AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ! ಮರಳುಗಾಳಿ ಬೀಸುವ ಆರ್ಭಟ ನೋಡಿದ್ದೀರಾ?

ಸ್ಥಳೀಯರೋರ್ವರು ಬೃಹತ್ ಮರಳುಗಾಳಿ ಬೀಸುವುದನ್ನು ಚಿತ್ರೀಕರಿಸಿದ್ದು, ಆ ವಿಡಿಯೋವನ್ನು ಇಲ್ಲಿ ನೋಡಬಹುದಾಗಿದೆ. ಮರಳುಗಾಳಿಯಿಂದ ರಕ್ಷಿಸಿಕೊಳ್ಳಲು ನಗರವಾಸಿಗಳು ಕನ್ನಡಕ, ಮಾಸ್ಕ್ ಮುಂತಾದವುಗಳನ್ನು ಬಳಸಿದ್ದರು.

ಅಬ್ಬಬ್ಬಾ! ಮರಳುಗಾಳಿ ಬೀಸುವ ಆರ್ಭಟ ನೋಡಿದ್ದೀರಾ?
ಮರಳುಗಾಳಿಯ ದೃಶ್ಯ
TV9 Web
| Edited By: |

Updated on: Jul 27, 2021 | 5:39 PM

Share

ಚೀನಾದ ಡನ್​ಹ್ಯಾಂಗ್ ನಗರದಲ್ಲಿ ಬೀಸಿರುವ ಮರಳುಗಾಳಿಗೆ ಅಲ್ಲಿಯ ಜನರು ತತ್ತರಿಸಿಹೋಗಿದ್ದಾರೆ. ಗೋಬಿ ಮರುಭೂಮಿಯ ಅಂಚಿನಲ್ಲಿರುವ ಡನ್​ಹ್ಯಾಂಗ್ ನಗರದಲ್ಲಿ ಸೋಮವಾರ ಭಾರೀ ಪ್ರಮಾಣದ ಮರಳುಗಾಳಿ ಬೀಸಿದೆ. ಮರಳುಗಾಳಿಯ ಆರ್ಭಟಕ್ಕೆ ಹೆದ್ದಾರಿ ಕಾಣದೇ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಮರಳುಗಾಳಿಯ ಆರ್ಭಟ ಹೇಗಿತ್ತೆಂದರೆ ಸುಮಾರು 100 ಮೀಟರ್ ಎತ್ತರದವರೆಗೂ ಅದು ವ್ಯಾಪಿಸಿತ್ತು ಎಂದು ಡನ್​ಹ್ಯಾಂಗ್​ನ ನಿವಾಸಿಗಳು ತಿಳಿಸಿದ್ದಾರೆ. ಮರಳುಗಾಳಿ (Sandstorm) ಎಷ್ಟು ದಟ್ಟವಾಗಿತ್ತೆಂದರೆ 5 ಮೀಟರ್ ಆಚೆಗಿನ ಏನೂ ಕಾಣುತ್ತಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ.

ಸೋಮವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಮರಳುಗಾಳಿ ಬೀಸಲು ಆರಂಭಿಸಿದೆ. ಅಪಾಯದ ಸುಳಿವು ಬಡಿದ ತಕ್ಷಣ ಎಚ್ಚೆತ್ತ ಸ್ಥಳೀಯ ಪೊಲೀಸರು ಹತ್ತಿರದ ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ವಾಹನ ಸವಾರರಿಗೆ ಸ್ವಲ್ಪ ಕಾಲ ಪ್ರಯಾಣವನ್ನು ಮುಂದೂಡುವಂತೆ ವಿನಂತಿ ಮಾಡಿದ್ದಾರೆ.

ಸ್ಥಳೀಯರೋರ್ವರು ಬೃಹತ್ ಮರಳುಗಾಳಿ ಬೀಸುವುದನ್ನು ಚಿತ್ರೀಕರಿಸಿದ್ದು, ಆ ವಿಡಿಯೋವನ್ನು ಇಲ್ಲಿ ನೋಡಬಹುದಾಗಿದೆ. ಮರಳುಗಾಳಿಯಿಂದ ರಕ್ಷಿಸಿಕೊಳ್ಳಲು ನಗರವಾಸಿಗಳು ಕನ್ನಡಕ, ಮಾಸ್ಕ್ ಮುಂತಾದವುಗಳನ್ನು ಬಳಸಿದ್ದರು.

ಕೆಲವು ದಿನಗಳ ಹಿಂದಷ್ಟೇ ಅಮೆರಿಕದ ಉತಾಹ್ ನಗರದಲ್ಲಿ ಭಾರಿ ಮರಳುಗಾಳಿಯೊಂದು ಬೀಸಿತ್ತು. ಅದರ ಪರಿಣಾಮವಾಗಿ 8 ಜನರು ಮೃತಪಟ್ಟಿದ್ದರು ಎಂಬುನ್ನು ಇಲ್ಲಿ ಉಲ್ಲೇಖಿಸಬಹುದು. ಈ ವಿಡಿಯೋವನ್ನು ವೀಕ್ಷಿಸಿದರೆ ಮರಳುಗಾಳಿಯು ಎಷ್ಟೆಲ್ಲ ಅನಾಹುತಗಳನ್ನು ಸೃಷ್ಟಿಸಬಹುದು ಎಂಬುದನ್ನು ನೆನೆಸಿಕೊಂಡರೇ ಭಯವಾಗದಿರದು.

ಇದನ್ನೂ ಓದಿ: 

Viral News: ಕೈಕಾಲುಗಳನ್ನು ವಿಸ್ತರಿಸುವ ಮೂಲಕ ಮಾನವರನ್ನು 5.6 ಇಂಚು ಎತ್ತರವಾಗಿಸಬಹುದು! ವಿಲಕ್ಷಣ ಹೇಳಿಕೆ ನೀಡಿ ವೈರಲ್​ ಆದ ವೈದ್ಯ

Viral Video: ಸೀರೆಯುಟ್ಟು ರೈಲಿನ ಕಿಟಕಿಯಲ್ಲೇ ಒಳನುಗ್ಗಿದ ಮಹಿಳೆ!; ಎಮರ್ಜೆನ್ಸಿ ಎಂಟ್ರಿಯ ವಿಡಿಯೋ ವೈರಲ್

(China sandstorm viral video you must see this)

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್