AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹನಿಮೂನ್‌ ಮುಗಿಸಿ ಬಂದು ಗಂಡ ಬೇಡ, ಲವರ್‌ ಬೇಕು ಎಂದ ನವವಿವಾಹಿತೆ

ಪ್ರಿಯಕರನಿಗಾಗಿ ಗಂಡನನ್ನು ಕೊಲೆಗೈದ, ಗಂಡನನ್ನು ಬಿಟ್ಟು ಬಂದಂತಹ ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದೇ ಶಾಕಿಂಗ್‌ ಘಟನೆಯೊಂದು ನಡೆದಿದ್ದು, ಮದುವೆಯಾಗಿ ಖುಷಿ ಖುಷಿಯಾಗಿ ಹನಿಮೂನ್‌ ಮುಗಿಸಿ ಬಂದು, ಇದೀಗ ನನಗೆ ನನ್ನ ಲವರ್‌ ಬೇಕೆಂದು ನವ ವಿವಾಹಿತೆಯೊಬ್ಬಳು ಗಂಡನನ್ನೇ ತೊರೆದು ತವರು ಮನೆ ಸೇರಿದ್ದಾಳೆ.

Viral: ಹನಿಮೂನ್‌ ಮುಗಿಸಿ ಬಂದು ಗಂಡ ಬೇಡ, ಲವರ್‌ ಬೇಕು ಎಂದ ನವವಿವಾಹಿತೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jul 18, 2024 | 11:32 AM

Share

ಕೆಲವು ವಿವಾಹಿತ ಮಹಿಳೆಯರು ತಮ್ಮ ಪ್ರಿಯಕರನಿಗಾಗಿ ಗಂಡನನ್ನೇ ಬಿಟ್ಟು ಬಂದ, ದೇವರಂತಹ ಪತಿಯನ್ನು ಕೊಲೆಗೈದ ಸಾಕಷ್ಟು ಘಟನೆಗಳು ನಡೆದಿವೆ. ಇಂತಹ ಆಘಾತಕಾರಿ ಪ್ರಕರಣಗಳು ನಮ್ಮನ್ನು ಬೆಚ್ಚಿ ಬೀಳಿಸುತ್ತವೆ. ಅಂತಹದೇ ಘಟನೆಯೊಂದು ಇದೀಗ ನಡೆದಿದ್ದು, ನವವಿವಾಹಿತೆಯೊಬ್ಬಳು ಪ್ರಿಯಕರನಿಗಾಗಿ ಗಂಡನನ್ನೇ ತೊರೆದಿದ್ದಾಳೆ. ಆಕೆಗೆ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಖುಷಿ ಖುಷಿಯಿಂದ ಹನಿಮೂನ್‌ ಕೂಡಾ ಮುಗಿಸಿ ಬಂದಿದ್ದಳು. ಆದರೆ ಪ್ರಿಯಕರನನ್ನು ಬಿಟ್ಟು ಇರಲಾಗದೇ ಪರಿತಪಿಸುತ್ತಿದ್ದ ಆ ನವವಿವಾಹಿತೆ ಇದೀಗ ಗಂಡನನ್ನು ತೊರೆದು ತವರು ಮನೆ ಸೇರಿದ್ದಾಳೆ.

ಉತ್ತರಾಖಂಡದ ಬಾಗೇಶ್ವರ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಹನಿಮೂನ್‌ ಮುಗಿಸಿ ಬಂದ ನವವಿವಾಹಿತೆಯೊಬ್ಬಳು ನನಗೆ ಗಂಡ ಬೇಡವೆಂದು ತವರು ಮನೆ ಸೇರಿದ್ದಾಳೆ. ಹೌದು ನನಗೆ ನನ್ನ ಗಂಡ ಇಷ್ಟವಿಲ್ಲ, ನಾನು ಬಾಯ್‌ಫ್ರೆಂಡ್‌ ಜೊತೆ ಬದುಕಬೇಕೆಂದು ಆಕೆ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದು, ಮಗಳ ಈ ಮಾತಿಗೆ ಪೋಷಕರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ; ಪರ ಸ್ತ್ರೀಯೊಂದಿಗೆ ರೋಮ್ಯಾನ್ಸ್​​​ ಮಾಡುತ್ತಿದ್ದ ವೇಳೆ ಪತ್ನಿಯ ಎಂಟ್ರಿ, ಪತಿಗೆ ಹಿಗ್ಗಾಮುಗ್ಗಾ ಥಳಿತ

ಕಳೆದ ಎರಡು ತಿಂಗಳ ಹಿಂದೆಯಷ್ಟೇ ಗರುಡ್‌ ತಹಸಿಲ್‌ ಎಂಬಲ್ಲಿನ ಯುವಕನೊಂದಿಗೆ ಆಕೆ ಮದುವೆಯಾಗಿದ್ದಳು. ಎಲ್ಲವೂ ಚೆನ್ನಾಗಿಯೇ ಇತ್ತು. ಗಂಡನೊಂದಿಗೆ ಖುಷಿಯಿಂದ ಹನಿಮೂನ್‌ ಕೂಡಾ ಮುಗಿಸಿ ಬಂದಿದ್ದಳು. ಆದರೆ ಇದ್ದಕ್ಕಿದ್ದಂತೆ ಆಕೆ ತವರು ಮನೆ ಸೇರಿದ್ದು, ಆಕೆ ವಾರಗಳು ಕಳೆದರೂ ಗಂಡನ ಮನೆಗೆ ಹೋಗದಿರುವುದನ್ನು ಕಂಡು ಹೆತ್ತವರು ಪ್ರಶ್ನಿಸಿದ್ದಾರೆ. ಆ ಸಂದರ್ಭದಲ್ಲಿ ಆಕೆ ನನಗೆ ನನ್ನ ಗಂಡ ಇಷ್ಟವಿಲ್ಲ, ನಾನು ಬಾಯ್‌ಫ್ರೆಂಡ್‌ ಜೊತೆ ಬದುಕಬೇಕೆಂದು ಹೇಳಿದ್ದು, ನಂತರ ಈ ಗಂಭೀರ ಪ್ರಕರಣ ಠಾಣೆಯ ಮೆಟ್ಟಿಲೇರಿದೆ. ಠಾಣೆಯಲ್ಲಿ ಮಾತುಕತೆ ನಡೆದ ನಂತರ ನವ ವಿವಾಹಿತೆಯ ಮನೆಯವರು ಮದುವೆಗೆ ಖರ್ಚಾದ ಹಣ ಮತ್ತು ಒಡವೆಗಳನ್ನು ಗಂಡನ ಮನೆಗೆ ಹಿಂದಿರುಗಿಸಿದ್ದಾರೆ. ಮತ್ತು ನವವಿವಾಹಿತೆ ತನ್ನ ಪ್ರಿಯಕರನ ಮನೆಗೆ ತೆರಳಿದ್ದು, ಶ್ರೀಘ್ರದಲ್ಲೇ ಅವರಿಬ್ಬರು ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​