AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯನ್ನು ಮೂರ್ಖನನ್ನಾಗಿ ಮಾಡಿದ ಮೊಸಳೆ.. ಆಮೇಲ್​ ಏನಾಯ್ತು?​

ವಿಡಿಯೋ ನೋಡಿದ ನೆಟ್ಟಿಗರು ಬಾರೀ ಇಷ್ಟಪಟ್ಟಿದ್ದು ಕಾಮೆಂಟ್​ ಹಾಕುವ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. 14 ಸೆಕೆಂಡುಗಳ ಈ ವಿಡಿಯೋ 3,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral Video: ಚಿರತೆಯನ್ನು ಮೂರ್ಖನನ್ನಾಗಿ ಮಾಡಿದ ಮೊಸಳೆ.. ಆಮೇಲ್​ ಏನಾಯ್ತು?​
shruti hegde
|

Updated on:May 31, 2021 | 3:21 PM

Share

ಪ್ರಾಣಿಗಳ ಕಿತ್ತಾಟ ವಿಡಿಯೋ ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಬಾರೀ ಸದ್ದು ಮಾಡುತ್ತವೆ. ಕಿತ್ತಾಡದ ದೃಶ್ಯವು ಕೆಲವು ಬಾರಿ ಬೆರಗಾಗುವಂತೆ ಮಾಡಿದರೂ ಇನ್ನು ಕೆಲವು ತಮಾಷೆಯಾಗಿರುತ್ತದೆ. ನೀರು ಕುಡಿಯಲೆಂದ ಬಂದ ಚಿರತೆಯನ್ನು ಮೂರ್ಝನನ್ನಾಗಿ ಮಾಡಿದ ಮೊಸಳೆಯ ವಿಡಿಯೋ ಇದೀಗ ನೋಡುಗರಿಗೆ ಅಚ್ಚರಿ ಮೂಡಿಸುವಂತಿದೆ. ವಿಡಿಯೋ ನೋಡಿದ ನೆಟ್ಟಿಗರು ‘ಅದ್ಭುತ’ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೇರೆ ಪ್ರಾಣಿಗಳಿಗಳ ಬೇಟೆಗಾಗಿ ಸಂಚು ಹೂಡುತ್ತಾ ಚಿರತೆ ಕಾಯುತ್ತಿರುವ ದೃಶ್ಯವನ್ನು ನೋಡಿರಬಹುದು. ಸದ್ದಿಲ್ಲದೆ ಮರದ ಮೇಲೆ ಕೂರು, ಕೆಂಗಣ್ಣಿನಿಂದ ಗುರಾಯಿಸುತ್ತಾ ತನ್ನ ಹಸಿವನ್ನು ನೀಗಿಸಿಕೊಳ್ಳಲು ಇತರ ಪ್ರಾಣಿಗಳನ್ನು ಹುಡುಕುತ್ತಿರುತ್ತದೆ. ಆ ಚಿರತೆಯು ಒಂದೇ ಕ್ಷಣ ಹೆದರಿ ಪರಾರಿಯಾದ ದೃಶ್ಯ ಸೆರೆಯಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ವಿಡಿಯೋ ಕ್ಲಿಪ್​ನಲ್ಲಿ ನೋಡುವಂತೆ ಚಿರತೆಯು ನೀರು ಕುಡಿಯಲೆಂದು ನದಿಯ ದಡಕ್ಕೆ ಬರುತ್ತಿರುತ್ತದೆ. ಬಾಯಾರಿಕೆಗೊಂಡ ಚಿರತೆ, ಇನ್ನೇನು ನೀರು ಕುಡಿಯಬೇಕು ಅನ್ನುವಷ್ಟರಲ್ಲಿ ನೀರಿನಲ್ಲಿ ಅಡಗಿದ್ದ ಮೊಸಳೆಯು ಒಮ್ಮೆಲೆ ಮೇಲೇರುತ್ತದೆ. ತತ್​ಕ್ಷಣಕ್ಕೆ ಹೆದರಿದ ಚಿರತೆ ಸ್ಥಳದಿಂದ ಎತ್ತರಕ್ಕೆ ಜಿಗಿದು ಪರಾರಿಯಾಗುತ್ತದೆ. ಗಾಬರಿಯಿಂದ ಚಿರತೆ ಓಡುವುದನ್ನು ನೀವೂ ನೋಡಿ..

ವಿಡಿಯೋ ನೋಡಿದ ನೆಟ್ಟಿಗರು ಬಾರೀ ಇಷ್ಟಪಟ್ಟಿದ್ದು ಕಾಮೆಂಟ್​ ಹಾಕುವ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. 14 ಸೆಕೆಂಡುಗಳ ಈ ವಿಡಿಯೋ 3,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ: 

ಚಿತ್ರದುರ್ಗದಲ್ಲಿ ಮನೆಯೊಳಗೆ ನುಗ್ಗಿದ ಚಿರತೆ; ಸ್ಥಳಕ್ಕೆ ಜಮಾಯಿಸಿದ ಸಾವಿರಾರು ಜನ

ಮೈಸೂರಿನ ವೃದ್ದೆ ನಾಪತ್ತೆ; ಚಿರತೆ ಹೊತ್ತೊಯ್ದಿರುವ ಶಂಕೆ

Published On - 3:19 pm, Mon, 31 May 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ