AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?

ಇತ್ತೀಚಿಗೆ ಮನುಷ್ಯನಲ್ಲಿ ಮಾನವೀಯತೆ ಎಂಬುದು ಸತ್ತು ಹೋಗಿ ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾನೆ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದಿದ್ದಾನೆ. ಈತ ಒಂದು ಸಣ್ಣ ಬಿಸ್ಕೆಟ್‌ ಪ್ಯಾಕೆಟ್‌ ಕದ್ದನೆಂದು ಕ್ಯಾಂಟೀನ್‌ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ.

Video: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 29, 2024 | 3:41 PM

Share

ಇತ್ತೀಚಿನ ದಿನಗಳಲ್ಲಿ ಮನುಷ್ಯನಲ್ಲಿ ಮಾನವೀಯತೆ ಎಂಬುದು ಮರೆಯಾಗುತ್ತಿದೆ. ಕಷ್ಟದಲ್ಲಿರುವವರಿಗೆ ಸಹಾಯವನ್ನೂ ಮಾಡದೇ, ದಯೆಯನ್ನೂ ತೋರದೆ ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾನೆ. ಇದೀಗ ಅಂತಹದೇ ಅಮಾನವೀಯ ಘಟನೆಯೊಂದು ನಡೆದಿದ್ದು, ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದು ತಿಂದಿದ್ದಾನೆ. ಈತ ಒಂದು ಸಣ್ಣ ಬಿಸ್ಕೆಟ್‌ ಪ್ಯಾಕೆಟ್‌ ಕದ್ದನೆಂದು ಕ್ಯಾಂಟೀನ್‌ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಕ್ಯಾಂಟೀನ್‌ ನೌಕರರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಅಮಾನವೀಯ ಘಟನೆ ಛತ್ತೀಸ್‌ಗಢದ ರಾಯ್‌ಪುರದ ರೈಲ್ವೇ ನಿಲ್ದಾಣದಲ್ಲಿ ನಡೆದಿದ್ದು, ರೈಲ್ವೆ ಕ್ಯಾಂಟೀನ್‌‌ನಲ್ಲಿ ಬಿಸ್ಕೆಟ್‌ ಕದ್ದನೆಂಬ ಆರೋಪದ ಮೇಲೆ ಯುವಕನಿಗೆ ಕ್ಯಾಂಟೀನ್‌ ನೌಕರರು ಮನಬಂದಂತೆ ಥಳಿಸಿದ್ದಾರೆ. ಮಯಾಂಕ್‌ ತಿವಾರಿ ಎಂಬ ಯುವಕ ಹಸಿವು ನೀಗಿಸಲು ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದಿಯಲು ಯತ್ನಿಸುತ್ತಿದ್ದಾಗ ಕ್ಯಾಂಟೀನ್‌ ಮಾಲೀಕನ ಕೈಗೆ ಸಿಕ್ಕಿಬೀಳುತ್ತಾನೆ. ಇದರಿಂದ ಕೋಪಗೊಂಡ ಮಾಲೀಕ ತನ್ನ ನೌಕರರ ಜೊತೆ ಸೇರಿ ಆ ಯುವಕನಿಗೆ ಮನಬಂದಂತೆ ಥಳಿಸಿದ್ದು ಮಾತ್ರವಲ್ಲದೆ, ಆತನ ಕಾಲಿಗೆ ಬಟ್ಟೆ ಕಟ್ಟಿ ಎಳೆದೊಯ್ದಿದ್ದಾರೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕ್ಯಾಂಟೀನ್‌ ಮಾಲೀಕ ಅಂಕಿತ್‌ ಮಿಶ್ರಾ, ನೌಕರರಾದ ಅಶುತೋಷ್‌ ಶುಕ್ಲಾ, ಸುನಿಲ್‌ ಶುಕ್ಲಾ ಮತ್ತು ಬಸಂತ್‌ ಪ್ರಧಾನ್‌ನನ್ನು ಬಂಧಿಸಲಾಗಿದೆ. ಮತ್ತು ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವಾಗ ಈ ಘಟನೆಯನ್ನು ನೋಡಿಯೂ ನಿರ್ಲಕ್ಷ್ಯ ವಹಿಸಿದ ಆರ್‌ಪಿಎಫ್‌ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಮತ್ತು ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು ಪ್ರಿಯಾ ಸಿಂಗ್‌ (priyarajputlive) ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದ ಯುವಕನನ್ನು ಮಾಲೀಕರು ಅಮಾನುಷವಾಗಿ ಥಳಿಸಿ ಆತನ ಕಾಲಿಗೆ ಬಟ್ಟೆ ಕಟ್ಟಿ ಎಳೆದೊಯ್ಯುವ ಮೂಲಕ ಅಮಾನವೀಯವಾಗಿ ವರ್ತಿಸಿದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿಧವೆ, ವಿಚ್ಛೇದಿತ ಮಹಿಳೆಯರೇ ಈತನ ಟಾರ್ಗೆಟ್;‌ ಶ್ರೀಮಂತಿಕೆಯ ಆಸೆಗೆ 9 ವರ್ಷದಲ್ಲಿ 20 ಮದುವೆ

ಜುಲೈ 26 ರಂದು ಹಂಚಿಕೊಳ್ಳಲಾದ ಈ ವಿಡಿಯೋ 14 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ʼನಿಜವಾಗಿಯೂ ಮಾನವೀಯತೆ ಸತ್ತು ಹೋಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​