AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ

ಫೋಟೋವನ್ನು ಹಂಚಿಕೊಳ್ಳಲಾಗುತ್ತಿದ್ದಂತೆಯೇ 400ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದುಕೊಂಡಿದೆ. ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋದ ಪ್ರಯಾಣಿಕರಿಂದ ಸಕಾರಾತ್ಮಕ ಪ್ರತಿಕ್ರಿಯೆಗಳು ದೊರೆತಿವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ
ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ
TV9 Web
| Edited By: |

Updated on: Jun 28, 2021 | 1:03 PM

Share

ಕೊವಿಡ್ ವ್ಯಾಕ್ಸಿನೇಶನ್​ ಕುರಿತಾಗಿ ಕೆಲವರು ಭಯಗೊಂಡಿದ್ದಾರೆ. ಹೀಗಾಗಿ ವ್ಯಾಕ್ಸಿನ್​ ಪಡೆಯಲು ಹಿಂಜರಿಯುತ್ತಿದ್ದಾರೆ. ಈ ಕುರಿತಾಗಿ ಜನರಿಗೆ ಜಾಗೃತಿ ಮೂಡಿಸಲು ಅದೆಷ್ಟೋ ಪ್ರಯತ್ನಗಳು ನಡೆಯುತ್ತಿವೆ. ಇದೀಗ ಆಟೋ ರಿಕ್ಷಾದ ವಿಭಿನ್ನ ವಿನ್ಯಾಸ ವೈರಲ್​ ಆಗಿದೆ. ವ್ಯಾಕ್ಸಿನ್​ ಪ್ರಾಮುಖ್ಯತೆಯ ಕುರಿತಾಗಿ ತಿಳಿಹೇಳುವ ಉದ್ದೇಶದಿಂದ ಕಲಾವಿದ ಆಟೋ ರಿಕ್ಷಾವನ್ನು ಸುಂದರವಾಗಿ ವಿನ್ಯಾಸಗೊಳಿಸಿದ್ದಾರೆ. ಕೊರೊನಾ ವೈರಸ್​ ಹರಡುವಿಕೆಯ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿನ್ಯಾಸಗೊಳಿಸಿದ ಕಲೆಗಾರನಿಗೆ ನೆಟ್ಟಿಗರು ಮೆಚ್ಚುಗೆ ಹೊರಹಾಕಿದ್ದಾರೆ.

ಚೆನ್ನೈ ಮೂಲದ ಗೌತಮ್​ ಹೆಸರಿನ ಕಲೆಗಾರ ವ್ಯಾಕ್ಸಿನ್​ ವಿನ್ಯಾಸದಿಂದ ಆಟೋ ರಿಕ್ಷಾವನ್ನು ವಿಭಿನ್ನ ಶೈಲಿಯಲ್ಲಿ ರೆಡಿ ಮಾಡಿದ್ದಾರೆ. ತುಂಬಾ ಜನರು ವ್ಯಾಕ್ಸಿನ್​ ಕುರಿತಾಗಿ ಭಯ ಹೊಂದಿದ್ದಾರೆ. ಆದರೆ ಅವರು ವ್ಯಾಕ್ಸಿನ್​ ಪ್ರಾಮುಖ್ಯತೆಯನ್ನು ತಿಳಿಯಬೇಕಿದೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಪೋಸ್ಟ್​ನಲ್ಲಿ ಗಮನಿಸುವಂತೆ, ಆಟೋ ರಿಕ್ಷಾವನ್ನು ತಿಳಿನೀಲಿ ಬಣ್ಣದಲ್ಲಿ ಪೇಂಟಿಂಗ್​ ಮಾಡಲಾಗಿದೆ. ಆಟೋದ ಮೇಲೆ ಕೊರೊನಾ ವ್ಯಾಕ್ಸಿನ್​ ನೀಡುವ ಸಿರಿಂಜ್​​ಗಳ ಅಳವಡಿಕೆ ಮಾಡಲಾಗಿದೆ. ಬಣ್ಣದ ಪೇಪರ್​, ಬಾಟಲ್​ಗಳನ್ನು ಬಳಸಿ ಆಟೋರಿಕ್ಷಾವನ್ನು ವಿನ್ಯಾಸಗೊಳಿಸಲಾಗಿದೆ.

ಫೋಟೋವನ್ನು ಹಂಚಿಕೊಳ್ಳಲಾಗುತ್ತಿದ್ದಂತೆಯೇ 400ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದುಕೊಂಡಿದೆ. ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋದ ಪ್ರಯಾಣಿಕರಿಂದ ಸಕಾರಾತ್ಮಕ ಪ್ರತಿಕ್ರಿಯೆಗಳು ದೊರೆತಿವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Coronavirus cases in India: ದೇಶದಲ್ಲಿ 50,040 ಹೊಸ ಕೊವಿಡ್ ಪ್ರಕರಣ ಪತ್ತೆ, 1258 ಮಂದಿ ಸಾವು

ಬೆಂಗಳೂರಿಗರ ಅನುಕೂಲಕ್ಕಾಗಿ ಜನಸಂಪರ್ಕ ದಿನ: ಸಿಲಿಕಾನ್​ ಸಿಟಿ ಖಾಕಿ ಪಡೆಯ ಹೊಸ ಪ್ರಯತ್ನ

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ