AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್ ಶಾಪ್​ನಲ್ಲಿ ಕಾಗೆಯ ಕಾಲನ್ನು ಹಗ್ಗದಿಂದ ಕಟ್ಟಿದ ಮಾಲೀಕನಿಗೆ ಬುದ್ಧಿ ಕಲಿಸಿದ ಕಾಗೆಗಳು; ವಿಡಿಯೋ ವೈರಲ್

ಕಾಗೆಯನ್ನು ಹಗ್ಗದಿಂದ ಕಟ್ಟಿಹಾಕುತ್ತಿದ್ದಂತೆ ಬೇರೆ ಕಾಗೆಗಳು ಆ ಕಾಗೆಯನ್ನು ಬಿಡಿಸಲು ಚಿಕನ್ ಶಾಪ್ ಬಳಿ ಬಂದು ಕೂಗಲಾರಂಭಿಸಿವೆ. ಇದರಿಂದ ಆತಂಕಕ್ಕೀಡಾದ ಮಾಲೀಕ ತಾನು ಕಟ್ಟಿಹಾಕಿದ ಕಾಗೆಯನ್ನು ಬಿಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.

ಚಿಕನ್ ಶಾಪ್​ನಲ್ಲಿ ಕಾಗೆಯ ಕಾಲನ್ನು ಹಗ್ಗದಿಂದ ಕಟ್ಟಿದ ಮಾಲೀಕನಿಗೆ ಬುದ್ಧಿ ಕಲಿಸಿದ ಕಾಗೆಗಳು; ವಿಡಿಯೋ ವೈರಲ್
ಕಾಗೆ
ಸುಷ್ಮಾ ಚಕ್ರೆ
|

Updated on: Jul 18, 2024 | 3:15 PM

Share

ತಾಟಿಪಾಕ: ಆಂಧ್ರಪ್ರದೇಶದ ಅಂಬೇಡ್ಕರ್ ಕೋಣಸೀಮಾ ಜಿಲ್ಲೆಯ ತಾಟಿಪಾಕದ ಮಾರುಕಟ್ಟೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಚಿಕನ್ ಶಾಪ್ ಮಾಲೀಕನೊಬ್ಬ ಅಮಾಯಕ ಕಾಗೆಯನ್ನು ಹಗ್ಗದಿಂದ ಕಟ್ಟಿ ಹಾಕಿರುವ ಘಟನೆ ನಡೆದಿದೆ. ದಿನವೂ ಕಾಗೆಯ ಎಡೆಬಿಡದ ಕಾಟದಿಂದ ಸಿಟ್ಟಿಗೆದ್ದ ಅಂಗಡಿಯ ಮಾಲೀಕ ಆ ಕಾಗೆಯನ್ನು ಸುಮ್ಮನಾಗಿಸಲು ಹಗ್ಗದಿಂದ ಕಟ್ಟಿಹಾಕಿದ್ದಾನೆ. ಇದಾದ ನಂತರ ಹೊಸ ಸಮಸ್ಯೆ ಪ್ರಾರಂಭವಾಯಿತು.

ಈ ಘಟನೆಯ ವೀಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಕಾಗೆಯ ಸಂಕಟದ ಕೂಗನ್ನು ಕೇಳಿದ ಇತರೆ ಕಾಗೆಗಳು ಸ್ವಲ್ಪ ಸಮಯದೊಳಗೆ ಮಾರುಕಟ್ಟೆಯಲ್ಲಿ ಜಮಾಯಿಸಿ, ಜೋರಾಗಿ ಒಕ್ಕೊರಲಿನಿಂದ ಕೂಗಲಾರಂಭಿಸಿದವು. ಕಾ ಕಾ ಎಂಬ ಕಾಗೆಗಳು ಕಿವಿಗಡಚಿಕ್ಕುವ ಕೂಗನ್ನು ಕೇಳಿ ಎಲ್ಲ ವ್ಯಾಪಾರಿಗಳು ಗಲಾಟೆ ಮಾಡಿದರು. ಇದರಿಂದ ಇತರ ವ್ಯಾಪಾರಿಗಳು ಮತ್ತು ಮಾರುಕಟ್ಟೆಗೆ ಹೋಗುವವರು ಸಂಕಷ್ಟದ ಸ್ಥಿತಿಯಲ್ಲಿ ಸಿಲುಕಿದರು.

ಇದನ್ನೂ ಓದಿ: Viral Video: ಕೇರಳದ ದೇವಾಲಯಕ್ಕೆ ಸೀರೆಯುಟ್ಟ ವಿದೇಶಿ ಮಹಿಳೆಗೆ ನಿರ್ಬಂಧ; ವಿಡಿಯೋ ವೈರಲ್

ಈ ಕರ್ಕಶ ಶಬ್ದವನ್ನು ಸಹಿಸಲಾಗದೆ, ಇತರ ಅಂಗಡಿಯವರು ಆ ಕಾಗೆಯನ್ನು ಬಿಡುವಂತೆ ಚಿಕನ್ ಅಂಗಡಿಯ ಮಾಲೀಕರಿಗೆ ಮನವಿ ಮಾಡಿದರು. ಕೊನೆಗೂ ಚಿಕನ್ ಶಾಪ್ ಮಾಲೀಕನಿಗೆ ಕಾಗೆಯನ್ನು ಬಿಡಿಸಿ ಬಿಡದೆ ಬೇರೆ ದಾರಿ ಇರಲಿಲ್ಲ. ಹೀಗಾಗಿ, ತಾನು ಕಟ್ಟಿಹಾಕಿದ ಕಾಗೆಯನ್ನು ಬಿಟ್ಟು ಕಳಿಸಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ