AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್

Maryam Aurangzeb : ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

‘ಕಳ್ಳಿ ಕಳ್ಳಿ’ ಪಾಕಿಸ್ತಾನಿ ಸಚಿವೆ ಮರಿಯಮ್ ಔರಂಗಜೇಬ್​ರನ್ನು ಲಂಡನ್​ನಲ್ಲಿ ಸಾರ್ವಜನಿಕವಾಗಿ ನಿಂದಿಸಿರುವ ವಿಡಿಯೋ ವೈರಲ್
ಪಾಕಿಸ್ತಾನಿ ಸಚಿವೆ ಮರಿಯಮ್​ ಔರಂಗಜೇಬ್​ ಲಂಡನ್ನಿನ ಬೀದಿಯಲ್ಲಿ
ಶ್ರೀದೇವಿ ಕಳಸದ
|

Updated on:Sep 29, 2022 | 12:14 PM

Share

Viral video : ಪಾಕಿಸ್ತಾನದ ಮಾಹಿತಿ ಸಚಿವೆ ಮರಿಯಮ್ ಔರಂಗಜೇಬ್ ಅವರು ಲಂಡನ್ನಿನ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಸ್ಥಳೀಯ ಪಾಕಿಸ್ತಾನಿ ಪ್ರಜೆಗಳು ಸಾರ್ವಜನಿಕವಾಗಿ ಅವರನ್ನು ಮುತ್ತಿಗೆ ಹಾಕಿ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ಮರಿಯಮ್​ ಅವರನ್ನು ಚೋರ್ನಿ ಚೋರ್ನಿ- ಕಳ್ಳಿ ಕಳ್ಳಿ ಎಂದು ಕೂಗುತ್ತ ಅವರನ್ನು ಸುತ್ತುವರಿದ ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಅನಿರೀಕ್ಷಿತ ಘಟನೆಯಾಗಿದ್ದು ನೆಟ್ಟಿಗರಲ್ಲಿ ಕುತೂಹಲ ಹುಟ್ಟಿಸಿದೆ.

ಟ್ವಿಟರ್​ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಲಂಡನ್​ನ ಫುಟ್​ಪಾತ್ ಮೇಲೆ ಮರಿಯಮ್ ನಡೆದುಕೊಂಡು ಹೋಗುತ್ತಿದ್ದಾರೆ. ಅವರನ್ನು ಹಿಂಬಾಲಿಸುತ್ತಿರುವ ಜನರು ಧ್ವನಿವರ್ಧಕದ ಮೂಲಕ ಅವರನ್ನು ಕಳ್ಳಿ ಕಳ್ಳಿ ಎಂದು ಕೂಗುತ್ತಿದ್ದಾರೆ. ಹಿನ್ನೆಲೆಯಲ್ಲಿ ಒಬ್ಬ ಮಹಿಳೆಯ ಆಕ್ರೋಶಭರಿತ ಧ್ವನಿಯೂ ಕೇಳಿಬರುತ್ತದೆ. ‘ಪಾಕಿಸ್ತಾನದ ಸಚಿವೆ ಮರಿಯಮ್ ಔರಂಗಜೇಬ್​ ಈಕೆ. ಪಾಕಿಸ್ತಾನದ ಜನರ ಹಣ ನುಂಗಿ, ರಕ್ತವನ್ನು ಹೀರಿ ಲಂಡನ್ ಸುತ್ತಲು ಬಂದಿದ್ದಾಳೆ’.

ಉಳಿದ ಜನರು ಒಂದೇ ಸಮ ಮರಿಯಮ್​ರನ್ನು ಚೋರ್ನಿ ಚೋರ್ನಿ ಎಂದು ಆವೇಶಭರಿತರಾಗಿ ಕೂಗುತ್ತಿದ್ದಾರೆ.  ಮರಿಯಮ್ ಮಾತ್ರ ಮೌನವಾಗಿ ಹೆಜ್ಜೆ ಹಾಕುತ್ತಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:04 pm, Thu, 29 September 22

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ