AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್

Maryam Aurangzeb : ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್
ಪಾಕಿಸ್ತಾನಿ ಸಚಿವೆ ಮರಿಯಮ್​ ಔರಂಗಜೇಬ್​ ಲಂಡನ್ನಿನ ಬೀದಿಯಲ್ಲಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Sep 29, 2022 | 12:14 PM

Share

Viral video : ಪಾಕಿಸ್ತಾನದ ಮಾಹಿತಿ ಸಚಿವೆ ಮರಿಯಮ್ ಔರಂಗಜೇಬ್ ಅವರು ಲಂಡನ್ನಿನ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಸ್ಥಳೀಯ ಪಾಕಿಸ್ತಾನಿ ಪ್ರಜೆಗಳು ಸಾರ್ವಜನಿಕವಾಗಿ ಅವರನ್ನು ಮುತ್ತಿಗೆ ಹಾಕಿ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ಮರಿಯಮ್​ ಅವರನ್ನು ಚೋರ್ನಿ ಚೋರ್ನಿ- ಕಳ್ಳಿ ಕಳ್ಳಿ ಎಂದು ಕೂಗುತ್ತ ಅವರನ್ನು ಸುತ್ತುವರಿದ ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಅನಿರೀಕ್ಷಿತ ಘಟನೆಯಾಗಿದ್ದು ನೆಟ್ಟಿಗರಲ್ಲಿ ಕುತೂಹಲ ಹುಟ್ಟಿಸಿದೆ.

ಟ್ವಿಟರ್​ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಲಂಡನ್​ನ ಫುಟ್​ಪಾತ್ ಮೇಲೆ ಮರಿಯಮ್ ನಡೆದುಕೊಂಡು ಹೋಗುತ್ತಿದ್ದಾರೆ. ಅವರನ್ನು ಹಿಂಬಾಲಿಸುತ್ತಿರುವ ಜನರು ಧ್ವನಿವರ್ಧಕದ ಮೂಲಕ ಅವರನ್ನು ಕಳ್ಳಿ ಕಳ್ಳಿ ಎಂದು ಕೂಗುತ್ತಿದ್ದಾರೆ. ಹಿನ್ನೆಲೆಯಲ್ಲಿ ಒಬ್ಬ ಮಹಿಳೆಯ ಆಕ್ರೋಶಭರಿತ ಧ್ವನಿಯೂ ಕೇಳಿಬರುತ್ತದೆ. ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

ಉಳಿದ ಜನರು ಒಂದೇ ಸಮ ಮರಿಯಮ್​ರನ್ನು ಚೋರ್ನಿ ಚೋರ್ನಿ ಎಂದು ಆವೇಶಭರಿತರಾಗಿ ಕೂಗುತ್ತಿದ್ದಾರೆ.  ಮರಿಯಮ್ ಮಾತ್ರ ಮೌನವಾಗಿ ಹೆಜ್ಜೆ ಹಾಕುತ್ತಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:04 pm, Thu, 29 September 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ