AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ಸರ್ಕಸ್​ ವೇಳೆ 20 ಅಡಿ ಎತ್ತರದಿಂದ ಬಿದ್ದ ಯುವಕ; ಕೂದಲೆಳೆ ಅಂತರದಲ್ಲಿ ಪಾರು

ವೃತ್ತಿ ಪರ ಸ್ಟಂಟ್​ ಮಾಸ್ಟರ್​ ಒಬ್ಬರು  ಸರ್ಕಸ್​ ವೇಳೆ ಆಯತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. ಈ ಮೈ ಜುಮ್​ ಎನ್ನಿಸುವ ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Viral Video; ಸರ್ಕಸ್​ ವೇಳೆ 20 ಅಡಿ ಎತ್ತರದಿಂದ ಬಿದ್ದ ಯುವಕ; ಕೂದಲೆಳೆ ಅಂತರದಲ್ಲಿ ಪಾರು
TV9 Web
| Edited By: |

Updated on: Jan 26, 2022 | 10:26 AM

Share

ಮನರಂಜನೆ ಎಲ್ಲರಿಗೂ ಬೇಕು. ಆದರೆ ಕೆಲವು ಮನರಂಜನೆಗಳು ಜೀವಕ್ಕೇ ಕುತ್ತು ತರುತ್ತವೆ. ಅಂತಹವುಗಳಲ್ಲಿ ಸರ್ಕಸ್ (Circus)​ ಅಥವಾ ಸ್ಟಂಟ್ (Stunt)​ ಕೂಡ ಒಂದು. ಜನರನ್ನು ಮನರಂಜಿಸಲು ನಡೆಸುವ ಸರ್ಕಸ್​ಗಳು ಅಪಾಯವನ್ನು ಸೆರಗಿಗೆ ಕಟ್ಟಿಕೊಂಡು ಮಾಡುವ ಸಾಹಸವಾಗಿದೆ. ಎಷ್ಟೇ ತರಬೇತಿ ಪಡೆದಿದ್ದರೂ ಕೂಡ ಕೆಲವೊಮ್ಮೆ ಸ್ಟಂಟ್​ಗಳು ಅಪಾಯವನ್ನು ತಂದೊಡ್ಡುತ್ತವೆ. ಅಂತಹದ್ದೇ ಒಂದು ಘಟನೆ ಜರ್ಮನಿ (Geramany) ಯಲ್ಲಿ ನಡೆದಿದೆ. ವೃತ್ತಿ ಪರ ಸ್ಟಂಟ್​ ಮಾಸ್ಟರ್​ ಒಬ್ಬರು  ಸರ್ಕಸ್​ ವೇಳೆ ಆಯತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. ಈ ಮೈ ಜುಮ್​ ಎನ್ನಿಸುವ ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜರ್ಮನಿಯ ಡ್ಯೂಸ್ಬರ್ಗ್ನಲ್ಲಿ ನಡೆಯುತ್ತಿದ್ದ ಸರ್ಕಸ್​ನಲ್ಲಿ ವೃತ್ತಿಪರ ಸ್ಕೇಟರ್​ ಲುಕಾಸ್ಜ್ ಮಾಲೆವ್ಸ್ಕಿ ಸ್ಟಂಟ್​ ಸ್ಟಂಡ್​ ಮಾಡುವ ವೇಳೆ ಆಯತಪ್ಪಿ ಬಿದ್ದಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಲುಕಾಸ್ಜ್ ಮಾಲೆವ್ಸ್ಕಿ ಹಾರಿ ಹಗ್ಗವನ್ನು ಹಿಡಿಯಬೇಕೆನ್ನುವಷ್ಟರಲ್ಲಿ ಹಗ್ಗ ಕೈಗೆ ಸಿಗದೆ ಮುಂದೆ ಹಾರಿದ್ದಾರೆ. ಇದರಿಂದ ಎದುರು ದಿನ ಸ್ಟೇಜ್​ಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದಿದ್ದಾರೆ. ತಕ್ಷಣ ಜತೆಯಲ್ಲಿದ್ದವರು ಬಂದು ಅವರನ್ನು  ಎತ್ತಿದ್ದಾರೆ. ಅದೃಷ್ಟವಶಾತ್​ ಲುಕಾಸ್ಜ್ ಮಾಲೆವ್ಸ್ಕಿ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ ಎಂದು ವರದಿಯಾಗಿದೆ. ಈ ದೃಶ್ಯದ ವಿಡಿಯೋವನ್ನು ಯುಟ್ಯೂಬ್​​ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋ ನೋಡಿ ನೆಟ್ಟಿಗರು ದಿಗಿಲುಗೊಂಡಿದ್ದಾರೆ. ಸದ್ಯ ಯುಟ್ಯೂಬ್​​ನಲ್ಲಿ ಹಂಚಿಕೊಂಡ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ;

India Republic Day; ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​

Viral video; ಮನೆಯ ಗೋಡೆ ಹತ್ತಿದ ಹೆಬ್ಬಾವು; ಬದುಕಿದೆಯಾ ಬಡಜೀವವೇ ಎಂದುಕೊಂಡ ಬೆಕ್ಕು

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ