AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್ ಶಾಪ್​ನಲ್ಲಿ ಕಾಗೆಯ ಕಾಲನ್ನು ಹಗ್ಗದಿಂದ ಕಟ್ಟಿದ ಮಾಲೀಕನಿಗೆ ಬುದ್ಧಿ ಕಲಿಸಿದ ಕಾಗೆಗಳು; ವಿಡಿಯೋ ವೈರಲ್

ಕಾಗೆಯನ್ನು ಹಗ್ಗದಿಂದ ಕಟ್ಟಿಹಾಕುತ್ತಿದ್ದಂತೆ ಬೇರೆ ಕಾಗೆಗಳು ಆ ಕಾಗೆಯನ್ನು ಬಿಡಿಸಲು ಚಿಕನ್ ಶಾಪ್ ಬಳಿ ಬಂದು ಕೂಗಲಾರಂಭಿಸಿವೆ. ಇದರಿಂದ ಆತಂಕಕ್ಕೀಡಾದ ಮಾಲೀಕ ತಾನು ಕಟ್ಟಿಹಾಕಿದ ಕಾಗೆಯನ್ನು ಬಿಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.

ಚಿಕನ್ ಶಾಪ್​ನಲ್ಲಿ ಕಾಗೆಯ ಕಾಲನ್ನು ಹಗ್ಗದಿಂದ ಕಟ್ಟಿದ ಮಾಲೀಕನಿಗೆ ಬುದ್ಧಿ ಕಲಿಸಿದ ಕಾಗೆಗಳು; ವಿಡಿಯೋ ವೈರಲ್
ಕಾಗೆ
ಸುಷ್ಮಾ ಚಕ್ರೆ
|

Updated on: Jul 18, 2024 | 3:15 PM

Share

ತಾಟಿಪಾಕ: ಆಂಧ್ರಪ್ರದೇಶದ ಅಂಬೇಡ್ಕರ್ ಕೋಣಸೀಮಾ ಜಿಲ್ಲೆಯ ತಾಟಿಪಾಕದ ಮಾರುಕಟ್ಟೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಚಿಕನ್ ಶಾಪ್ ಮಾಲೀಕನೊಬ್ಬ ಅಮಾಯಕ ಕಾಗೆಯನ್ನು ಹಗ್ಗದಿಂದ ಕಟ್ಟಿ ಹಾಕಿರುವ ಘಟನೆ ನಡೆದಿದೆ. ದಿನವೂ ಕಾಗೆಯ ಎಡೆಬಿಡದ ಕಾಟದಿಂದ ಸಿಟ್ಟಿಗೆದ್ದ ಅಂಗಡಿಯ ಮಾಲೀಕ ಆ ಕಾಗೆಯನ್ನು ಸುಮ್ಮನಾಗಿಸಲು ಹಗ್ಗದಿಂದ ಕಟ್ಟಿಹಾಕಿದ್ದಾನೆ. ಇದಾದ ನಂತರ ಹೊಸ ಸಮಸ್ಯೆ ಪ್ರಾರಂಭವಾಯಿತು.

ಈ ಘಟನೆಯ ವೀಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಾಗೆಯ ಸಂಕಟದ ಕೂಗನ್ನು ಕೇಳಿದ ಇತರೆ ಕಾಗೆಗಳು ಸ್ವಲ್ಪ ಸಮಯದೊಳಗೆ ಮಾರುಕಟ್ಟೆಯಲ್ಲಿ ಜಮಾಯಿಸಿ, ಜೋರಾಗಿ ಒಕ್ಕೊರಲಿನಿಂದ ಕೂಗಲಾರಂಭಿಸಿದವು. ಕಾ ಕಾ ಎಂಬ ಕಾಗೆಗಳು ಕಿವಿಗಡಚಿಕ್ಕುವ ಕೂಗನ್ನು ಕೇಳಿ ಎಲ್ಲ ವ್ಯಾಪಾರಿಗಳು ಗಲಾಟೆ ಮಾಡಿದರು. ಇದರಿಂದ ಇತರ ವ್ಯಾಪಾರಿಗಳು ಮತ್ತು ಮಾರುಕಟ್ಟೆಗೆ ಹೋಗುವವರು ಸಂಕಷ್ಟದ ಸ್ಥಿತಿಯಲ್ಲಿ ಸಿಲುಕಿದರು.

ಇದನ್ನೂ ಓದಿ: Viral Video: ಕೇರಳದ ದೇವಾಲಯಕ್ಕೆ ಸೀರೆಯುಟ್ಟ ವಿದೇಶಿ ಮಹಿಳೆಗೆ ನಿರ್ಬಂಧ; ವಿಡಿಯೋ ವೈರಲ್

ಈ ಕರ್ಕಶ ಶಬ್ದವನ್ನು ಸಹಿಸಲಾಗದೆ, ಇತರ ಅಂಗಡಿಯವರು ಆ ಕಾಗೆಯನ್ನು ಬಿಡುವಂತೆ ಚಿಕನ್ ಅಂಗಡಿಯ ಮಾಲೀಕರಿಗೆ ಮನವಿ ಮಾಡಿದರು. ಕೊನೆಗೂ ಚಿಕನ್ ಶಾಪ್ ಮಾಲೀಕನಿಗೆ ಕಾಗೆಯನ್ನು ಬಿಡಿಸಿ ಬಿಡದೆ ಬೇರೆ ದಾರಿ ಇರಲಿಲ್ಲ. ಹೀಗಾಗಿ, ತಾನು ಕಟ್ಟಿಹಾಕಿದ ಕಾಗೆಯನ್ನು ಬಿಟ್ಟು ಕಳಿಸಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ