Viral Video: ಏರ್​ಪೋರ್ಟ್​ನಲ್ಲಿ ತಪಾಸಣೆಗೆಂದು ಮಹಿಳೆಯ ಬ್ಯಾಗ್​ ತೆರೆದು ನೋಡಿ ದಂಗಾದ ಸಿಬ್ಬಂದಿ, ಅಲ್ಲಿತ್ತು 22 ಜೀವಂತ ಹಾವುಗಳು

ಪ್ರಪಂಚದಾದ್ಯಂತ ಕಳ್ಳಸಾಗಣೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಚಿನ್ನ-ಬೆಳ್ಳಿ, ಡ್ರಗ್ಸ್​ ಈಗ ಅಪರೂಪದ ಪ್ರಾಣಿಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

Viral Video: ಏರ್​ಪೋರ್ಟ್​ನಲ್ಲಿ ತಪಾಸಣೆಗೆಂದು ಮಹಿಳೆಯ ಬ್ಯಾಗ್​ ತೆರೆದು ನೋಡಿ ದಂಗಾದ ಸಿಬ್ಬಂದಿ, ಅಲ್ಲಿತ್ತು 22 ಜೀವಂತ ಹಾವುಗಳು
ಹಾವು
Follow us
|

Updated on: May 01, 2023 | 10:34 AM

ಪ್ರಪಂಚದಾದ್ಯಂತ ಕಳ್ಳಸಾಗಣೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಚಿನ್ನ-ಬೆಳ್ಳಿ, ಡ್ರಗ್ಸ್​ ಈಗ ಅಪರೂಪದ ಪ್ರಾಣಿಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ. ಇತ್ತೀಚೆಗಷ್ಟೇ ಆಘಾತಕಾರಿ ಪ್ರಕರಣವೊಂದು ಚೆನ್ನೈ ಏರ್​ಪೋರ್ಟ್​ನಲ್ಲಿ ನಡೆದಿದೆ. ಮಲೇಷ್ಯಾದಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದ ಮಹಿಳಾ ಪ್ರಯಾಣಿಕರ ಬಗ್ಗೆ ಅನುಮಾನ ಹುಟ್ಟಿ ಬ್ಯಾಗ್ ತಪಾಸಣೆ ನಡೆಸಿದಾಗ 22 ಜೀವಂತ ಹಾವುಗಳು ಪತ್ತೆಯಾಗಿವೆ. ವಾಸ್ತವವಾಗಿ ಹಾವು ವಿಷಕಾರಿಯಾಗಿರುವುದರಿಂದ ಜನರು ಅದರಿಂದ ದೂರವೇ ಇರುತ್ತಾರೆ, ವಿಷದ ಖರೀದಿ ಹಾಗೂ ಮಾರಾಟ ಎಲ್ಲೆಡೆ ಜೋರಾಗಿಯೇ ನಡೆಯುತ್ತಿದೆ.

ಇತ್ತೀಚಿನ ದಿನಗಳಲ್ಲಿ ಹೆಬ್ಬಾವನ್ನು ಜನರು ಸಾಕು ಪ್ರಾಣಿಯಂತೆ ಮನೆಯಲ್ಲಿ ಇರಿಸಿಕೊಳ್ಳುತ್ತಿದ್ದಾರೆ. ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಹಿಳೆಯ ಲಗೇಜ್ ತಪಾಸಣೆ ವೇಳೆ ಕಸ್ಟಮ್ ಇಲಾಖೆಯ ತಂಡವು ಹುಡುಕುತ್ತಿರುವಾಗ ಚೀಲದಿಂದ ಹಾವುಗಳು ಹೊರಬರಲು ಪ್ರಾರಂಭಿಸಿದಾಗ ಭಯಗೊಂಡರು.

ಮತ್ತಷ್ಟು ಓದಿ: Viral Post: ಏರ್ ಇಂಡಿಯಾದ ನಿರ್ಲಕ್ಷ್ಯದಿಂದ ವಿಮಾನ ನಿಲ್ದಾಣದಲ್ಲಿ ಬೆಕ್ಕಿನ ಮರಿಯನ್ನು ಕಳೆದುಕೊಂಡ ಪ್ರಯಾಣಿಕ

ಮಾಹಿತಿ ಪ್ರಕಾರ ಎಲ್ಲಾ ಹಾವುಗಳು ವಿವಿಧ ಜಾತಿಯ ಹಾವುಗಳಾಗಿದ್ದು, ಅವುಗಳನ್ನು ವಿವಿಧ ಪ್ಲಾಸ್ಟಿಕ್ ಪಾತ್ರೆಗಳಲ್ಲಿ ತರಲಾಗಿದೆ. ಕಸ್ಟಮ್ಸ್​ ಅಧಿಕಾರಿಗಳು ನೀಡಿದ ಮಾಹಿತಿಯಲ್ಲಿ, ಮಹಿಳೆ ಏಪ್ರಿಲ್ 28 ರಂದು ಮಲೇಷ್ಯಾದ ರಾಜಧಾನಿ ಕೌಲಾಲಂಪುರದಿಂದ AK 13 ಸಂಖ್ಯೆಯ ವಿಮಾನದಿಂದ ಭಾರತದ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದರು ಎಂದು ಹೇಳಲಾಗಿದೆ.

ಬ್ಯಾಗ್‌ನಿಂದ ಹಾವುಗಳು ಹೊರಬರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದೆ. ಸುದ್ದಿ ಸಂಸ್ಥೆ ANI ಟ್ವಿಟ್ಟರ್‌ನಲ್ಲಿ ತನ್ನ ವೀಡಿಯೊವನ್ನು ಹಂಚಿಕೊಂಡಿದೆ ಮತ್ತು ಕಸ್ಟಮ್ಸ್ ಇಲಾಖೆ ತಂಡವು ಕಸ್ಟಮ್ಸ್ ಆಕ್ಟ್ 1962 ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ಅಡಿಯಲ್ಲಿ ಚೀಲಗಳನ್ನು ಪರಿಶೀಲಿಸುವಾಗ ಪತ್ತೆಯಾದ 22 ಜೀವಂತ ಹಾವುಗಳೊಂದಿಗೆ ಗೋಸುಂಬೆಯನ್ನು ವಶಪಡಿಸಿಕೊಂಡಿದೆ ಎಂದು ಮಾಹಿತಿ ನೀಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ