AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಸಾವು

ನಿಂಬೆಹಣ್ಣು ಮಗುವಿನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಪುಟ್ಟ ಹಸುಗೂಸು ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲದ ಮಲ್ಲೇನಿಪಲ್ಲಿ ಗ್ರಾಮದಲ್ಲಿ ನಡೆದಿದೆ.

Andhra Pradesh: ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಸಾವು
Child Died After Lemon Stuck in ThroaImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 11, 2024 | 5:23 PM

Share

ಆಂಧ್ರಪ್ರದೇಶ: ಮದುವೆಯಾಗಿ 7 ವರ್ಷಗಳ ವರೆಗೆ ಮಕ್ಕಳಿಲ್ಲ ಎಂಬ ದು:ಖದಲ್ಲಿದ್ದ ದಂಪತಿಗೆ 8 ತಿಂಗಳ ಹಿಂದೆ ಹೆಣ್ಣು ಮಗುವೊಂದರ ಜನನವಾಗಿದೆ. ಇನ್ನೇನು ತಮ್ಮ ಎಲ್ಲಾ ಕಷ್ಟಗಳು ಮುಗಿದು ಮಗುವಿನೊಂದಿಗೆ ಸುಖ ಜೀವನ ನಡೆಸಬೇಕು ಅನ್ನುವಷ್ಟರಲ್ಲಿ ದಂಪತಿಗಳ ಜೀವನದಲ್ಲಿ ಆಘಾತವೇ ಎದುರಾಗಿದೆ. ನಿಂಬೆಹಣ್ಣು ಮಗುವಿನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಪುಟ್ಟ ಹಸುಗೂಸು ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲದ ಮಲ್ಲೇನಿಪಲ್ಲಿ ಗ್ರಾಮದಲ್ಲಿ ನಡೆದಿದೆ.

ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲ ಮಲ್ಲೇನಿಪಲ್ಲಿಯ ಸಾಕಿದೀಪ ಮತ್ತು ಗೋವಿಂದರಾಜ್​​​​ ಅವರ ಹೆಣ್ಣು ಮಗು ಜಸ್ವಿತಾ (9 ತಿಂಗಳು). ಮನೆಯ ಜಗುಳಿಯಲ್ಲಿ ಆಟವಾಡುತ್ತಿದ್ದ ಮಗು ಜಗುಲಿಯ ಮೇಲೆ ಬಿದ್ದ ನಿಂಬೆಹಣ್ಣನ್ನು ಬಾಯಿಗೆ ಹಾಕಿಕೊಂಡಿದೆ. ಇದನ್ನು ಗಮನಿಸಿದ ತಾಯಿ ಕೂಡಲೇ ಅದನ್ನು ಹೊರತೆಗೆಯಲು ಯತ್ನಿಸಿದ್ದಾರೆ. ಮಗು ಅದಾಗಲೇ ನುಂಗಿದ್ದರಿಂದ ಲಿಂಬೆ ಹಣ್ಣು ಗಂಟಲಲ್ಲಿ ಸಿಕ್ಕಿಕೊಂಡಿದ್ದು, ಉಸಿರಾಟದ ತೊಂದರೆ ಉಂಟಾಗಿದೆ.

ಇದನ್ನೂ ಓದಿ: 3 ಲಕ್ಷಕ್ಕೂ ಹೆಚ್ಚು ನಗದು ಹೊಂದಿದ್ದ ನೋಟಿನ ಕಂತನ್ನು ಹರಿದು ತಿಂದ ಸಾಕು ನಾಯಿ

ತಕ್ಷಣ ಪೆದವಡುಗೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಆದರೆ, ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮಗುವಿನ ಸಾವಿನ ಸುದ್ದಿ ದಂಪತಿಗಳಿಗೆ ಆಘಾತವನ್ನುಂಟು ಮಾಡಿದೆ. ಮದುವೆಯಾಗಿ 7 ವರ್ಷಗಳ ಬಳಿಕ ದೇವರ ವರಪ್ರಸಾದವೆಂದು ನಂಬಿದ್ದ ಈ ಪುಟ್ಟ ಮಗುವಿನ ಸಾವು ಇಡೀ ಕುಟುಂಬವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:13 pm, Thu, 11 January 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು