AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?

ಇತ್ತೀಚಿಗೆ ಮನುಷ್ಯನಲ್ಲಿ ಮಾನವೀಯತೆ ಎಂಬುದು ಸತ್ತು ಹೋಗಿ ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾನೆ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದಿದ್ದಾನೆ. ಈತ ಒಂದು ಸಣ್ಣ ಬಿಸ್ಕೆಟ್‌ ಪ್ಯಾಕೆಟ್‌ ಕದ್ದನೆಂದು ಕ್ಯಾಂಟೀನ್‌ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ.

Video: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 29, 2024 | 3:41 PM

Share

ಇತ್ತೀಚಿನ ದಿನಗಳಲ್ಲಿ ಮನುಷ್ಯನಲ್ಲಿ ಮಾನವೀಯತೆ ಎಂಬುದು ಮರೆಯಾಗುತ್ತಿದೆ. ಕಷ್ಟದಲ್ಲಿರುವವರಿಗೆ ಸಹಾಯವನ್ನೂ ಮಾಡದೇ, ದಯೆಯನ್ನೂ ತೋರದೆ ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾನೆ. ಇದೀಗ ಅಂತಹದೇ ಅಮಾನವೀಯ ಘಟನೆಯೊಂದು ನಡೆದಿದ್ದು, ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದು ತಿಂದಿದ್ದಾನೆ. ಈತ ಒಂದು ಸಣ್ಣ ಬಿಸ್ಕೆಟ್‌ ಪ್ಯಾಕೆಟ್‌ ಕದ್ದನೆಂದು ಕ್ಯಾಂಟೀನ್‌ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಕ್ಯಾಂಟೀನ್‌ ನೌಕರರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಅಮಾನವೀಯ ಘಟನೆ ಛತ್ತೀಸ್‌ಗಢದ ರಾಯ್‌ಪುರದ ರೈಲ್ವೇ ನಿಲ್ದಾಣದಲ್ಲಿ ನಡೆದಿದ್ದು, ರೈಲ್ವೆ ಕ್ಯಾಂಟೀನ್‌‌ನಲ್ಲಿ ಬಿಸ್ಕೆಟ್‌ ಕದ್ದನೆಂಬ ಆರೋಪದ ಮೇಲೆ ಯುವಕನಿಗೆ ಕ್ಯಾಂಟೀನ್‌ ನೌಕರರು ಮನಬಂದಂತೆ ಥಳಿಸಿದ್ದಾರೆ. ಮಯಾಂಕ್‌ ತಿವಾರಿ ಎಂಬ ಯುವಕ ಹಸಿವು ನೀಗಿಸಲು ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದಿಯಲು ಯತ್ನಿಸುತ್ತಿದ್ದಾಗ ಕ್ಯಾಂಟೀನ್‌ ಮಾಲೀಕನ ಕೈಗೆ ಸಿಕ್ಕಿಬೀಳುತ್ತಾನೆ. ಇದರಿಂದ ಕೋಪಗೊಂಡ ಮಾಲೀಕ ತನ್ನ ನೌಕರರ ಜೊತೆ ಸೇರಿ ಆ ಯುವಕನಿಗೆ ಮನಬಂದಂತೆ ಥಳಿಸಿದ್ದು ಮಾತ್ರವಲ್ಲದೆ, ಆತನ ಕಾಲಿಗೆ ಬಟ್ಟೆ ಕಟ್ಟಿ ಎಳೆದೊಯ್ದಿದ್ದಾರೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕ್ಯಾಂಟೀನ್‌ ಮಾಲೀಕ ಅಂಕಿತ್‌ ಮಿಶ್ರಾ, ನೌಕರರಾದ ಅಶುತೋಷ್‌ ಶುಕ್ಲಾ, ಸುನಿಲ್‌ ಶುಕ್ಲಾ ಮತ್ತು ಬಸಂತ್‌ ಪ್ರಧಾನ್‌ನನ್ನು ಬಂಧಿಸಲಾಗಿದೆ. ಮತ್ತು ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವಾಗ ಈ ಘಟನೆಯನ್ನು ನೋಡಿಯೂ ನಿರ್ಲಕ್ಷ್ಯ ವಹಿಸಿದ ಆರ್‌ಪಿಎಫ್‌ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು ಪ್ರಿಯಾ ಸಿಂಗ್‌ (priyarajputlive) ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದ ಯುವಕನನ್ನು ಮಾಲೀಕರು ಅಮಾನುಷವಾಗಿ ಥಳಿಸಿ ಆತನ ಕಾಲಿಗೆ ಬಟ್ಟೆ ಕಟ್ಟಿ ಎಳೆದೊಯ್ಯುವ ಮೂಲಕ ಅಮಾನವೀಯವಾಗಿ ವರ್ತಿಸಿದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಧವೆ, ವಿಚ್ಛೇದಿತ ಮಹಿಳೆಯರೇ ಈತನ ಟಾರ್ಗೆಟ್;‌ ಶ್ರೀಮಂತಿಕೆಯ ಆಸೆಗೆ 9 ವರ್ಷದಲ್ಲಿ 20 ಮದುವೆ

ಜುಲೈ 26 ರಂದು ಹಂಚಿಕೊಳ್ಳಲಾದ ಈ ವಿಡಿಯೋ 14 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ʼನಿಜವಾಗಿಯೂ ಮಾನವೀಯತೆ ಸತ್ತು ಹೋಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್