AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಚೆಸ್‌ ಒಲಿಂಪಿಯಾಡ್‌ನಲ್ಲಿ ಭಾರತದ ಧ್ವಜ ಹಿಡಿದು ಸಂಭ್ರಮಿಸಿದ ಪಾಕಿಸ್ತಾನ ತಂಡ, ಅಪರೂಪದ ದೃಶ್ಯ ವೈರಲ್‌

ಹಂಗೇರಿಯಲ್ಲಿ ನಡೆದ 45 ನೇ ಚೆಸ್‌ ಒಲಿಂಪಿಯಾಡ್‌ನಲ್ಲಿ ಭಾರತವು ಪುರುಷ ಮತ್ತು ಮಹಿಳೆಯ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತ ತಂಡ ತನ್ನ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದ್ದವು. ಈ ನಡುವೆ ಪಾಕ್‌ ಚೆಸ್‌ ತಂಡ ಭಾರತದ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದು ಫೋಟೋಗೆ ಪೋಸ್‌ ನೀಡುವಂತಹ ಹೃದಯಸ್ಪರ್ಶಿ ದೃಶ್ಯ ಕೂಡಾ ಭಾರೀ ವೈರಲ್‌ ಆಗುತ್ತಿದೆ.

Viral: ಚೆಸ್‌ ಒಲಿಂಪಿಯಾಡ್‌ನಲ್ಲಿ ಭಾರತದ ಧ್ವಜ ಹಿಡಿದು ಸಂಭ್ರಮಿಸಿದ ಪಾಕಿಸ್ತಾನ ತಂಡ, ಅಪರೂಪದ ದೃಶ್ಯ ವೈರಲ್‌
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Sep 27, 2024 | 12:12 PM

Share

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಸೆಪ್ಟೆಂಬರ್‌ 22 ರಂದು ನಡೆದ 45 ನೇ ಚೆಸ್‌ ಒಲಿಂಪಿಯಾಡ್‌ ಸ್ಪರ್ಧೆಯಲ್ಲಿ ಭಾರತ ತಂಡ ಎರಡು ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದೆ. ಪುರುಷರು ಮತ್ತು ಮಹಿಳೆ ಈ ಎರಡು ವಿಭಾಗದಲ್ಲೂ ಭಾರತ ತಂಡ ಚಿನ್ನವನ್ನು ಗೆದ್ದಿದ್ದು, ಭಾರತ ತಂಡ ಈ ಐತಿಹಾಸಿಕ ಗೆಲುವನ್ನು ಸಂಭ್ರಮದಿಂದ ಆಚರಿಸಿತು. ಇದರ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿವೆ. ಇದೇ ವೇಳೆ ಭಾರತ ತಂಡದೊಂದಿಗೆ ಪಾಕಿಸ್ತಾನ ತಂಡದ ಹೃದಯಸ್ಪರ್ಶಿ ವಿಡಿಯೋ ವೈರಲ್‌ ಆಗಿದ್ದು, ಪಾಕ್‌ ಚೆಸ್‌ ತಂಡದ ಆಟಗಾರರು ಭಾರತದ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದು ಸೌಹಾರ್ದತೆಯ ಸಂದೇಶವನ್ನು ಸಾರಿದ್ದಾರೆ.

ಚೆಸ್‌ ಪಂದ್ಯಾವಳಿ ಮುಗಿದ ನಂತರ ನಡೆಯುವ ಫೋಟೋ ಸೆಷನ್‌ ವೇಳೆ ಈ ಅಪರೂಪದ ದೃಶ್ಯ ಕಂಡು ಬಂದಿದ್ದು, ಭಾರತ ಚೆಸ್‌ ತಂಡದೊಂದಿಗೆ ಪಾಕ್‌ ತಂಡ ಕೂಡಾ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದು ಭಾರತದ ಗೆಲುವನ್ನು ಸಂಭ್ರಮಿಸಿದೆ. ಈ ಕುರಿತ ಪೋಸ್ಟ್‌ ಒಂದನ್ನು ChessbaseIndia ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಚೆಸ್‌ ಒಲಿಂಪಿಆಡ್‌ 2024 ರ ಚಾಂಪಿಯನ್‌ಗಳೊಂದಿಗೆ ಪಾಕಿಸ್ತಾನಿ ಚೆಸ್‌ ತಂಡ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಭಾರತ ತಂಡದ ಆಟಗಾರರೊಂದಿಗೆ ಪಾಕಿಸ್ತಾನಿ ಆಟಗಾರರು ತ್ರಿವರ್ಣ ಧ್ವಜವನ್ನು ಹಿಡಿದು ಫೋಟೋಗಳಿಗೆ ಪೋಸ್‌ ನೀಡುವ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ರೀಲ್ಸ್‌ಗಾಗಿ ಅರೆ ಬರೆ ಬಟ್ಟೆ ತೊಟ್ಟು ಬೀದಿ ಸುತ್ತಿದ ಯುವತಿ, ಆಕ್ರೋಶ ವ್ಯಕ್ತಪಡಿಸಿದ ಜನ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ದೃಶ್ಯ ನಿಜಕ್ಕೂ ತುಂಬಾ ಸುಂದರವಾಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇದು ಕನಸೇ ನನಸೇ ಎಂದು ತಿಳಿಯದುʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Fri, 27 September 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!