AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚರ್ಚ್ ನೆಲದಲ್ಲಿ ಓಂ, ಸ್ವಸ್ತಿಕ್ ಚಿಹ್ನೆಯ ಟೈಲ್ಸ್‌, ವಿವಾದ ಸೃಷ್ಟಿಸಿದ ಈ ವಿಡಿಯೋ

ಹಿಂದು ಧರ್ಮದಲ್ಲಿ ಮಂಗಳಕರವೆಂದು ಪರಿಗಣಿಸಲಾಗುವ ಸ್ವಸ್ತಿಕ, ಓಂ ಚಿಹ್ನೆಯನ್ನು ಜನರು ತುಳಿದುಕೊಂಡು ಹೋಗುವ ಟೈಲ್ಸ್‌ನಲ್ಲಿ ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Viral Video: ಚರ್ಚ್ ನೆಲದಲ್ಲಿ ಓಂ, ಸ್ವಸ್ತಿಕ್ ಚಿಹ್ನೆಯ ಟೈಲ್ಸ್‌, ವಿವಾದ ಸೃಷ್ಟಿಸಿದ ಈ ವಿಡಿಯೋ
ಚರ್ಚ್ ನೆಲಕ್ಕೆ ಓಂ, ಸ್ವಸ್ತಿಕ್ ಚಿಹ್ನೆಯ ಟೈಲ್ಸ್‌
ಅಕ್ಷತಾ ವರ್ಕಾಡಿ
|

Updated on: Apr 03, 2024 | 5:27 PM

Share

ಆಂಧ್ರಪ್ರದೇಶ: ಹಿಂದೂ ಧರ್ಮದಲ್ಲಿ ಸ್ವಸ್ತಿಕ, ಓಂ ಚಿಹ್ನೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ. ಯಾವುದೇ ಪೂಜೆ, ಪುನಸ್ಕಾರದ ಸಮಯದಲ್ಲಿ, ಸ್ವಸ್ತಿಕ, ಓಂ ಚಿಹ್ನೆಗಳನ್ನು ಬರೆಯಲಾಗುತ್ತದೆ. ಆದರೆ ಇದೀಗ ಸಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ವೈರಲ್​​ ಆಗಿದ್ದು, ವಿಡಿಯೋದಲ್ಲಿ ಆಂಧ್ರಪ್ರದೇಶದ ಚರ್ಚ್ ಒಂದರ ಮುಂಭಾಗದಲ್ಲಿ ಹಾಕಲಾಗಿರುವ ಟೈಲ್ಸ್‌ನಲ್ಲಿ ಓಂ ಮತ್ತು ಸ್ವಸ್ತಿಕ್ ಚಿಹ್ನೆ ಬಳಸಿರುವುದನ್ನು ಕಾಣಬಹುದು. ಹಿಂದು ಧರ್ಮದಲ್ಲಿ ಮಂಗಳಕರವೆಂದು ಪರಿಗಣಿಸಲಾಗುವ ಸ್ವಸ್ತಿಕ, ಓಂ ಚಿಹ್ನೆಯನ್ನು ಜನರು ತುಳಿದುಕೊಂಡು ಹೋಗುವ ಟೈಲ್ಸ್‌ನಲ್ಲಿ ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದು ರಾಜ್ಯದ ಮಂಗಳಾಪುರ ಪ್ರದೇಶದಲ್ಲಿರುವ ಚರ್ಚ್​​ ಎಂದು ಗುರುತಿಸಲಾಗಿದೆ.

@arunpudur ಎಂಬ ಹೆಸರಿನ ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋವನ್ನು ಏಪ್ರಿಲ್​ 2ರಂದು ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 95 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು ಕಾಮೆಂಟ್​​​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ

ವೈರಲ್​​​ ಆದ ವಿಡಿಯೋದಲ್ಲಿ ಚರ್ಚ್ ಆವರಣದಲ್ಲಿ ಟೈಲ್ಸ್‌ ಹಾಕಿರುವುದನ್ನು ಕಾಣಬಹುದು. ಅದರ ನಡು ನಡುವೆ ಸ್ವಸ್ತಿಕ, ಓಂ ಚಿಹ್ನೆಗಳ ಟೈಲ್ಸ್‌ಗಳನ್ನು ಕಾಣಬಹುದು. ಹಿಂದೂ ಧರ್ಮದಲ್ಲಿ ದೈವಿಕವೆಂದು ಪರಿಗಣಿಸಲಾಗಿರುವ ಓಂ ಮತ್ತು ಸ್ವಾತಿಸ್ಕ್ ಚಿಹ್ನೆಗಳನ್ನು ಈ ರೀತಿ ಬಳಸಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದ್ದು, ಒಂದು ಧರ್ಮಕ್ಕೆ ಅಗೌರವ ತೋರಿರುವವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ