AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ! ಮರಳುಗಾಳಿ ಬೀಸುವ ಆರ್ಭಟ ನೋಡಿದ್ದೀರಾ?

ಸ್ಥಳೀಯರೋರ್ವರು ಬೃಹತ್ ಮರಳುಗಾಳಿ ಬೀಸುವುದನ್ನು ಚಿತ್ರೀಕರಿಸಿದ್ದು, ಆ ವಿಡಿಯೋವನ್ನು ಇಲ್ಲಿ ನೋಡಬಹುದಾಗಿದೆ. ಮರಳುಗಾಳಿಯಿಂದ ರಕ್ಷಿಸಿಕೊಳ್ಳಲು ನಗರವಾಸಿಗಳು ಕನ್ನಡಕ, ಮಾಸ್ಕ್ ಮುಂತಾದವುಗಳನ್ನು ಬಳಸಿದ್ದರು.

ಅಬ್ಬಬ್ಬಾ! ಮರಳುಗಾಳಿ ಬೀಸುವ ಆರ್ಭಟ ನೋಡಿದ್ದೀರಾ?
ಮರಳುಗಾಳಿಯ ದೃಶ್ಯ
TV9 Web
| Edited By: |

Updated on: Jul 27, 2021 | 5:39 PM

Share

ಚೀನಾದ ಡನ್​ಹ್ಯಾಂಗ್ ನಗರದಲ್ಲಿ ಬೀಸಿರುವ ಮರಳುಗಾಳಿಗೆ ಅಲ್ಲಿಯ ಜನರು ತತ್ತರಿಸಿಹೋಗಿದ್ದಾರೆ. ಗೋಬಿ ಮರುಭೂಮಿಯ ಅಂಚಿನಲ್ಲಿರುವ ಡನ್​ಹ್ಯಾಂಗ್ ನಗರದಲ್ಲಿ ಸೋಮವಾರ ಭಾರೀ ಪ್ರಮಾಣದ ಮರಳುಗಾಳಿ ಬೀಸಿದೆ. ಮರಳುಗಾಳಿಯ ಆರ್ಭಟಕ್ಕೆ ಹೆದ್ದಾರಿ ಕಾಣದೇ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಮರಳುಗಾಳಿಯ ಆರ್ಭಟ ಹೇಗಿತ್ತೆಂದರೆ ಸುಮಾರು 100 ಮೀಟರ್ ಎತ್ತರದವರೆಗೂ ಅದು ವ್ಯಾಪಿಸಿತ್ತು ಎಂದು ಡನ್​ಹ್ಯಾಂಗ್​ನ ನಿವಾಸಿಗಳು ತಿಳಿಸಿದ್ದಾರೆ. ಮರಳುಗಾಳಿ (Sandstorm) ಎಷ್ಟು ದಟ್ಟವಾಗಿತ್ತೆಂದರೆ 5 ಮೀಟರ್ ಆಚೆಗಿನ ಏನೂ ಕಾಣುತ್ತಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ.

ಸೋಮವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಮರಳುಗಾಳಿ ಬೀಸಲು ಆರಂಭಿಸಿದೆ. ಅಪಾಯದ ಸುಳಿವು ಬಡಿದ ತಕ್ಷಣ ಎಚ್ಚೆತ್ತ ಸ್ಥಳೀಯ ಪೊಲೀಸರು ಹತ್ತಿರದ ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ವಾಹನ ಸವಾರರಿಗೆ ಸ್ವಲ್ಪ ಕಾಲ ಪ್ರಯಾಣವನ್ನು ಮುಂದೂಡುವಂತೆ ವಿನಂತಿ ಮಾಡಿದ್ದಾರೆ.

ಸ್ಥಳೀಯರೋರ್ವರು ಬೃಹತ್ ಮರಳುಗಾಳಿ ಬೀಸುವುದನ್ನು ಚಿತ್ರೀಕರಿಸಿದ್ದು, ಆ ವಿಡಿಯೋವನ್ನು ಇಲ್ಲಿ ನೋಡಬಹುದಾಗಿದೆ. ಮರಳುಗಾಳಿಯಿಂದ ರಕ್ಷಿಸಿಕೊಳ್ಳಲು ನಗರವಾಸಿಗಳು ಕನ್ನಡಕ, ಮಾಸ್ಕ್ ಮುಂತಾದವುಗಳನ್ನು ಬಳಸಿದ್ದರು.

ಕೆಲವು ದಿನಗಳ ಹಿಂದಷ್ಟೇ ಅಮೆರಿಕದ ಉತಾಹ್ ನಗರದಲ್ಲಿ ಭಾರಿ ಮರಳುಗಾಳಿಯೊಂದು ಬೀಸಿತ್ತು. ಅದರ ಪರಿಣಾಮವಾಗಿ 8 ಜನರು ಮೃತಪಟ್ಟಿದ್ದರು ಎಂಬುನ್ನು ಇಲ್ಲಿ ಉಲ್ಲೇಖಿಸಬಹುದು. ಈ ವಿಡಿಯೋವನ್ನು ವೀಕ್ಷಿಸಿದರೆ ಮರಳುಗಾಳಿಯು ಎಷ್ಟೆಲ್ಲ ಅನಾಹುತಗಳನ್ನು ಸೃಷ್ಟಿಸಬಹುದು ಎಂಬುದನ್ನು ನೆನೆಸಿಕೊಂಡರೇ ಭಯವಾಗದಿರದು.

ಇದನ್ನೂ ಓದಿ: 

Viral News: ಕೈಕಾಲುಗಳನ್ನು ವಿಸ್ತರಿಸುವ ಮೂಲಕ ಮಾನವರನ್ನು 5.6 ಇಂಚು ಎತ್ತರವಾಗಿಸಬಹುದು! ವಿಲಕ್ಷಣ ಹೇಳಿಕೆ ನೀಡಿ ವೈರಲ್​ ಆದ ವೈದ್ಯ

Viral Video: ಸೀರೆಯುಟ್ಟು ರೈಲಿನ ಕಿಟಕಿಯಲ್ಲೇ ಒಳನುಗ್ಗಿದ ಮಹಿಳೆ!; ಎಮರ್ಜೆನ್ಸಿ ಎಂಟ್ರಿಯ ವಿಡಿಯೋ ವೈರಲ್

(China sandstorm viral video you must see this)

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ