AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತಾಳಿ ಕಟ್ಟುವ ಪದ್ಧತಿ ಬದಲಿಗೆ ಸಂವಿಧಾನದ ಮೇಲೆ ಪ್ರಮಾಣ ಮಾಡಿ ವಿಶಿಷ್ಟವಾಗಿ ಮದುವೆಯಾದ ನವ ಜೋಡಿ

ಸಾಮಾನ್ಯವಾಗಿ ತಾಳಿ ಕಟ್ಟುವ, ಸಪ್ತಪದಿ ತುಳಿಯುವ ಹೀಗೆ ಶಾಸ್ತ್ರೋಕ್ತವಾಗಿ ಮದುವೆಗಳು ನಡೆಯುತ್ತವೆ. ಆದ್ರೆ ಇಲ್ಲೊಂದು ಜೋಡಿ ಈ ಎಲ್ಲಾ ಶಾಸ್ತ್ರ ಸಂಪ್ರದಾಯಗಳನ್ನು ಬದಿಗಿಟ್ಟು ಡಾ. ಅಂಬೇಡ್ಕರ್‌ ಅವರ ಭಾವಚಿತ್ರದ ಮುಂದೆ ಸಂವಿಧಾನದ ಮೇಲೆ ಪ್ರಮಾಣ ಮಾಡುವ ಮೂಲಕ ಸರಳವಾಗಿ ಮದುವೆಯಾಗಿದ್ದಾರೆ. ಈ ವಿಶಿಷ್ಟ ಮದುವೆಯ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral: ತಾಳಿ ಕಟ್ಟುವ ಪದ್ಧತಿ ಬದಲಿಗೆ ಸಂವಿಧಾನದ ಮೇಲೆ ಪ್ರಮಾಣ ಮಾಡಿ ವಿಶಿಷ್ಟವಾಗಿ ಮದುವೆಯಾದ ನವ ಜೋಡಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Dec 23, 2024 | 12:19 PM

Share

ಸಾಮಾನ್ಯವಾಗಿ ಎಲ್ಲರೂ ತಾಳಿ ಕಟ್ಟುವ, ಸಪ್ತಪದಿ ತುಳಿಯುವ ಸಾಂಪ್ರದಾಯಿಕ ಆಚರಣೆಗಳು ಮತ್ತು ಶಾಸ್ತ್ರಗಳನ್ನು ಪಾಲಿಸುವ ಮೂಲಕ ಶಾಸ್ತ್ರೋಕ್ತವಾಗಿ ಮದುವೆಯಾಗುತ್ತಾರೆ. ಇನ್ನೂ ಕೆಲವರು ಯಾವುದೇ ಆಡಂಬರ ಬೇಡವೆಂದು ಮಂತ್ರಮಾಂಗಲ್ಯದ ಮೂಲಕ ಸರಳವಾಗಿ ವಿವಾಹವಾಗುವವರೂ ಇದ್ದಾರೆ. ಆದ್ರೆ ಇಲ್ಲೊಂದು ಜೋಡಿ ಮಾತ್ರ ಸಂವಿಧಾನದ ಮೇಲೆ ಪ್ರಮಾಣ ಮಾಡುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು ಈ ಜೋಡಿ ಶಾಸ್ತ್ರ ಸಂಪ್ರದಾಯಗಳನ್ನು ಬದಿಗಿಟ್ಟು ಡಾ. ಅಂಬೇಡ್ಕರ್‌ ಅವರ ಭಾವಚಿತ್ರದ ಮುಂದೆ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಮದುವೆಯಾಗಿದ್ದಾರೆ. ಈ ವಿಶಿಷ್ಟ ಮದುವೆಯ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಛತ್ತೀಸ್‌ಗಢದ ಕಾಪು ಗ್ರಾಮ ಜೋಡಿಯೊಂದು ಸಂವಿದಾನದ ಮೇಲೆ ಪ್ರಮಾಣ ಮಾಡಿ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಶಾಸ್ತ್ರ, ಸಂಪ್ರದಾಯ, ಆಚರಣೆಗಳಿಗಿಂತ ಸಂವಿಧಾನದ ಮೇಲೆ ಹೆಚ್ಚಿನ ನಂಬಿಕೆಯನ್ನು ಹೊಂದಿರುವ ವರ ಎಮಾನ್‌ ಲಾಹ್ರೆ ಮತ್ತು ವಧು ಪ್ರತಿಮಾ ಲಾಹ್ರೆ ಅದ್ದೂರಿ ವೆಚ್ಚಗಳಿಗೆ ಕಡಿವಾಣ ಹಾಕಬೇಕೆನ್ನುವ ನಿಟ್ಟಿನಲ್ಲಿ ಡಾ. ಅಂಬೇಡ್ಕರ್‌ ಅವರ ಭಾವಚಿತ್ರದ ಮುಂದೆ ಸಂವಿಧಾನದ ಮೇಲೆ ಪ್ರಮಾಣ ಮಾಡುವ ಮೂಲಕ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆ ಹಾಲು ಕುಡಿಸಿದ ಮಹಿಳೆ; ವಿಡಿಯೋ ವೈರಲ್‌

ಇವರು ಹಣೆಗೆ ಸಿಂಧೂರ ಇಡುವ ಸಂಪ್ರದಾಯವನ್ನಾಗಲಿ ಅಥವಾ ತಾಳಿ ಕಟ್ಟುವಂತಹ ಪದ್ಧತಿಯನ್ನು ಪಾಲಿಸದೆ ಜೀವನ ಪರ್ಯಂತ ನಾವು ಒಬ್ಬರನ್ನೊಬ್ಬರು ಪರಸ್ಪರ ಬೆಂಬಲಿಸುತ್ತಾ ಜೊತೆಯಾಗಿರುತ್ತೇವೆ ಎಂದು ಸಂವಿಧಾನದ ಮೇಲೆ ಪ್ರಮಾಣ ಮಾಡುವ ಮೂಲಕ ಹಾಗೂ ಡಾ. ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪ್ರದಕ್ಷಿಣೆ ಹಾಕುವ ಮೂಲಕ ವಿಶಿಷ್ಟ ರೀತಿಯಲ್ಲಿ ಮದುವೆಯಾಗಿದ್ದಾರೆ. “ಅದ್ದೂರಿ ಮದುವೆ ಹಾಗೂ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕುಟುಂಬಸ್ಥರ ಒಪ್ಪಿಗೆಯೊಂದಿಗೆ ನಾವು ಹೀಗೆ ಸರಳವಾಗಿ ಮದುವೆಯಾಗಿದ್ದೇವೆ” ಎಂದು ವರ ಲಾಹ್ರೆ ಹೇಳಿಕೆ ನೀಡಿದ್ದಾರೆ. ಈ ಮದುವೆಯ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ