AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ಯಾಂಕ್‌ನಿಂದ ಬಿಡಿಸಿ ತಂದ ಚಿನ್ನ, ನಡುರಸ್ತೆಯಲ್ಲೇ ಕಳ್ಳತನ ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ವೃದ್ಧ ದಂಪತಿಯೊಂದು ಬರೋಬ್ಬರಿ 5ಲಕ್ಷ ರೂ.ಗಳ ಚಿನ್ನವನ್ನು ಬ್ಯಾಂಕ್‌ನಿಂದ ಬಿಡಿಸಿ ತಂದಿದ್ದು, ತಂದ ಕೆಲ ಹೊತ್ತಿನಲ್ಲೇ ನಡು ರಸ್ತೆಯಲ್ಲೇ ಚಿನ್ನ ಕಳ್ಳತನವಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಬ್ಯಾಂಕ್‌ನಿಂದ ಬಿಡಿಸಿ ತಂದ ಚಿನ್ನ, ನಡುರಸ್ತೆಯಲ್ಲೇ ಕಳ್ಳತನ ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ಚಿನ್ನ ನಡುರಸ್ತೆಯಲ್ಲೇ ಕಳ್ಳತನ
ಅಕ್ಷತಾ ವರ್ಕಾಡಿ
|

Updated on: Sep 04, 2024 | 10:33 AM

Share

ಪುಣೆ: ನಮ್ಮಲ್ಲಿ ಬೆಲೆಬಾಳುವ ವಸ್ತು ಇದ್ದಾಗ ಮೈಯೆಲ್ಲಾ ಕಣ್ಣಾಗಿರಬೇಕು. ಚೂರು ಕಣ್ಣು ತಪ್ಪಿದರೂ ಭಾರೀ ನಷ್ಟ ಎದುರಿಸಬೇಕಾಗುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ಪುಣೆಯಲ್ಲಿ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಂಪತಿಯೊಂದು ಬ್ಯಾಂಕ್‌ನಿಂದ ಬರೋಬ್ಬರಿ 5ಲಕ್ಷ ರೂ.ಗಳ ಚಿನ್ನವನ್ನು ಬ್ಯಾಂಕಿನಿಂದ ಬಿಡಿಸಿ ತಂದಿದ್ದು, ತಂದ ಕೆಲ ಹೊತ್ತಿನಲ್ಲೇ ಹಾಡುಹಗಲೇ ನಡು ರಸ್ತೆಯಲ್ಲೇ ಕಳ್ಳತನವಾಗಿದೆ.

ವೈರಲ್ ಆಗಿರುವ ವಿಡಿಯೋ ಪ್ರಕಾರ, ಪುಣೆಯ ವೃದ್ಧ ದಂಪತಿಗಳು ತಮ್ಮ ಚಿನ್ನಾಭರಣವನ್ನು ಬ್ಯಾಂಕ್‌ನಿಂದ ಬಿಡಿಸಿ ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದರು. ಮಾರ್ಗಮಧ್ಯದಲ್ಲಿ ಅಂಗಡಿಯೊಂದರ ಬಳಿ ಪತಿ ವಡಾಪಾವ್‌ ಖರೀದಿಸಲು ಹೋಗಿದ್ದಾರೆ. ಆದರೆ ಪತ್ನಿ ಸ್ಕೂಟಿ ಬಳಿ ನಿಂತಿದ್ದರು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಈ ವೃದ್ಧ ದಂಪತಿಯನ್ನು ಹಿಂಬಾಲಿಸಿಕೊಂಡು ಬಂದ ಕಳ್ಳನೊರ್ವ ಸರಿಯಾದ ಸಮಯ ನೋಡಿ ಚಿನ್ನವನ್ನಿಟ್ಟಿರುವ ಬ್ಯಾಗ್​ ಅನ್ನು ಎಗರಿಸಿ ಓಡಿ ಹೋಗಿದ್ದಾನೆ. ಇದನ್ನು ಗಮನಿಸಿದ ವೃದ್ಧ ಆತನನ್ನು ಹಿಡಿಯಲು ಯತ್ನಿಸಿದ್ದಾಳೆ. ಆಕೆಯ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ಬಂದಿದ್ದಾರೆ. ಆದರೆ ಕಳ್ಳ ಅದಾಗಲೇ ಅಲ್ಲಿಂದ ಪಾರಾರಿಯಾಗಿದ್ದಾನೆ.

ಇದನ್ನೂ ಓದಿ: Richest Cat: ಇನ್ಸ್ಟಾಗ್ರಾಮ್​​ನಲ್ಲಿ ಪ್ರತೀ ಪೋಸ್ಟ್​​ಗೆ 12ಲಕ್ಷ ರೂ. ಪಡೆಯುವ ವಿಶ್ವದ ಶ್ರೀಮಂತ ಬೆಕ್ಕು

ಫಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ವಡಾಪಾವ್​ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. @gharkekalesh ಎಂಬ ಟ್ವಿಟರ್​ ಖಾತೆಯಲ್ಲಿ Aug 30 ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ನಾಲ್ಕು ದಿನದಲ್ಲಿ 1.6 ಮಿಲಿಯನ್​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?