AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ಸರ್ಕಸ್​ ವೇಳೆ 20 ಅಡಿ ಎತ್ತರದಿಂದ ಬಿದ್ದ ಯುವಕ; ಕೂದಲೆಳೆ ಅಂತರದಲ್ಲಿ ಪಾರು

ವೃತ್ತಿ ಪರ ಸ್ಟಂಟ್​ ಮಾಸ್ಟರ್​ ಒಬ್ಬರು  ಸರ್ಕಸ್​ ವೇಳೆ ಆಯತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. ಈ ಮೈ ಜುಮ್​ ಎನ್ನಿಸುವ ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Viral Video; ಸರ್ಕಸ್​ ವೇಳೆ 20 ಅಡಿ ಎತ್ತರದಿಂದ ಬಿದ್ದ ಯುವಕ; ಕೂದಲೆಳೆ ಅಂತರದಲ್ಲಿ ಪಾರು
TV9 Web
| Updated By: Pavitra Bhat Jigalemane|

Updated on: Jan 26, 2022 | 10:26 AM

Share

ಮನರಂಜನೆ ಎಲ್ಲರಿಗೂ ಬೇಕು. ಆದರೆ ಕೆಲವು ಮನರಂಜನೆಗಳು ಜೀವಕ್ಕೇ ಕುತ್ತು ತರುತ್ತವೆ. ಅಂತಹವುಗಳಲ್ಲಿ ಸರ್ಕಸ್ (Circus)​ ಅಥವಾ ಸ್ಟಂಟ್ (Stunt)​ ಕೂಡ ಒಂದು. ಜನರನ್ನು ಮನರಂಜಿಸಲು ನಡೆಸುವ ಸರ್ಕಸ್​ಗಳು ಅಪಾಯವನ್ನು ಸೆರಗಿಗೆ ಕಟ್ಟಿಕೊಂಡು ಮಾಡುವ ಸಾಹಸವಾಗಿದೆ. ಎಷ್ಟೇ ತರಬೇತಿ ಪಡೆದಿದ್ದರೂ ಕೂಡ ಕೆಲವೊಮ್ಮೆ ಸ್ಟಂಟ್​ಗಳು ಅಪಾಯವನ್ನು ತಂದೊಡ್ಡುತ್ತವೆ. ಅಂತಹದ್ದೇ ಒಂದು ಘಟನೆ ಜರ್ಮನಿ (Geramany) ಯಲ್ಲಿ ನಡೆದಿದೆ. ವೃತ್ತಿ ಪರ ಸ್ಟಂಟ್​ ಮಾಸ್ಟರ್​ ಒಬ್ಬರು  ಸರ್ಕಸ್​ ವೇಳೆ ಆಯತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. ಈ ಮೈ ಜುಮ್​ ಎನ್ನಿಸುವ ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜರ್ಮನಿಯ ಡ್ಯೂಸ್ಬರ್ಗ್ನಲ್ಲಿ ನಡೆಯುತ್ತಿದ್ದ ಸರ್ಕಸ್​ನಲ್ಲಿ ವೃತ್ತಿಪರ ಸ್ಕೇಟರ್​ ಲುಕಾಸ್ಜ್ ಮಾಲೆವ್ಸ್ಕಿ ಸ್ಟಂಟ್​ ಸ್ಟಂಡ್​ ಮಾಡುವ ವೇಳೆ ಆಯತಪ್ಪಿ ಬಿದ್ದಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಲುಕಾಸ್ಜ್ ಮಾಲೆವ್ಸ್ಕಿ ಹಾರಿ ಹಗ್ಗವನ್ನು ಹಿಡಿಯಬೇಕೆನ್ನುವಷ್ಟರಲ್ಲಿ ಹಗ್ಗ ಕೈಗೆ ಸಿಗದೆ ಮುಂದೆ ಹಾರಿದ್ದಾರೆ. ಇದರಿಂದ ಎದುರು ದಿನ ಸ್ಟೇಜ್​ಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದಿದ್ದಾರೆ. ತಕ್ಷಣ ಜತೆಯಲ್ಲಿದ್ದವರು ಬಂದು ಅವರನ್ನು  ಎತ್ತಿದ್ದಾರೆ. ಅದೃಷ್ಟವಶಾತ್​ ಲುಕಾಸ್ಜ್ ಮಾಲೆವ್ಸ್ಕಿ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ ಎಂದು ವರದಿಯಾಗಿದೆ. ಈ ದೃಶ್ಯದ ವಿಡಿಯೋವನ್ನು ಯುಟ್ಯೂಬ್​​ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋ ನೋಡಿ ನೆಟ್ಟಿಗರು ದಿಗಿಲುಗೊಂಡಿದ್ದಾರೆ. ಸದ್ಯ ಯುಟ್ಯೂಬ್​​ನಲ್ಲಿ ಹಂಚಿಕೊಂಡ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ;

India Republic Day; ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​

Viral video; ಮನೆಯ ಗೋಡೆ ಹತ್ತಿದ ಹೆಬ್ಬಾವು; ಬದುಕಿದೆಯಾ ಬಡಜೀವವೇ ಎಂದುಕೊಂಡ ಬೆಕ್ಕು

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು