Video: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?

ಇತ್ತೀಚಿಗೆ ಮನುಷ್ಯನಲ್ಲಿ ಮಾನವೀಯತೆ ಎಂಬುದು ಸತ್ತು ಹೋಗಿ ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾನೆ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದಿದ್ದಾನೆ. ಈತ ಒಂದು ಸಣ್ಣ ಬಿಸ್ಕೆಟ್‌ ಪ್ಯಾಕೆಟ್‌ ಕದ್ದನೆಂದು ಕ್ಯಾಂಟೀನ್‌ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ.

Video: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?
ವೈರಲ್​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 29, 2024 | 3:41 PM

ಇತ್ತೀಚಿನ ದಿನಗಳಲ್ಲಿ ಮನುಷ್ಯನಲ್ಲಿ ಮಾನವೀಯತೆ ಎಂಬುದು ಮರೆಯಾಗುತ್ತಿದೆ. ಕಷ್ಟದಲ್ಲಿರುವವರಿಗೆ ಸಹಾಯವನ್ನೂ ಮಾಡದೇ, ದಯೆಯನ್ನೂ ತೋರದೆ ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾನೆ. ಇದೀಗ ಅಂತಹದೇ ಅಮಾನವೀಯ ಘಟನೆಯೊಂದು ನಡೆದಿದ್ದು, ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದು ತಿಂದಿದ್ದಾನೆ. ಈತ ಒಂದು ಸಣ್ಣ ಬಿಸ್ಕೆಟ್‌ ಪ್ಯಾಕೆಟ್‌ ಕದ್ದನೆಂದು ಕ್ಯಾಂಟೀನ್‌ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಕ್ಯಾಂಟೀನ್‌ ನೌಕರರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಅಮಾನವೀಯ ಘಟನೆ ಛತ್ತೀಸ್‌ಗಢದ ರಾಯ್‌ಪುರದ ರೈಲ್ವೇ ನಿಲ್ದಾಣದಲ್ಲಿ ನಡೆದಿದ್ದು, ರೈಲ್ವೆ ಕ್ಯಾಂಟೀನ್‌‌ನಲ್ಲಿ ಬಿಸ್ಕೆಟ್‌ ಕದ್ದನೆಂಬ ಆರೋಪದ ಮೇಲೆ ಯುವಕನಿಗೆ ಕ್ಯಾಂಟೀನ್‌ ನೌಕರರು ಮನಬಂದಂತೆ ಥಳಿಸಿದ್ದಾರೆ. ಮಯಾಂಕ್‌ ತಿವಾರಿ ಎಂಬ ಯುವಕ ಹಸಿವು ನೀಗಿಸಲು ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದಿಯಲು ಯತ್ನಿಸುತ್ತಿದ್ದಾಗ ಕ್ಯಾಂಟೀನ್‌ ಮಾಲೀಕನ ಕೈಗೆ ಸಿಕ್ಕಿಬೀಳುತ್ತಾನೆ. ಇದರಿಂದ ಕೋಪಗೊಂಡ ಮಾಲೀಕ ತನ್ನ ನೌಕರರ ಜೊತೆ ಸೇರಿ ಆ ಯುವಕನಿಗೆ ಮನಬಂದಂತೆ ಥಳಿಸಿದ್ದು ಮಾತ್ರವಲ್ಲದೆ, ಆತನ ಕಾಲಿಗೆ ಬಟ್ಟೆ ಕಟ್ಟಿ ಎಳೆದೊಯ್ದಿದ್ದಾರೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕ್ಯಾಂಟೀನ್‌ ಮಾಲೀಕ ಅಂಕಿತ್‌ ಮಿಶ್ರಾ, ನೌಕರರಾದ ಅಶುತೋಷ್‌ ಶುಕ್ಲಾ, ಸುನಿಲ್‌ ಶುಕ್ಲಾ ಮತ್ತು ಬಸಂತ್‌ ಪ್ರಧಾನ್‌ನನ್ನು ಬಂಧಿಸಲಾಗಿದೆ. ಮತ್ತು ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವಾಗ ಈ ಘಟನೆಯನ್ನು ನೋಡಿಯೂ ನಿರ್ಲಕ್ಷ್ಯ ವಹಿಸಿದ ಆರ್‌ಪಿಎಫ್‌ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು ಪ್ರಿಯಾ ಸಿಂಗ್‌ (priyarajputlive) ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದ ಯುವಕನನ್ನು ಮಾಲೀಕರು ಅಮಾನುಷವಾಗಿ ಥಳಿಸಿ ಆತನ ಕಾಲಿಗೆ ಬಟ್ಟೆ ಕಟ್ಟಿ ಎಳೆದೊಯ್ಯುವ ಮೂಲಕ ಅಮಾನವೀಯವಾಗಿ ವರ್ತಿಸಿದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಧವೆ, ವಿಚ್ಛೇದಿತ ಮಹಿಳೆಯರೇ ಈತನ ಟಾರ್ಗೆಟ್;‌ ಶ್ರೀಮಂತಿಕೆಯ ಆಸೆಗೆ 9 ವರ್ಷದಲ್ಲಿ 20 ಮದುವೆ

ಜುಲೈ 26 ರಂದು ಹಂಚಿಕೊಳ್ಳಲಾದ ಈ ವಿಡಿಯೋ 14 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ʼನಿಜವಾಗಿಯೂ ಮಾನವೀಯತೆ ಸತ್ತು ಹೋಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ