AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾಡಿನಿಂದ ನಾಡಿಗೆ ಬಂದ ಕರಡಿಗೆ ಕೂಲ್ ಡ್ರಿಂಕ್ಸ್‌ ಕುಡಿಸಿದ ಯುವಕ; ವಿಡಿಯೋ ವೈರಲ್‌

ಈ ರೀಲ್ಸ್‌ಗಾಗಿ ಕೆಲವೊಬ್ಬರು ಎಂತಹ ದುಸ್ಸಾಹಸಕ್ಕೂ ಬೇಕಾದರೂ ಕೈ ಹಾಕುತ್ತಾರೆ. ಇಂತಹ ಹುಚ್ಚಾಟಗಳ ಸಾಕಷ್ಟು ಉದಾಹರಣೆಗಳನ್ನು ನೀವು ಸಹ ನೋಡಿರಬಹುದು. ಇದೀಗ ಇಂತಹದ್ದೇ ದೃಶ್ಯವೊಂದು ವೈರಲ್‌ ಆಗಿದ್ದು, ರೀಲ್ಸ್‌ ರಾಜನೊಬ್ಬ ಭಂಡ ಧೈರ್ಯದಿಂದ ಕಾಡಿನಿಂದ ನಾಡಿಗೆ ಬಂದ ಕರಡಿಗೆ ಕುಡಿಯಲು ಕೂಲ್‌ ಡ್ರಿಂಕ್ಸ್‌ ಕೊಟ್ಟಿದ್ದಾನೆ. ಯುವಕನ ಈ ಹುಚ್ಚಾಟಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Video: ಕಾಡಿನಿಂದ ನಾಡಿಗೆ ಬಂದ ಕರಡಿಗೆ ಕೂಲ್ ಡ್ರಿಂಕ್ಸ್‌ ಕುಡಿಸಿದ ಯುವಕ; ವಿಡಿಯೋ ವೈರಲ್‌
ಕರಡಿಗೆ ಕೂಲ್‌ ಡ್ರಿಂಕ್ಸ್‌ ಕುಡಿಸಿದ ಯುವಕImage Credit source: Social Media
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 13, 2025 | 7:08 PM

Share

ಅರಣ್ಯ ನಾಶದ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿನತ್ತ ಆಹಾರ ಅರಸುತ್ತಾ ಬರುವಂತಹದ್ದು ಸಾಮಾನ್ಯವಾಗಿ ಬಿಟ್ಟಿದೆ. ಮಾನವ ಕಾಡುಪ್ರಾಣಿ ಸಂಘರ್ಷವೂ ಹೆಚ್ಚಾಗಿದೆ. ಹೀಗೆ ಬರುವ ಪ್ರಾಣಿಗಳು ಮನುಷ್ಯರ ಮೇಲೆ ಅಟ್ಯಾಕ್‌ ಮಾಡುವ ಸಂಭವವೂ ಇರುತ್ತದೆ. ಹಾಗಾಗಿ ಕಾಡು ಪ್ರಾಣಿಗಳತ್ತ ಯಾರು ಸುಳಿಯಲು ಕೂಡ ಹೋಗುವುದಿಲ್ಲ. ಅಂತದ್ರಲ್ಲಿ ಛತ್ತೀಸ್‌ಗಢದಲ್ಲೊಬ್ಬ ಯುವಕ ರೀಲ್ಸ್‌ ಮಾಡುವ ಸಲುವಾಗಿ ಕಾಡು ಕರಡಿಗೆ ಕೂಲ್‌ ಡ್ರಿಂಕ್ಸ್‌ (man feed cool drinks to wild bear) ಕುಡಿಸಿದ್ದಾನೆ. ಈ ದೃಶ್ಯ ತಮಾಷೆಯಾಗಿ ಕಂಡುಬಂದರೂ ವನ್ಯಜೀವಿ ತಜ್ಞರು ಮತ್ತು ಪರಿಸರವಾದಿಗಳು ಅಂತಹ ನಡವಳಿಕೆ ಅಪಾಯಕಾರಿ ಮತ್ತು ಜೀವಕ್ಕೆ ಸಂಚಕಾರಕ ಎಂದು ಎಚ್ಚರಿಸಿದ್ದಾರೆ. ಕರಡಿಗಳು  ಪರಭಕ್ಷಕಗಳಾಗಿದ್ದು, ಇವುಗಳು ದಾಳಿ ನಡೆಸುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಕರಡಿಗೆ ಕೂಲ್‌ ಡ್ರಿಂಕ್ಸ್‌ ಕುಡಿಸಿದ ಯುವಕ:

ಛತ್ತೀಸ್‌ಗಢದ ಕಾಂಕೇರ್ ಜಿಲ್ಲೆಯಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಕಾಡಿನಿಂದ ನಾಡಿನತ್ತ ಬಂದಂತಹ ಕರಡಿಗೆ ಯುವಕನೊಬ್ಬ ಮಾಜಾ ಕೂಲ್‌ ಡ್ರಿಂಕ್ಸ್‌ ಕುಡಿಸಿದ್ದಾನೆ.  ರೀಲ್ಸ್‌ ಮಾಡುವ ಸಲುವಾಗಿ ಆ ಯುವಕ ಈ ರೀತಿ ಹುಚ್ಚಾಟವನ್ನು ಮೆರೆದಿದ್ದಾನೆ. ಈ ದೃಶ್ಯ ವೈರಲ್‌ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ
Image
ಆಂಧ್ರದಲ್ಲಿ ಕುತ್ತಿಗೆಗೆ ಹಾವು ಸುತ್ತಿಕೊಂಡು ಕುಡುಕನ ಹೈಡ್ರಾಮಾ
Image
ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡಿದ ಯುವಕ,
Image
ಈ ಪ್ರೇಮಿಗಳಿಗೆ ರೈಲೇ ಬೆಡ್​​​ ರೂಮ್​​ , ಅಪ್ಪಿಕೊಂಡು ಮುದ್ದಾಡಿದ ಜೋಡಿಗಳು
Image
ನೆರೆಮನೆಯ ಯುವಕನೊಂದಿಗೆ ಓಡಿಹೋದ ಒಂದೇ ಮನೆಯ ಸೊಸೆಯಂದಿರು

ಛತ್ತೀಸ್‌ಗಢದ ಅರಣ್ಯ ಇಲಾಖೆ ಈ ವೀಡಿಯೊವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಈ ವಿಡಿಯೋದಲ್ಲಿ ಕಾಣಿಸಿರುವ ಯುವಕನನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಆತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ, ಏಕೆಂದರೆ ಆತನ ನಡೆಯಿಂದ ವನ್ಯಜೀವಿ ಸುರಕ್ಷತಾ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಪರಿಗಣಿಸಲಾಗಿದೆ.

ವೈರಲ್‌  ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು ಕುಷ್ಬು (Khushbu_journo) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವಕನೊಬ್ಬ ಭಂಡ ಧೈರ್ಯದಲ್ಲಿ ಕಾಡು ಕರಡಿಗೆ ಕೂಲ್‌ ಡ್ರಿಂಕ್ಸ್‌ ನೀಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಯುವಕ ಕೊಟ್ಟ ತಂಪು ಪಾನೀಯವನ್ನು ಕರಡಿ ಗಟಗಟನೆ ಕುಡಿದಿದೆ.

ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡಿದ ಯುವಕ, ಮುಂದೇನಾಯ್ತು ನೋಡಿ

ಯುವಕನ ಹುಚ್ಚಾಟದಿಂದ ಆತನ ಪ್ರಾಣಕ್ಕೂ ಅಪಾಯ ಮಾತ್ರವಲ್ಲದೆ, ಆತ ನೀಡಿದ ಕೂಲ್‌ ಡ್ರಿಂಕ್ಸ್‌ ಪ್ರಾಣಿಗಳ ಆರೋಗ್ಯಕ್ಕೂ ತುಂಬಾನೇ ಅಪಾಯಕಾರಿ. ಏಕೆಂದರೆ ತಂಪು ಪಾನೀಯಗಳು ಸಕ್ಕರೆ, ಕೆಫೀನ್ ಇತ್ಯಾದಿ ಅನಾರೋಗ್ಯಕರ ಅಂಶಗಳಿಂದ ತುಂಬಿರುತ್ತವೆ. ಇವುಗಳನ್ನು ಜೀರ್ಣಿಸಿಕೊಳ್ಳಲು ಕಾಡು ಪ್ರಾಣಿಗಳಿಗಳಿಗೆ ಕಷ್ಟಸಾಧ್ಯ. ಹಾಗಾಗಿ ಯುವಕನ ಈ ನಡೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:50 pm, Sat, 13 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ