Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ: ಯಾವುದೋ ಹಲ್ಲು ಕೀಳಬೇಕಿದ್ದ ವೈದ್ಯರು ಮತ್ಯಾವುದೋ ಹಲ್ಲು ಕಿತ್ತಿದ್ದಕ್ಕೆ ಯುವತಿ ಆತ್ಮಹತ್ಯೆ

ಸಣ್ಣ ಪುಟ್ಟ ವಿಷಯಗಳಿಗೆ ಜನರು ಆತ್ಮಹತ್ಯೆಯಂತಹ ತಪ್ಪುದಾರಿಗಿಳಿಯುತ್ತಿದ್ದಾರೆ. ವೈದ್ಯರೊಬ್ಬರು ವಿಸ್​ಡಂ​ ಟೀತ್(ಬುದ್ಧಿ ಹಲ್ಲು) ಕೀಳುವ ಬದಲು ಬೇರೆ ಆರೋಗ್ಯಕರವಾಗಿದ್ದ ಹಲ್ಲು ಕಿತ್ತಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ಅನ್ಹುಯಿ ಪ್ರಾಂತ್ಯದ ಮುನ್ಸಿಪಲ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಕೆಗೆ ಬುದ್ಧಿ ಹಲ್ಲು ಬರುತ್ತಿದ್ದ ಕಾರಣ ತುಂಬಾ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಅದನ್ನು ಕೀಳಿಸಲು ಆಸ್ಪತ್ರೆಗೆ ಬಂದಿದ್ದಳು. ಆದರೆ ವೈದ್ಯರು ತಪ್ಪಅಗಿ ಅರ್ಥೈಸಿಕೊಂಡು ಆರೋಗ್ಯಕರ ಹಲ್ಲು ತೆಗೆದಿದ್ದರು.

ಚೀನಾ: ಯಾವುದೋ ಹಲ್ಲು ಕೀಳಬೇಕಿದ್ದ ವೈದ್ಯರು ಮತ್ಯಾವುದೋ ಹಲ್ಲು ಕಿತ್ತಿದ್ದಕ್ಕೆ ಯುವತಿ ಆತ್ಮಹತ್ಯೆ
ಸಾವು Image Credit source: Newsx
Follow us
ನಯನಾ ರಾಜೀವ್
|

Updated on: Mar 27, 2025 | 12:37 PM

ಸಣ್ಣ ಪುಟ್ಟ ವಿಷಯಗಳಿಗೆ ಜನರು ಆತ್ಮಹತ್ಯೆಯಂತಹ ತಪ್ಪುದಾರಿಗಿಳಿಯುತ್ತಿದ್ದಾರೆ. ವೈದ್ಯರೊಬ್ಬರು ವಿಸ್​ಡಂ​ ಟೀತ್(ಬುದ್ಧಿ ಹಲ್ಲು) ಕೀಳುವ ಬದಲು ಬೇರೆ ಆರೋಗ್ಯಕರವಾಗಿದ್ದ ಹಲ್ಲು ಕಿತ್ತಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ಅನ್ಹುಯಿ ಪ್ರಾಂತ್ಯದ ಮುನ್ಸಿಪಲ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಕೆಗೆ ಬುದ್ಧಿ ಹಲ್ಲು ಬರುತ್ತಿದ್ದ ಕಾರಣ ತುಂಬಾ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಅದನ್ನು ಕೀಳಿಸಲು ಆಸ್ಪತ್ರೆಗೆ ಬಂದಿದ್ದಳು. ಆದರೆ ವೈದ್ಯರು ತಪ್ಪಅಗಿ ಅರ್ಥೈಸಿಕೊಂಡು ಆರೋಗ್ಯಕರ ಹಲ್ಲು ತೆಗೆದಿದ್ದರು. ಬಳಿಕ ತಪ್ಪನ್ನು ಅರಿತ ವೈದ್ಯರು ತಂತಿಹಾಕಿ ಆ ಹಲ್ಲನ್ನು ಅದೇ ಜಾಗದಲ್ಲಿ ಕೂರಿಸಿದ್ದರು. ಇದರಿಂದಾಗಿ ಆಕೆಗೆ ಅಪಾರ ನೋವು ಕಾಣಿಸಿಕೊಂಡಿತ್ತು. ಯಾವುದೇ ಇಂಜೆಕ್ಷನ್ ನೀಡದೆ ಒಂದೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ಆ ಹಲ್ಲನ್ನು ಮತ್ತೆ ಅಲ್ಲಿ ಫಿಕ್ಸ್ ಮಾಡಲು ಪ್ರಯತ್ನಿಸಿದ್ದರಿಂದ ಒಸಡಿನಲ್ಲಿ ಊತ ಕಾಣಿಸಿಕೊಂಡಿತ್ತು. ದಿನಗಟ್ಟಲೆ ಕೇವಲ ನೀರು ಹೊರತುಪಡಿಸಿ ಏನನ್ನೂ ತಿನ್ನಲು ಸಾಧ್ಯವಾಗಿರಲಿಲ್ಲ. ನಿದ್ರೆಯನ್ನು ಕೂಡ ಹಾಳು ಮಾಡಿತ್ತು. ಇದಕ್ಕೆ ಪರಿಹಾರ ಕೊಡಿ ನೋವು ಕಡಿಮೆ ಮಾಡಿ ಎಂದು ಕೇಳಿಕೊಂಡರೂ ವೈದ್ಯರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಬಳಿಕ ಆಕೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡಿದ್ದಳು.

ವೂ ಈ ಸಮಸ್ಯೆಯ ಬಗ್ಗೆ ಆಸ್ಪತ್ರೆ ಅಧಿಕಾರಿಗಳಿಗೆ ಪದೇ ಪದೇ ದೂರು ನೀಡಿದ್ದರೂ ಯಾವುದೇ ಪರಿಹಾರ ಸಿಗಲಿಲ್ಲ ಎಂದು ಆಕೆಯ ಸಹೋದರ ಹೇಳಿದರು.

ಮತ್ತಷ್ಟು ಓದಿ: Video: ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ ಕಳ್ಳನದ್ದು

ತಿರಸ್ಕಾರಕ್ಕೆ ಒಳಗಾದ ನಂತರ ಆಕೆಯ ಮಾನಸಿಕ ಸ್ಥಿತಿ ಹದಗೆಟ್ಟಿತು ಬಳಿಕ ಸಾಯುವ ನಿರ್ಧಾರ ಮಾಡಿದ್ದಾಳೆ ಎಂದು ಸಂಬಂಧಿಯೊಬ್ಬರು ಹೇಳಿದ್ದಾರೆ. ವೂ ಮಾರ್ಚ್ 17 ರಂದು ಆಸ್ಪತ್ರೆಗೆ ಮರಳಿದರು. ಕೆಲವು ಗಂಟೆಗಳ ನಂತರ, ಅವರು ಕಟ್ಟಡದ 11 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡರು.

ನಂತರ ಆಸ್ಪತ್ರೆಯು ಭಾಗಿಯಾಗಿದ್ದ ವೈದ್ಯರನ್ನು ಅಮಾನತುಗೊಳಿಸಿತು, ಆದರೆ ಪೊಲೀಸರು ಮತ್ತು ಸ್ಥಳೀಯ ಆರೋಗ್ಯ ಇಲಾಖೆ ಎರಡೂ ತನಿಖೆಗಳನ್ನು ಪ್ರಾರಂಭಿಸಿದವು. ಆಗಸ್ಟ್ 2024 ರಲ್ಲಿ, ಹುವಾಂಗ್ ಎಂಬ ವ್ಯಕ್ತಿ 23 ಹಲ್ಲುಗಳನ್ನು ತೆಗೆದುಹಾಕಿ ಮತ್ತು ಒಂದೇ ಬಾರಿಗೆ 12 ಇಂಪ್ಲಾಂಟ್‌ಗಳನ್ನು ಅಳವಡಿಸುವ ಬೃಹತ್ ದಂತ ಚಿಕಿತ್ಸೆಯನ್ನು ಪಡೆದ ಹದಿನೈದು ದಿನಗಳ ನಂತರ ಹೃದಯಾಘಾತದಿಂದ ನಿಧನರಾದರು. ಅವರ ಮಗಳು ಈ ಘಟನೆಯನ್ನು ಆನ್‌ಲೈನ್‌ನಲ್ಲಿ ಬೆಳಕಿಗೆ ತಂದಿದ್ದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ