿದ್ದ ವೃದ್ದೆಯ ಕಿವಿಯೋಲೆ ಕಿತ್ತು ಪರಾರಿಯಾಗಿರುವ ಘಟನೆ ಪಂಜಾಬ್‌ನ ಪಟಿಯಾಲಾದ ತೇಜ್ ಬಾಗ್ ಕಾಲೋನಿಯಲ್ಲಿ ನಡೆದಿದೆ. ಕಳ್ಳ ಕಿವಿಯೋಲೆ ಕಿತ್ತು ಪರಾರಿಯಾದ ಸಂಪೂರ್ಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಫೋಲನ್ ದೇವ(60) ವೃದ್ಧೆ ಮನೆಯ ಹೊರಗೆ ಕುರ್ಚಿಯಲ್ಲಿ ಕುಳಿತಿರುವ ವೇಳೆ ಕದೀಮರು ಕೈಚಳ ತೋರಿಸಿದ್ದು, ಚಿನ್ನದ ಕಿವಿಯೋಲೆಯೊಂದಿಗೆ ಪರಾರಿಯಾಗಿದ್ದಾರೆ. ಮಾಹಿತಿ ಪ್ರಕಾರ ವೃದ್ದೆ ಕೆಲ ತಿಂಗಳ ಹಿಂದೆ ರಸ್ತೆ ಅಪಘಾತದಿಂದಾಗಿ ಕೈಗೆ ಗಾಯವಾಗಿತ್ತು. ಜೊತೆಗೆ ಕೈಗೆ ಪ್ಲಾಸ್ಟರ್ ಕೂಡ ಹಾಕಲಾಗಿತ್ತು. ಇದರಿಂದಾಗಿ ಈ ವೃದ್ಧೆ ಬಿಸಿಲು ತೆಗೆಕೊಳ್ಳಲು ಮನೆಯ ಹೊರಗೆ ಕುಳಿತ್ತಿದ್ದಾರೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಅಷ್ಟರಲ್ಲಿ ಮುಖಕ್ಕೆ ಮಾಸ್ಕ್​​​ ಹಾಕಿಕೊಂಡ ಕಳ್ಳನೊಬ್ಬ ವೃದ್ಧೆಯ ಕಿವಿಯಲ್ಲಿದ್ದ ಚಿನ್ನದ ಕಿವಿಯೋಲೆಗಳನ್ನು ಕದ್ದೊಯ್ದಿದ್ದು ಸ್ಥಳದಿಂದ ಪರಾರಿಯಾಗಿದ್ದಾನೆ.ಈ ಘಟನೆಯ ಸಂಬಂಧಿಸಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು