ರಸ್ತೆ ಮಧ್ಯೆ ಪ್ಯಾಂಟ್‌ ಬಿಚ್ಚಿ ಗುಪ್ತಾಂಗ ತೋರಿಸಿದ ಯುವಕನಿಗೆ ಪೊರಕೆಯಿಂದ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

ತಮಿಳುನಾಡಿನ ಚೆನ್ನೈನಲ್ಲಿ ಯುವಕನೊಬ್ಬ ನೈರ್ಮಲ್ಯ ಕಾರ್ಯಕರ್ತೆ ಮುಂದೆ ಅಸಭ್ಯವಾಗಿ ವರ್ತಿಸಿದ್ದಾನೆ. ಕರ್ತವ್ಯದಲ್ಲಿದ್ದ ಮಹಿಳೆ ತಕ್ಷಣ ಪೊರಕೆಯಲ್ಲಿ ಆ ಯುವಕನಿಗೆ ಸರಿಯಾಗಿ ಪಾಠ ಕಲಿಸಿದ್ದಾರೆ. ಈ ಘಟನೆ ವೈರಲ್ ಆಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ನೈರ್ಮಲ್ಯ ಕಾರ್ಯಕರ್ತೆಯರ ಸುರಕ್ಷತೆ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು ಎಂದು ಹೇಳಿದ್ದಾರೆ. ಇನ್ನು ಪೊಲೀಸರು ಆರೋಪಿ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ರಸ್ತೆ ಮಧ್ಯೆ ಪ್ಯಾಂಟ್‌ ಬಿಚ್ಚಿ ಗುಪ್ತಾಂಗ ತೋರಿಸಿದ ಯುವಕನಿಗೆ ಪೊರಕೆಯಿಂದ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ
ಸಾಂದರ್ಭಿಕ ಚಿತ್ರ

Updated on: Nov 11, 2025 | 3:05 PM

ಯುವಕನೊಬ್ಬ ನೈರ್ಮಲ್ಯ ಕಾರ್ಯಕರ್ತೆಯ ಮುಂದೆ ಪ್ಯಾಂಟ್​​ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ವೇಳೆ ಮಹಿಳೆ ಯುವಕನಿಗೆ ಪೊರಕೆಯಿಂದ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಮಿಳುನಾಡಿನ ಚೆನ್ನೈನ ಅಡ್ಯಾರ್ ಸೇತುವೆಯ ಬಳಿ (Chennai sanitation worker) ನಡೆದಿದೆ. ಇದೀಗ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಮಹಿಳೆ ಕಸ ಗುಡಿಸುತ್ತಿದ್ದ ವೇಳೆ ಬೈಕ್​​ನಲ್ಲಿ ಬಂದ ಯುವಕ ಆಕೆ ಮುಂದೆ ಪ್ಯಾಂಟ್​​ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ವೇಳೆ ಮಹಿಳೆ ಯುವಕನಿಗೆ ಸರಿಯಾಗಿ ಪೊರಕೆಯಲ್ಲಿ ಗ್ರಹಚಾರ ಬಿಡಿಸಿದ್ದಾರೆ.

ವರದಿಗಳ ಪ್ರಕಾರ, ತಮಿಳುನಾಡಿನ ಚೆನ್ನೈನ ಅಡ್ಯಾರ್ ಸೇತುವೆಯ ಬಳಿ ಸೋಮವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ನೈರ್ಮಲ್ಯ ಕಾರ್ಯಕರ್ತೆ ರಸ್ತೆ ಸ್ವಚ್ಛಗೊಳಿಸುತ್ತಿರುವಾಗ ಹೆಲ್ಮೆಟ್ ಧರಿಸಿದ ಯುವಕನೊಬ್ಬ ಬೈಕ್​​​ನಲ್ಲಿ ಬಂದು ಆಕೆ ಮುಂದೆ ನಿಲ್ಲಿಸಿದ್ದಾನೆ. ಮಹಿಳೆ, ಸ್ವಲ್ಪ ಬೈಕ್ ತೆಗೆಯಿರಿ ಸ್ವಚ್ಛ ಮಾಡಬೇಕು ಎಂದು ಹೇಳಿದಾಗ, ಯುವಕ ವಿಚಿತ್ರ ರೀತಿಯಲ್ಲಿ ತಲೆ ಅಲ್ಲಾಡಿಸಿ, ಇದ್ದಕ್ಕಿದ್ದಂತೆ ತನ್ನ ಪ್ಯಾಂಟ್ ಜಿಪ್ ಬಿಚ್ಚಿ, ತನ್ನ ಗುಪ್ತಾಂಗ ತೋರಿಸಿದ್ದಾನೆ.

ಬಗ್ಗೆ ನೈರ್ಮಲ್ಯ ಕಾರ್ಯಕರ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಮಹಿಳೆ ಹೀಗೆ ಹೇಳಿದ್ದಾರೆ. “ಯುವಕ ಕಾಲೇಜು ವಿದ್ಯಾರ್ಥಿಯಂತೆ ಕಾಣುತ್ತಿದ್ದ, ನಾನು ಕಸ ಗುಡಿಸುವ ವೇಳೆ ಅಡ್ಡ ಬಂದು ಬೈಕ್​​​ ನಿಲ್ಲಿಸಿದ, ನಾನು ತುಂಟಾಟ ಮಾಡುವ ಹುಡುಗ ಎಂದು ಸುಮ್ಮನಾದೆ, ಆದರೆ ಅವನು ಜಿಪ್ ತೆರೆದಾಗ ನನಗೆ ಶಾಕ್​​ ಆಯಿತು. ನಾನು ತಕ್ಷಣ ಪೊರಕೆ ಎತ್ತಿಕೊಂಡು ಅವನನ್ನು ಹೊಡೆಯಲು ಪ್ರಾರಂಭಿಸಿದೆ. ಅವನು ಭಯಗೊಂಡು ಅಲ್ಲಿಂದ ಓಡಿ ಹೋಗಿದ್ದಾನೆ.” ಎಂದು ಹೇಳಿದ್ದಾರೆ. ಇನ್ನು ದೃಶ್ಯವೂ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆ ತನ್ನ ರಕ್ಷಣೆಗಾಗಿ ಧೈರ್ಯ ಮಾಡಿ, ಯುವಕನಿಗೆ ಸರಿಯಾಗಿ ಪಾಠ ಕಳಿಸಿದ್ದಾರೆ ಎಂದು ನೆಟ್ಟಿಗರು ಹೇಳಿದ್ದಾರೆ.

ಇದನ್ನೂ ಓದಿ: ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಮಹಿಳೆ, ವಿಡಿಯೋ ವೈರಲ್​​

ಇನ್ನು ಮಹಿಳೆ ಹೇಳಿರುವ ಪ್ರಕಾರ, ಹಿಂದೆಯೂ ನಮಗೆ ಇಂತಹ ಅನುಭವಗಳು ಆಗಿವೆ. ನಾವು ಬೀದಿಗಳಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುತ್ತೇವೆ. ಆಗಾ ಕೆಲವೊಂದು ವ್ಯಕ್ತಿ ನಮ್ಮ ಬಳಿ ಬಂದು ಹೀಗೆ ಕೆಟ್ಟದಾಗಿ ವರ್ತನೆ ಮಾಡುತ್ತಾರೆ. ನಮಗೆ ಭದ್ರತೆ ಬೇಕು, ಸರ್ಕಾರ ಬಗ್ಗೆ ಯೋಚನೆ ಮಾಡಬೇಕಿದೆ ಎಂದು ಮಹಿಳೆ ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸಲಾಗಿದೆ. ಹಾಗೂ ಆತನನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ವೈರಲ್ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us