Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚರ್ಚ್ ನೆಲದಲ್ಲಿ ಓಂ, ಸ್ವಸ್ತಿಕ್ ಚಿಹ್ನೆಯ ಟೈಲ್ಸ್‌, ವಿವಾದ ಸೃಷ್ಟಿಸಿದ ಈ ವಿಡಿಯೋ

ಹಿಂದು ಧರ್ಮದಲ್ಲಿ ಮಂಗಳಕರವೆಂದು ಪರಿಗಣಿಸಲಾಗುವ ಸ್ವಸ್ತಿಕ, ಓಂ ಚಿಹ್ನೆಯನ್ನು ಜನರು ತುಳಿದುಕೊಂಡು ಹೋಗುವ ಟೈಲ್ಸ್‌ನಲ್ಲಿ ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Viral Video: ಚರ್ಚ್ ನೆಲದಲ್ಲಿ ಓಂ, ಸ್ವಸ್ತಿಕ್ ಚಿಹ್ನೆಯ ಟೈಲ್ಸ್‌, ವಿವಾದ ಸೃಷ್ಟಿಸಿದ ಈ ವಿಡಿಯೋ
ಚರ್ಚ್ ನೆಲಕ್ಕೆ ಓಂ, ಸ್ವಸ್ತಿಕ್ ಚಿಹ್ನೆಯ ಟೈಲ್ಸ್‌
Follow us
ಅಕ್ಷತಾ ವರ್ಕಾಡಿ
|

Updated on: Apr 03, 2024 | 5:27 PM

ಆಂಧ್ರಪ್ರದೇಶ: ಹಿಂದೂ ಧರ್ಮದಲ್ಲಿ ಸ್ವಸ್ತಿಕ, ಓಂ ಚಿಹ್ನೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ. ಯಾವುದೇ ಪೂಜೆ, ಪುನಸ್ಕಾರದ ಸಮಯದಲ್ಲಿ, ಸ್ವಸ್ತಿಕ, ಓಂ ಚಿಹ್ನೆಗಳನ್ನು ಬರೆಯಲಾಗುತ್ತದೆ. ಆದರೆ ಇದೀಗ ಸಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ವೈರಲ್​​ ಆಗಿದ್ದು, ವಿಡಿಯೋದಲ್ಲಿ ಆಂಧ್ರಪ್ರದೇಶದ ಚರ್ಚ್ ಒಂದರ ಮುಂಭಾಗದಲ್ಲಿ ಹಾಕಲಾಗಿರುವ ಟೈಲ್ಸ್‌ನಲ್ಲಿ ಓಂ ಮತ್ತು ಸ್ವಸ್ತಿಕ್ ಚಿಹ್ನೆ ಬಳಸಿರುವುದನ್ನು ಕಾಣಬಹುದು. ಹಿಂದು ಧರ್ಮದಲ್ಲಿ ಮಂಗಳಕರವೆಂದು ಪರಿಗಣಿಸಲಾಗುವ ಸ್ವಸ್ತಿಕ, ಓಂ ಚಿಹ್ನೆಯನ್ನು ಜನರು ತುಳಿದುಕೊಂಡು ಹೋಗುವ ಟೈಲ್ಸ್‌ನಲ್ಲಿ ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದು ರಾಜ್ಯದ ಮಂಗಳಾಪುರ ಪ್ರದೇಶದಲ್ಲಿರುವ ಚರ್ಚ್​​ ಎಂದು ಗುರುತಿಸಲಾಗಿದೆ.

@arunpudur ಎಂಬ ಹೆಸರಿನ ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋವನ್ನು ಏಪ್ರಿಲ್​ 2ರಂದು ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 95 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಕಾಮೆಂಟ್​​​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ

ವೈರಲ್​​​ ಆದ ವಿಡಿಯೋದಲ್ಲಿ ಚರ್ಚ್ ಆವರಣದಲ್ಲಿ ಟೈಲ್ಸ್‌ ಹಾಕಿರುವುದನ್ನು ಕಾಣಬಹುದು. ಅದರ ನಡು ನಡುವೆ ಸ್ವಸ್ತಿಕ, ಓಂ ಚಿಹ್ನೆಗಳ ಟೈಲ್ಸ್‌ಗಳನ್ನು ಕಾಣಬಹುದು. ಹಿಂದೂ ಧರ್ಮದಲ್ಲಿ ದೈವಿಕವೆಂದು ಪರಿಗಣಿಸಲಾಗಿರುವ ಓಂ ಮತ್ತು ಸ್ವಾತಿಸ್ಕ್ ಚಿಹ್ನೆಗಳನ್ನು ಈ ರೀತಿ ಬಳಸಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದ್ದು, ಒಂದು ಧರ್ಮಕ್ಕೆ ಅಗೌರವ ತೋರಿರುವವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ