AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮೆ ಹಣಕ್ಕಾಗಿ ಸಂಚು ಮಾಡಿ ಮಗನನ್ನು ಕೊಂದ ತಂದೆ

ಚೀನಾದಲ್ಲಿ ವ್ಯಕ್ತಿಯೊಬ್ಬರು ತನ್ನ ಮಗನನ್ನು ಕೊಲ್ಲಲು ಸೋದರಸಂಬಂಧಿಯೊಂದಿಗೆ ಸಂಚು ರೂಪಿಸಿ, ಕಾರು ಅಪಘಾತ ನಾಟಕವಾಡಿದ್ದಾರೆ. ಹೆಂಡತಿ ಮೇಲಿನ ಸೇಡು ಮತ್ತು ವಿಮಾ ಹಣ ಪಡೆಯುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ. 2020ರಲ್ಲಿ ನಡೆದ ಘಟನೆಗೆ ಫುಜಿಯಾನ್ ನ್ಯಾಯಾಲಯ ಇದೀಗ ತೀರ್ಪು ನೀಡಿದ್ದು, ದೋಷಿ ಎಂದು ಘೋಷಿಸಿದೆ. ಈ ಪ್ರಕರಣ ಚೀನಾದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಿಮೆ ಹಣಕ್ಕಾಗಿ ಸಂಚು ಮಾಡಿ ಮಗನನ್ನು ಕೊಂದ ತಂದೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 14, 2025 | 4:51 PM

Share

ಚೀನಾದ ವ್ಯಕ್ತಿಯೊಬ್ಬರು (China father son murder) ತನ್ನ ಮಗನನ್ನು ಕೊಲ್ಲಲು ಸೋದರಸಂಬಂಧಿಯೊಂದಿಗೆ ಸಂಚು ರೂಪಿಸಿದ್ದು, ಇದೀಗ ತನಿಖೆಯಲ್ಲಿ ನಿಜಾಂಶ ತಿಳಿದು ಬಂದಿದೆ. ಕೋರ್ಟ್​​ ಈ ವ್ಯಕ್ತಿಯನ್ನು ದೋಷಿ ಎಂದು ಹೇಳಿದೆ. ತನ್ನ ಹೆಂಡತಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ತಿಳಿದು ಹೀಗೆ ಮಾಡಿದ್ದಾರೆ. ಈ ಘಟನೆ 2020ರಲ್ಲಿ ನಡೆದಿದ್ದರೂ, ಫುಜಿಯಾನ್ ಪ್ರಾಂತೀಯ ನ್ಯಾಯಾಲಯವು ಇದೀಗ ತೀರ್ಪು ನೀಡಿದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ವರದಿ ಮಾಡಿರುವ ಪ್ರಕಾರ, ಫುಜಿಯಾನ್ ಪ್ರಾಂತ್ಯದ ಸ್ಯಾನ್ಮಿಂಗ್ ನಗರದ ಜಾಂಗ್, ತನ್ನ ಸೋದರಸಂಬಂಧಿ, ಟ್ರಕ್ ಚಾಲಕನೊಂದಿಗೆ ಪಿತೂರಿ ಮಾಡಿ, ಕಾರು ಅಪಘಾತ ಎಂದು ಸುಳ್ಳು ಹೇಳಿ, ಸ್ವಂತ ಮಗನನ್ನು ಕೊಂದಿದ್ದಾರೆ ಎಂದು ಹೇಳಲಾಗಿದೆ.

ಈ ಪ್ರಕರಣವು ಚೀನಾದ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಅಲ್ಲಿನ ಜನ “ಹುಲಿ ಕೂಡ ತನ್ನ ಮರಿಯನ್ನು ತಿನ್ನುವುದಿಲ್ಲ” ಎಂಬ ಚೀನಾದ ಗಾದೆಯನ್ನು ಘೋಷಣೆ ಹಾಕುತ್ತ ಪ್ರತಿಭಟನೆ ಮಾಡಿದ್ದರು. ಆ ವ್ಯಕ್ತಿಗೆ ಸರಿಯಾದ ಶಿಕ್ಷೆಯಾಗಬೇಕು. ಜಾಂಗ್​​​ನ ಸ್ವಾರ್ಥ ಮತ್ತು ದುರಾಸೆಯ ಕೃತ್ಯಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದ್ದರು.

ಪ್ರಕರಣದ ಸಂಪೂರ್ಣ ಮಾಹಿತಿ ಇಲ್ಲಿದೆ:

ಜಾಂಗ್ ತನ್ನ ಹೆಂಡತಿಯೊಂದಿಗೆ ವೈವಾಹಿಕ ಹಾಗೂ ಹಣದ ವಿಚಾರವಾಗಿ ಆಗ್ಗಾಗೆ ಜಗಳ ಮಾಡುತ್ತಿದ್ದರು. ಇದಕ್ಕೆ ಸೇಡು ತೀರಿಸಿಕೊಳ್ಳಲು ತನ್ನ ಸ್ವಂತ ಮಗನನ್ನು ಕೊಂದು ಮಗನ ಹೆಸರಿನಲ್ಲಿರುವ ವಿಮಾವನ್ನು ಪಡೆಯುವ ಯೋಜನೆಯನ್ನು ಹಾಕಿದ್ದರು. ಒಂದು ದಿನ ಮಗನ್ನು ಕಾರಿನಲ್ಲಿ ಹೊರಗೆ ಕರೆದುಕೊಂಡು ಹೋಗಿ,  ಶಾಪ್​​ವೊಂದರ​​​ ಮುಂದೆ ನಿಲ್ಲಿದ್ದಾರೆ. ಮಗನನ್ನು ಇಳಿಯಲು ಹೇಳಿ, ಕಾರಿನ ಬಳಿ ನಿಲ್ಲಿಸಿ, ನಾನು ಶಾಪ್​​​ಗೆ ಹೋಗಿ ಬರುವೇ ನೀನು ಇಲ್ಲೇ ಇರು ಎಂದು ಅಂಗಡಿಯ ಒಳಗೆ ಹೋಗಿದ್ದಾರೆ. ಇದೇ ವೇಳೆ ಸೋದರಸಂಬಂಧಿಗೆ ಟ್ರಕ್​​​ನ್ನು ಕಾರಿಗೆ ಡಿಕ್ಕಿ ಹೊಡೆಯಲು ಹೇಳಿದ್ದಾರೆ. ಟ್ರಕ್​​ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮಗು ಅಲ್ಲೇ ಸಾವನ್ನಪ್ಪಿದೆ ಎಂದು ತನಿಖೆಯಲ್ಲಿ ಹೇಳಲಾಗಿದೆ. ಈ ಘಟನೆ 2020ರಲ್ಲಿ ನಡೆದಿದ್ದರೂ, ಪ್ರಕರಣ ತನಿಖೆಯೂ 6 ವರ್ಷಗಳ ವರೆಗೆ ನಡೆದಿದೆ.

ಇದನ್ನೂ ಓದಿ: ಹಳ್ಳಿಯಿಂದ ಯುಕೆಗೆ ಬಂದ ಅಪ್ಪ-ಅಮ್ಮ: ಇದು ನನ್ನ ಕನಸು ಎಂದ ಮಗ

ಕೋರ್ಟ್​​ 2021ರಲ್ಲಿ ಮಗುವಿನ ವಿಮಾದ ಜತೆಗೆ ಟ್ರಕ್​ ಮಾಲೀಕ ಹಾಗೂ ಡ್ರೈವರ್​ ಇಬ್ಬರು ಕೂಡ ಜಾಂಗ್​​​ಗೆ ಹಣವನ್ನು ನೀಡಬೇಕು ಎಂದು ಹೇಳಿತ್ತು. ಇದರಿಂದ ಸಂಕಷ್ಟಕ್ಕೆ ಸಿಲುಕಿದ ಟ್ರಕ್​ ಡ್ರೈವರ್​​​ ಪೊಲೀಸರ ಮುಂದೆ ನಿಜ ಒಪ್ಪಿಕೊಂಡಿದ್ದಾನೆ. ನನಗೆ ಜಾಂಗ್ ಈ ಕೆಲಸ ಮಾಡಲು ಹೇಳಿದ್ದು, ಅವರು ಪ್ರತ್ಯಕ್ಷವಾಗಿ ಈ ಕೃತ್ಯದಲ್ಲಿ ಭಾಗಿಯಾಗದಿದ್ದರು, ಪರೋಕ್ಷವಾಗಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾನೆ. ಪೊಲೀಸರು ಟ್ರಕ್ ಡ್ರೈವರ್​ ಹೇಳಿಕೆ ಆಧಾರದ ಮೇಲೆ ಜಾಂಗ್ ಅವರನ್ನು ತನಿಖೆಗೆ ಒಳಪಡಿಸಿದರು. ತನಿಖೆಯ ವೇಳೆ ಜಾಂಗ್ ಎಲ್ಲವನ್ನು ಬಾಯಿ ಬಿಟ್ಟಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ