AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡಿಸುವುದಾಗಿ ನಂಬಿಸಿ 39 ಸಾವಿರ ರೂ.ಮೌಲ್ಯದ ಚಿಕನ್​ ತಿಂದ ಎಸ್ ಬಿಐ ಮ್ಯಾನೇಜರ್

ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ, ಎಸ್‌ಬಿಐ ಮ್ಯಾನೇಜರ್ ರೂ. 12 ಲಕ್ಷ ಸಾಲ ನೀಡುವುದಾಗಿ ನಂಬಿಸಿ ಕೋಳಿ ಫಾರಂ ಹೊಂದಿದ್ದ ರೈತನನ್ನು ಮೋಸ ಮಾಡಿದ್ದಾರೆ. ಸಾಲಕ್ಕೆ ಬದಲಾಗಿ ಪ್ರತಿದಿನ ಕೋಳಿ ಮಾಂಸ ನೀಡುವಂತೆ ರೈತನನ್ನು ಒತ್ತಾಯಿಸಿ, 39,000 ರೂ. ಮೌಲ್ಯದ ಕೋಳಿ ಮಾಂಸವನ್ನು ಪಡೆದಿದ್ದಾರೆ. ಮೋಸ ತಿಳಿದ ರೈತ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಾಲ ಕೊಡಿಸುವುದಾಗಿ ನಂಬಿಸಿ 39 ಸಾವಿರ ರೂ.ಮೌಲ್ಯದ ಚಿಕನ್​ ತಿಂದ ಎಸ್ ಬಿಐ ಮ್ಯಾನೇಜರ್
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Dec 11, 2024 | 3:35 PM

Share

ಛತ್ತೀಸ್‌ಗಢ: ಕೋಳಿ ಫಾರಂ ಶುರುಮಾಡಲು 12 ಲಕ್ಷ ರೂ. ಸಾಲ ಕೊಡಿಸುವುದಾಗಿ ನಂಬಿಸಿ ಎಸ್ ಬಿಐ ಮ್ಯಾನೇಜರ್ ಮೋಸ ಮಾಡಿರುವ ಘಟನೆ ಛತ್ತೀಸ್‌ಗಢ ರಾಜ್ಯದ ಬಿಲಾಸ್‌ಪುರ ಜಿಲ್ಲೆಯ ಮಸ್ತೂರಿ ಪಟ್ಟಣದಲ್ಲಿ ನಡೆದಿದೆ. ಸಾಲ ಕೊಡಿಸುವ ಭರವಸೆ ನೀಡಿದ್ದ ಮ್ಯಾನೇಜರ್​ಗರೆ ಪ್ರತಿದಿನ ಕೋಳಿ ಮಾಂಸ ತಂದುಕೊಡುತ್ತಿದ್ದ ರೈತನಿಗೆ ಇದೀಗ ಮೋಸದ ಬಗ್ಗೆ ತಿಳಿದಿದ್ದು, ಮ್ಯಾನೇಜರ್ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾನೆ. ಸದ್ಯ ಈ ಘಟನೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

ವರದಿಗಳ ಪ್ರಕಾರ, ಮಸ್ತೂರಿ ಪಟ್ಟಣದ ರೈತ ರೂಪಚಂದ್ ಮನ್ಹರ್ ಎಂಬಾತ ಕೋಳಿ ಫಾರಂ ಹೊಂದಿದ್ದಾನೆ. ತನ್ನ ವ್ಯವಹಾರವನ್ನು ಮತ್ತಷ್ಟು ವಿಸ್ತರಿಸಲು ಬಯಸಿದ ರೈತ ಸ್ಥಳೀಯ ಎಸ್‌ಬಿಐ ಶಾಖೆಯ ವ್ಯವಸ್ಥಾಪಕರನ್ನು ಸಂಪರ್ಕಿಸಿ ರೂ.12 ಲಕ್ಷ ಸಾಲವನ್ನು ಕೇಳಿದ್ದಾನೆ. ಸಾಲ ನೀಡುವುದಾಗಿ ಭರವಸೆ ನೀಡಿದ್ದ ಮ್ಯಾನೇಜರ್ ಪ್ರತೀ ದಿನ ಬ್ಯಾಂಕ್​ಗೆ ಕೋಳಿ ಮಾಂಸ ತಂದುಕೊಡುವಂತೆ ಹೇಳಿದ್ದಾನೆ.

ಇದನ್ನೂ ಓದಿ: Year Ender 2024: ಈ ವರ್ಷ ಗೂಗಲ್​​​ನಲ್ಲಿ ಅತೀ ಹೆಚ್ಚು ಹುಡುಕಲ್ಪಟ್ಟ ಹೆಸರು ಯಾರದ್ದು ಗೊತ್ತಾ? ಕ್ರೀಡಾಪಟುಗಳೇ ಮೇಲುಗೈ

ಅದರಂತೆ ಸಾಲ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಮನ್ಹರ್ ಪ್ರತಿದಿನ ಬ್ಯಾಂಕ್ ಮ್ಯಾನೇಜರ್​​ಗೆ ಕೋಳಿ ಮಾಂಸ ತರುತ್ತಿದ್ದ. ಜೊತೆಗೆ ರೈತ ಸಾಲಕ್ಕೆ 10 ಪರ್ಸೆಂಟ್ ಕಮಿಷನ್ ಕೂಡ ನೀಡಿದ್ದರು. ಸಾಲ ಪಡೆಯಲು ಪ್ರತಿ ಶನಿವಾರ ಬೇರೆ ಕಡೆಯಿಂದ ಕೋಳಿ ಖರೀದಿಸುವುದು ರೈತನಿಗೆ ದಿನಚರಿಯಾಗಿತ್ತು. ಹಾಗಾಗಿ 39 ಸಾವಿರ ರೂ. ಮೌಲ್ಯದ ಕೋಳಿ ಮಾಂಸವನ್ನು ಮ್ಯಾನೇಜರ್ ತಿಂದು ಹಾಕಿರುವುದು ತಿಳಿದುಬಂದಿದೆ.

ಆದರೆ, ಬ್ಯಾಂಕ್ ಮ್ಯಾನೇಜರ್ ಸಾಲ ಕೊಡದೆ, ಮೋಸ ಮಾಡಿರುವುದನ್ನು ಮನಗಂಡು ರೈತ ಪೊಲೀಸರಿಗೆ ದೂರು ನೀಡಿದ್ದಾನೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಎಸ್‌ಬಿಐ ಶಾಖೆ ಎದುರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:24 pm, Wed, 11 December 24

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!