AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್ ಶಾಪ್​ನಲ್ಲಿ ಕಾಗೆಯ ಕಾಲನ್ನು ಹಗ್ಗದಿಂದ ಕಟ್ಟಿದ ಮಾಲೀಕನಿಗೆ ಬುದ್ಧಿ ಕಲಿಸಿದ ಕಾಗೆಗಳು; ವಿಡಿಯೋ ವೈರಲ್

ಕಾಗೆಯನ್ನು ಹಗ್ಗದಿಂದ ಕಟ್ಟಿಹಾಕುತ್ತಿದ್ದಂತೆ ಬೇರೆ ಕಾಗೆಗಳು ಆ ಕಾಗೆಯನ್ನು ಬಿಡಿಸಲು ಚಿಕನ್ ಶಾಪ್ ಬಳಿ ಬಂದು ಕೂಗಲಾರಂಭಿಸಿವೆ. ಇದರಿಂದ ಆತಂಕಕ್ಕೀಡಾದ ಮಾಲೀಕ ತಾನು ಕಟ್ಟಿಹಾಕಿದ ಕಾಗೆಯನ್ನು ಬಿಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.

ಚಿಕನ್ ಶಾಪ್​ನಲ್ಲಿ ಕಾಗೆಯ ಕಾಲನ್ನು ಹಗ್ಗದಿಂದ ಕಟ್ಟಿದ ಮಾಲೀಕನಿಗೆ ಬುದ್ಧಿ ಕಲಿಸಿದ ಕಾಗೆಗಳು; ವಿಡಿಯೋ ವೈರಲ್
ಕಾಗೆ
ಸುಷ್ಮಾ ಚಕ್ರೆ
|

Updated on: Jul 18, 2024 | 3:15 PM

Share

ತಾಟಿಪಾಕ: ಆಂಧ್ರಪ್ರದೇಶದ ಅಂಬೇಡ್ಕರ್ ಕೋಣಸೀಮಾ ಜಿಲ್ಲೆಯ ತಾಟಿಪಾಕದ ಮಾರುಕಟ್ಟೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಚಿಕನ್ ಶಾಪ್ ಮಾಲೀಕನೊಬ್ಬ ಅಮಾಯಕ ಕಾಗೆಯನ್ನು ಹಗ್ಗದಿಂದ ಕಟ್ಟಿ ಹಾಕಿರುವ ಘಟನೆ ನಡೆದಿದೆ. ದಿನವೂ ಕಾಗೆಯ ಎಡೆಬಿಡದ ಕಾಟದಿಂದ ಸಿಟ್ಟಿಗೆದ್ದ ಅಂಗಡಿಯ ಮಾಲೀಕ ಆ ಕಾಗೆಯನ್ನು ಸುಮ್ಮನಾಗಿಸಲು ಹಗ್ಗದಿಂದ ಕಟ್ಟಿಹಾಕಿದ್ದಾನೆ. ಇದಾದ ನಂತರ ಹೊಸ ಸಮಸ್ಯೆ ಪ್ರಾರಂಭವಾಯಿತು.

ಈ ಘಟನೆಯ ವೀಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಾಗೆಯ ಸಂಕಟದ ಕೂಗನ್ನು ಕೇಳಿದ ಇತರೆ ಕಾಗೆಗಳು ಸ್ವಲ್ಪ ಸಮಯದೊಳಗೆ ಮಾರುಕಟ್ಟೆಯಲ್ಲಿ ಜಮಾಯಿಸಿ, ಜೋರಾಗಿ ಒಕ್ಕೊರಲಿನಿಂದ ಕೂಗಲಾರಂಭಿಸಿದವು. ಕಾ ಕಾ ಎಂಬ ಕಾಗೆಗಳು ಕಿವಿಗಡಚಿಕ್ಕುವ ಕೂಗನ್ನು ಕೇಳಿ ಎಲ್ಲ ವ್ಯಾಪಾರಿಗಳು ಗಲಾಟೆ ಮಾಡಿದರು. ಇದರಿಂದ ಇತರ ವ್ಯಾಪಾರಿಗಳು ಮತ್ತು ಮಾರುಕಟ್ಟೆಗೆ ಹೋಗುವವರು ಸಂಕಷ್ಟದ ಸ್ಥಿತಿಯಲ್ಲಿ ಸಿಲುಕಿದರು.

ಇದನ್ನೂ ಓದಿ: Viral Video: ಕೇರಳದ ದೇವಾಲಯಕ್ಕೆ ಸೀರೆಯುಟ್ಟ ವಿದೇಶಿ ಮಹಿಳೆಗೆ ನಿರ್ಬಂಧ; ವಿಡಿಯೋ ವೈರಲ್

ಈ ಕರ್ಕಶ ಶಬ್ದವನ್ನು ಸಹಿಸಲಾಗದೆ, ಇತರ ಅಂಗಡಿಯವರು ಆ ಕಾಗೆಯನ್ನು ಬಿಡುವಂತೆ ಚಿಕನ್ ಅಂಗಡಿಯ ಮಾಲೀಕರಿಗೆ ಮನವಿ ಮಾಡಿದರು. ಕೊನೆಗೂ ಚಿಕನ್ ಶಾಪ್ ಮಾಲೀಕನಿಗೆ ಕಾಗೆಯನ್ನು ಬಿಡಿಸಿ ಬಿಡದೆ ಬೇರೆ ದಾರಿ ಇರಲಿಲ್ಲ. ಹೀಗಾಗಿ, ತಾನು ಕಟ್ಟಿಹಾಕಿದ ಕಾಗೆಯನ್ನು ಬಿಟ್ಟು ಕಳಿಸಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು