Andhra Pradesh: ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಸಾವು

ನಿಂಬೆಹಣ್ಣು ಮಗುವಿನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಪುಟ್ಟ ಹಸುಗೂಸು ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲದ ಮಲ್ಲೇನಿಪಲ್ಲಿ ಗ್ರಾಮದಲ್ಲಿ ನಡೆದಿದೆ.

Andhra Pradesh: ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಸಾವು
Child Died After Lemon Stuck in ThroaImage Credit source: Pinterest
Follow us
|

Updated on:Jan 11, 2024 | 5:23 PM

ಆಂಧ್ರಪ್ರದೇಶ: ಮದುವೆಯಾಗಿ 7 ವರ್ಷಗಳ ವರೆಗೆ ಮಕ್ಕಳಿಲ್ಲ ಎಂಬ ದು:ಖದಲ್ಲಿದ್ದ ದಂಪತಿಗೆ 8 ತಿಂಗಳ ಹಿಂದೆ ಹೆಣ್ಣು ಮಗುವೊಂದರ ಜನನವಾಗಿದೆ. ಇನ್ನೇನು ತಮ್ಮ ಎಲ್ಲಾ ಕಷ್ಟಗಳು ಮುಗಿದು ಮಗುವಿನೊಂದಿಗೆ ಸುಖ ಜೀವನ ನಡೆಸಬೇಕು ಅನ್ನುವಷ್ಟರಲ್ಲಿ ದಂಪತಿಗಳ ಜೀವನದಲ್ಲಿ ಆಘಾತವೇ ಎದುರಾಗಿದೆ. ನಿಂಬೆಹಣ್ಣು ಮಗುವಿನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಪುಟ್ಟ ಹಸುಗೂಸು ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲದ ಮಲ್ಲೇನಿಪಲ್ಲಿ ಗ್ರಾಮದಲ್ಲಿ ನಡೆದಿದೆ.

ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲ ಮಲ್ಲೇನಿಪಲ್ಲಿಯ ಸಾಕಿದೀಪ ಮತ್ತು ಗೋವಿಂದರಾಜ್​​​​ ಅವರ ಹೆಣ್ಣು ಮಗು ಜಸ್ವಿತಾ (9 ತಿಂಗಳು). ಮನೆಯ ಜಗುಳಿಯಲ್ಲಿ ಆಟವಾಡುತ್ತಿದ್ದ ಮಗು ಜಗುಲಿಯ ಮೇಲೆ ಬಿದ್ದ ನಿಂಬೆಹಣ್ಣನ್ನು ಬಾಯಿಗೆ ಹಾಕಿಕೊಂಡಿದೆ. ಇದನ್ನು ಗಮನಿಸಿದ ತಾಯಿ ಕೂಡಲೇ ಅದನ್ನು ಹೊರತೆಗೆಯಲು ಯತ್ನಿಸಿದ್ದಾರೆ. ಮಗು ಅದಾಗಲೇ ನುಂಗಿದ್ದರಿಂದ ಲಿಂಬೆ ಹಣ್ಣು ಗಂಟಲಲ್ಲಿ ಸಿಕ್ಕಿಕೊಂಡಿದ್ದು, ಉಸಿರಾಟದ ತೊಂದರೆ ಉಂಟಾಗಿದೆ.

ಇದನ್ನೂ ಓದಿ: 3 ಲಕ್ಷಕ್ಕೂ ಹೆಚ್ಚು ನಗದು ಹೊಂದಿದ್ದ ನೋಟಿನ ಕಂತನ್ನು ಹರಿದು ತಿಂದ ಸಾಕು ನಾಯಿ

ತಕ್ಷಣ ಪೆದವಡುಗೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಆದರೆ, ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮಗುವಿನ ಸಾವಿನ ಸುದ್ದಿ ದಂಪತಿಗಳಿಗೆ ಆಘಾತವನ್ನುಂಟು ಮಾಡಿದೆ. ಮದುವೆಯಾಗಿ 7 ವರ್ಷಗಳ ಬಳಿಕ ದೇವರ ವರಪ್ರಸಾದವೆಂದು ನಂಬಿದ್ದ ಈ ಪುಟ್ಟ ಮಗುವಿನ ಸಾವು ಇಡೀ ಕುಟುಂಬವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:13 pm, Thu, 11 January 24

ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು