AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೆಸರು ಗದ್ದೆಯಲ್ಲಿ ಈಜಾಡುತ್ತಿರುವ ಪುಟಾಣಿಗಳು; ವೈರಲ್‌ ಆಯ್ತು ದೃಶ್ಯ

ನೀವೆಲ್ಲರೂ ಸಮುದ್ರ, ನದಿ ಹಾಗೂ ಹೊಳೆಯಲ್ಲಿ ಈಜಾಡುವುದನ್ನು ನೋಡಿರುತ್ತೀರಿ. ಆದರೆ ಕೆಸರುಗದ್ದೆಯಲ್ಲಿ ಈಜಾಡುವುದನ್ನು ನೋಡಿರಲು ಸಾಧ್ಯವಿಲ್ಲ. ಆದರೆ ಈ ಪುಟಾಣಿಗಳು ಕೆಸರು ಗದ್ದೆಯಲ್ಲಿ ಈಜಾಡಿ ಖುಷಿಪಡುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಪುಟಾಣಿಗಳ ಮುದ್ದಾದ ವಿಡಿಯೋ ನೆಟ್ಟಿಗರ ಹೃದಯ ಗೆದ್ದುಕೊಂಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೆಸರು ಗದ್ದೆಯಲ್ಲಿ ಈಜಾಡುತ್ತಿರುವ ಪುಟಾಣಿಗಳು; ವೈರಲ್‌ ಆಯ್ತು ದೃಶ್ಯ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Nov 27, 2025 | 1:18 PM

Share

ಗ್ರಾಮೀಣ ಭಾಗದ ಬದುಕು ಸುಂದರ. ವಾಹನಗಳ ಓಡಾಟ, ಟ್ರಾಫಿಕ್‌ನಿಂದ ಗಿಜಿಗುಟ್ಟುವ ರಸ್ತೆಗಳಿಲ್ಲ. ಹಚ್ಚ ಹಸಿರಿನ ವಾತಾವರಣ, ಕಟಾವು ಮುಗಿಯುತ್ತಿದ್ದಂತೆ ಗದ್ದೆ ಉಳುವೆ, ಮತ್ತೆ ಕೃಷಿ ಕಾಯಕ ಶುರು. ಹಳ್ಳಿಯ ಮಕ್ಕಳು  (children) ಕೂಡ ಗ್ರಾಮೀಣ ಭಾಗದ ಕ್ರೀಡೆ ಆಡುತ್ತ ಖುಷಿ ಪಡುತ್ತಾರೆ. ಇದೀಗ ಕೆಸರು ತುಂಬಿದ ಗದ್ದೆಯಲ್ಲಿಈಜಾಡುತ್ತಾ ಆಟ ಆಡುತ್ತಿದ್ದಾರೆ. ಗ್ರಾಮೀಣ ಬದುಕಿನ ಆಟ ಪಾಠದ ಚಿತ್ರಣ ನೆಟ್ಟಿಗರ ಕಣ್ಮನ ಸೆಳೆಯುತ್ತಿದೆ.

Jp badakere ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಗಳು ಕೆಸರು ಗದ್ದೆಯಲ್ಲಿ ಈಜಾಡುತ್ತಾ ಖುಷಿಪಡುತ್ತಿರುವುದನ್ನು ಕಾಣಬಹುದು. ಈ ವಿಡಿಯೋಗೆ ಕೆಸರುಗದ್ದೆ ಈಜುವ ಸ್ಪರ್ಧೆಯಲ್ಲಿ ಸಂಕೇತ್ ಮೇಲ್ಮನೆ ಪ್ರಥಮ, ದ್ವಿತೀಯ ನವೀನ. (ಸಮುದ್ರ ಮತ್ತು ಹೊಳೆಯಲ್ಲಿ ಈಜುವ ಸ್ಪರ್ಧೆ ನಾವೆಲ್ಲ ನೋಡಿದ್ದೀವಿ.. ಕೆಸರಲ್ಲಿ ಈಜುವ ಸ್ಪರ್ಧೆ ಇದೇ ಮೊದಲು) ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಶಾಲೆಗೆ ಬರಲು ಒಲ್ಲೆ ಎಂದ ಹುಡುಗನನ್ನು ಎತ್ಕೊಂಡು ಹೋದ ಸಹಪಾಠಿಗಳು

ಈ ವಿಡಿಯೋ ಇದುವರೆಗೆ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಇದು ತುಂಬಾ ವಿಭಿನ್ನವಾಗಿದೆ ಎಂದಿದ್ದಾರೆ. ಮತ್ತೊಬ್ಬರು ಈ ದೃಶ್ಯ ನೋಡಿ ನಗುವ ಇಮೋಜಿ ಕಳುಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Thu, 27 November 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ