AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇಷ್ಟು ಮುದ್ದಾಗಿರುವ ಕ್ರಿಸ್ಮಸ್ ಟ್ರೀ ನೀವು ಎಲ್ಲೂ ನೋಡಿರಲ್ಲ!

ಸಾಮಾಜಿಕ ಮಾಧ್ಯಮದಲ್ಲಿ ನಾಯಿಗಳನ್ನು ಕ್ರಿಸ್ಮಸ್ ಟ್ರೀಯಾಗಿ ಅಲಂಕರಿಸಿದ ವೀಡಿಯೊ ವೈರಲ್ ಆಗಿದೆ. ಕೆಲವರು ಇದನ್ನು ಮುದ್ದಾದ ವಿಡಿಯೋ ಎಂದು ಹೊಗಳಿದರೆ, ಇನ್ನು ಕೆಲವರು ಪ್ರಾಣಿಗಳನ್ನು ಈ ರೀತಿ ಬಳಸುವುದನ್ನು ಖಂಡಿಸಿದ್ದಾರೆ. @pachacriollita ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವೀಡಿಯೊ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಸದ್ಯ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: ಇಷ್ಟು ಮುದ್ದಾಗಿರುವ ಕ್ರಿಸ್ಮಸ್ ಟ್ರೀ ನೀವು ಎಲ್ಲೂ ನೋಡಿರಲ್ಲ!
Christmas Dog Tree Video Goes ViralImage Credit source: instagram
ಅಕ್ಷತಾ ವರ್ಕಾಡಿ
|

Updated on:Dec 21, 2024 | 3:42 PM

Share

ಪ್ರಪಂಚದಾದ್ಯಂತ ಕ್ರಿಸ್ಮಸ್ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ದಿನ, ಜನರು ಚರ್ಚ್‌ನಲ್ಲಿ ಒಟ್ಟುಗೂಡಿ, ಪ್ರಾರ್ಥನೆಗಳನ್ನು ಹಾಡುವ ಮೂಲಕ ಯೇಸುಕ್ರಿಸ್ತನ ಜನ್ಮದಿನವನ್ನು ಆಚರಿಸುತ್ತಾರೆ. ಅಲ್ಲದೆ, ಈ ದಿನದಂದು, ಮನೆಗಳಲ್ಲಿರುವ ಕ್ರಿಸ್‌ಮಸ್ ಟ್ರೀಯನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ನೀವು ಸಾಕಷ್ಟು ಬಗೆ ಬಗೆಯ ಕ್ರಿಸ್ಮಸ್ ಟ್ರೀ ಗಳನ್ನು ನೋಡಿರುತ್ತೀರಿ. ಈ ಮರವನ್ನು ಚಾಕ್ಲೆಟ್ಸ್, ಚಿಕ್ಕ ಚಿಕ್ಕ ಗಿಫ್ಟ್ಸ್, ಹೊಳೆಯುತ್ತಿರುವ ನಕ್ಷತ್ರಗಳು ಹಾಗೂ ಬಣ್ಣ ಬಣ್ಣದ ದೀಪಗಳ ಮೂಲಕ ಅಲಂಕರಿಸಲಾಗುತ್ತೆ. ಆದರೆ ಇದೀಗ ವಿಭಿನ್ನವಾದ ಮುದ್ದಾದ ಕ್ರಿಸ್ಮಸ್ ಟ್ರೀಗಳ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

ಶ್ವಾನ ಪ್ರಿಯರಿಗೆ ಈ ಕ್ರಿಸ್ಮಸ್ ಟ್ರೀ ಇಷ್ಟವಾಗುವುದಂತೂ ಖಂಡಿತಾ. ಮುದ್ದಾದ ಶ್ವಾನಗಳನ್ನು ಕ್ರಿಸ್ಮಸ್ ಟ್ರೀಯಂತೆ ಅಲಂಕರಿಸಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ. pachacriollita ಎಂಬ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಈಗಾಗಲೇ 30ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ಓದಿ:ಸಾಷ್ಟಾಂಗ ನಮಸ್ಕಾರ ಮಾಡಿ ಬಾಸ್​​​ನ ಸ್ವಾಗತಿಸಿದ ಉದ್ಯೋಗಿಗಳು; ವಿಲಕ್ಷಣ ವಿಡಿಯೋ ವೈರಲ್‌

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಕಷ್ಟು ಜನರು ವಿಡಿಯೋ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು “ನಾಯಿಗಳು ಆಟಿಕೆಗಳಲ್ಲ,ಇನ್‌ಸ್ಟಾಗ್ರಾಮ್‌ನಲ್ಲಿ ಗಮನ ಸೆಳೆಯಲು ಪ್ರಾಣಿಗಳನ್ನು ಈ ರೀತಿ ಬಳಸಬೇಡಿ” ಎಂದು ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:29 pm, Sat, 21 December 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?