AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ

ಫೋಟೋವನ್ನು ಹಂಚಿಕೊಳ್ಳಲಾಗುತ್ತಿದ್ದಂತೆಯೇ 400ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದುಕೊಂಡಿದೆ. ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋದ ಪ್ರಯಾಣಿಕರಿಂದ ಸಕಾರಾತ್ಮಕ ಪ್ರತಿಕ್ರಿಯೆಗಳು ದೊರೆತಿವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ
ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ
TV9 Web
| Edited By: |

Updated on: Jun 28, 2021 | 1:03 PM

Share

ಕೊವಿಡ್ ವ್ಯಾಕ್ಸಿನೇಶನ್​ ಕುರಿತಾಗಿ ಕೆಲವರು ಭಯಗೊಂಡಿದ್ದಾರೆ. ಹೀಗಾಗಿ ವ್ಯಾಕ್ಸಿನ್​ ಪಡೆಯಲು ಹಿಂಜರಿಯುತ್ತಿದ್ದಾರೆ. ಈ ಕುರಿತಾಗಿ ಜನರಿಗೆ ಜಾಗೃತಿ ಮೂಡಿಸಲು ಅದೆಷ್ಟೋ ಪ್ರಯತ್ನಗಳು ನಡೆಯುತ್ತಿವೆ. ಇದೀಗ ಆಟೋ ರಿಕ್ಷಾದ ವಿಭಿನ್ನ ವಿನ್ಯಾಸ ವೈರಲ್​ ಆಗಿದೆ. ವ್ಯಾಕ್ಸಿನ್​ ಪ್ರಾಮುಖ್ಯತೆಯ ಕುರಿತಾಗಿ ತಿಳಿಹೇಳುವ ಉದ್ದೇಶದಿಂದ ಕಲಾವಿದ ಆಟೋ ರಿಕ್ಷಾವನ್ನು ಸುಂದರವಾಗಿ ವಿನ್ಯಾಸಗೊಳಿಸಿದ್ದಾರೆ. ಕೊರೊನಾ ವೈರಸ್​ ಹರಡುವಿಕೆಯ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿನ್ಯಾಸಗೊಳಿಸಿದ ಕಲೆಗಾರನಿಗೆ ನೆಟ್ಟಿಗರು ಮೆಚ್ಚುಗೆ ಹೊರಹಾಕಿದ್ದಾರೆ.

ಚೆನ್ನೈ ಮೂಲದ ಗೌತಮ್​ ಹೆಸರಿನ ಕಲೆಗಾರ ವ್ಯಾಕ್ಸಿನ್​ ವಿನ್ಯಾಸದಿಂದ ಆಟೋ ರಿಕ್ಷಾವನ್ನು ವಿಭಿನ್ನ ಶೈಲಿಯಲ್ಲಿ ರೆಡಿ ಮಾಡಿದ್ದಾರೆ. ತುಂಬಾ ಜನರು ವ್ಯಾಕ್ಸಿನ್​ ಕುರಿತಾಗಿ ಭಯ ಹೊಂದಿದ್ದಾರೆ. ಆದರೆ ಅವರು ವ್ಯಾಕ್ಸಿನ್​ ಪ್ರಾಮುಖ್ಯತೆಯನ್ನು ತಿಳಿಯಬೇಕಿದೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಪೋಸ್ಟ್​ನಲ್ಲಿ ಗಮನಿಸುವಂತೆ, ಆಟೋ ರಿಕ್ಷಾವನ್ನು ತಿಳಿನೀಲಿ ಬಣ್ಣದಲ್ಲಿ ಪೇಂಟಿಂಗ್​ ಮಾಡಲಾಗಿದೆ. ಆಟೋದ ಮೇಲೆ ಕೊರೊನಾ ವ್ಯಾಕ್ಸಿನ್​ ನೀಡುವ ಸಿರಿಂಜ್​​ಗಳ ಅಳವಡಿಕೆ ಮಾಡಲಾಗಿದೆ. ಬಣ್ಣದ ಪೇಪರ್​, ಬಾಟಲ್​ಗಳನ್ನು ಬಳಸಿ ಆಟೋರಿಕ್ಷಾವನ್ನು ವಿನ್ಯಾಸಗೊಳಿಸಲಾಗಿದೆ.

ಫೋಟೋವನ್ನು ಹಂಚಿಕೊಳ್ಳಲಾಗುತ್ತಿದ್ದಂತೆಯೇ 400ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದುಕೊಂಡಿದೆ. ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋದ ಪ್ರಯಾಣಿಕರಿಂದ ಸಕಾರಾತ್ಮಕ ಪ್ರತಿಕ್ರಿಯೆಗಳು ದೊರೆತಿವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Coronavirus cases in India: ದೇಶದಲ್ಲಿ 50,040 ಹೊಸ ಕೊವಿಡ್ ಪ್ರಕರಣ ಪತ್ತೆ, 1258 ಮಂದಿ ಸಾವು

ಬೆಂಗಳೂರಿಗರ ಅನುಕೂಲಕ್ಕಾಗಿ ಜನಸಂಪರ್ಕ ದಿನ: ಸಿಲಿಕಾನ್​ ಸಿಟಿ ಖಾಕಿ ಪಡೆಯ ಹೊಸ ಪ್ರಯತ್ನ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!