AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹನಿಮೂನ್‌ ಮುಗಿಸಿ ಬಂದು ಗಂಡ ಬೇಡ, ಲವರ್‌ ಬೇಕು ಎಂದ ನವವಿವಾಹಿತೆ

ಪ್ರಿಯಕರನಿಗಾಗಿ ಗಂಡನನ್ನು ಕೊಲೆಗೈದ, ಗಂಡನನ್ನು ಬಿಟ್ಟು ಬಂದಂತಹ ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದೇ ಶಾಕಿಂಗ್‌ ಘಟನೆಯೊಂದು ನಡೆದಿದ್ದು, ಮದುವೆಯಾಗಿ ಖುಷಿ ಖುಷಿಯಾಗಿ ಹನಿಮೂನ್‌ ಮುಗಿಸಿ ಬಂದು, ಇದೀಗ ನನಗೆ ನನ್ನ ಲವರ್‌ ಬೇಕೆಂದು ನವ ವಿವಾಹಿತೆಯೊಬ್ಬಳು ಗಂಡನನ್ನೇ ತೊರೆದು ತವರು ಮನೆ ಸೇರಿದ್ದಾಳೆ.

Viral: ಹನಿಮೂನ್‌ ಮುಗಿಸಿ ಬಂದು ಗಂಡ ಬೇಡ, ಲವರ್‌ ಬೇಕು ಎಂದ ನವವಿವಾಹಿತೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jul 18, 2024 | 11:32 AM

Share

ಕೆಲವು ವಿವಾಹಿತ ಮಹಿಳೆಯರು ತಮ್ಮ ಪ್ರಿಯಕರನಿಗಾಗಿ ಗಂಡನನ್ನೇ ಬಿಟ್ಟು ಬಂದ, ದೇವರಂತಹ ಪತಿಯನ್ನು ಕೊಲೆಗೈದ ಸಾಕಷ್ಟು ಘಟನೆಗಳು ನಡೆದಿವೆ. ಇಂತಹ ಆಘಾತಕಾರಿ ಪ್ರಕರಣಗಳು ನಮ್ಮನ್ನು ಬೆಚ್ಚಿ ಬೀಳಿಸುತ್ತವೆ. ಅಂತಹದೇ ಘಟನೆಯೊಂದು ಇದೀಗ ನಡೆದಿದ್ದು, ನವವಿವಾಹಿತೆಯೊಬ್ಬಳು ಪ್ರಿಯಕರನಿಗಾಗಿ ಗಂಡನನ್ನೇ ತೊರೆದಿದ್ದಾಳೆ. ಆಕೆಗೆ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಖುಷಿ ಖುಷಿಯಿಂದ ಹನಿಮೂನ್‌ ಕೂಡಾ ಮುಗಿಸಿ ಬಂದಿದ್ದಳು. ಆದರೆ ಪ್ರಿಯಕರನನ್ನು ಬಿಟ್ಟು ಇರಲಾಗದೇ ಪರಿತಪಿಸುತ್ತಿದ್ದ ಆ ನವವಿವಾಹಿತೆ ಇದೀಗ ಗಂಡನನ್ನು ತೊರೆದು ತವರು ಮನೆ ಸೇರಿದ್ದಾಳೆ.

ಉತ್ತರಾಖಂಡದ ಬಾಗೇಶ್ವರ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಹನಿಮೂನ್‌ ಮುಗಿಸಿ ಬಂದ ನವವಿವಾಹಿತೆಯೊಬ್ಬಳು ನನಗೆ ಗಂಡ ಬೇಡವೆಂದು ತವರು ಮನೆ ಸೇರಿದ್ದಾಳೆ. ಹೌದು ನನಗೆ ನನ್ನ ಗಂಡ ಇಷ್ಟವಿಲ್ಲ, ನಾನು ಬಾಯ್‌ಫ್ರೆಂಡ್‌ ಜೊತೆ ಬದುಕಬೇಕೆಂದು ಆಕೆ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದು, ಮಗಳ ಈ ಮಾತಿಗೆ ಪೋಷಕರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ; ಪರ ಸ್ತ್ರೀಯೊಂದಿಗೆ ರೋಮ್ಯಾನ್ಸ್​​​ ಮಾಡುತ್ತಿದ್ದ ವೇಳೆ ಪತ್ನಿಯ ಎಂಟ್ರಿ, ಪತಿಗೆ ಹಿಗ್ಗಾಮುಗ್ಗಾ ಥಳಿತ

ಕಳೆದ ಎರಡು ತಿಂಗಳ ಹಿಂದೆಯಷ್ಟೇ ಗರುಡ್‌ ತಹಸಿಲ್‌ ಎಂಬಲ್ಲಿನ ಯುವಕನೊಂದಿಗೆ ಆಕೆ ಮದುವೆಯಾಗಿದ್ದಳು. ಎಲ್ಲವೂ ಚೆನ್ನಾಗಿಯೇ ಇತ್ತು. ಗಂಡನೊಂದಿಗೆ ಖುಷಿಯಿಂದ ಹನಿಮೂನ್‌ ಕೂಡಾ ಮುಗಿಸಿ ಬಂದಿದ್ದಳು. ಆದರೆ ಇದ್ದಕ್ಕಿದ್ದಂತೆ ಆಕೆ ತವರು ಮನೆ ಸೇರಿದ್ದು, ಆಕೆ ವಾರಗಳು ಕಳೆದರೂ ಗಂಡನ ಮನೆಗೆ ಹೋಗದಿರುವುದನ್ನು ಕಂಡು ಹೆತ್ತವರು ಪ್ರಶ್ನಿಸಿದ್ದಾರೆ. ಆ ಸಂದರ್ಭದಲ್ಲಿ ಆಕೆ ನನಗೆ ನನ್ನ ಗಂಡ ಇಷ್ಟವಿಲ್ಲ, ನಾನು ಬಾಯ್‌ಫ್ರೆಂಡ್‌ ಜೊತೆ ಬದುಕಬೇಕೆಂದು ಹೇಳಿದ್ದು, ನಂತರ ಈ ಗಂಭೀರ ಪ್ರಕರಣ ಠಾಣೆಯ ಮೆಟ್ಟಿಲೇರಿದೆ. ಠಾಣೆಯಲ್ಲಿ ಮಾತುಕತೆ ನಡೆದ ನಂತರ ನವ ವಿವಾಹಿತೆಯ ಮನೆಯವರು ಮದುವೆಗೆ ಖರ್ಚಾದ ಹಣ ಮತ್ತು ಒಡವೆಗಳನ್ನು ಗಂಡನ ಮನೆಗೆ ಹಿಂದಿರುಗಿಸಿದ್ದಾರೆ. ಮತ್ತು ನವವಿವಾಹಿತೆ ತನ್ನ ಪ್ರಿಯಕರನ ಮನೆಗೆ ತೆರಳಿದ್ದು, ಶ್ರೀಘ್ರದಲ್ಲೇ ಅವರಿಬ್ಬರು ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ