AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಾಯಿಗಿಂತ ದೊಡ್ಡ ಯೋಧ ಯಾರೂ ಇಲ್ಲ; ತನ್ನ ಮೊಟ್ಟೆಯನ್ನೇ ತಿಂದ ಕಾಗೆಯನ್ನು ಹೊಡೆದು ಸಾಯಿಸಿದ ಹಕ್ಕಿ   

ನಿತ್ಯ ಮೊಟ್ಟೆಗೆ ಕಾವು ಕೊಟ್ಟು ತನ್ನ ಮರಿಗಳು ಪ್ರಪಂಚವನ್ನು ನೋಡಬೇಕು ಎಂದು ಕಾತರದಿಂದ ಕಾಯುತ್ತಿದ್ದ ಡೇಗೆ ಹಕ್ಕಿ (Common Kestrel) ಯ ಮೊಟ್ಟೆಯನ್ನು ಕಾಗೆಯೊಂದು ತಿಂದು ಹಾಕುತ್ತದೆ. ತನ್ನ ಕಂದಮ್ಮನನ್ನೇ ಸಾಯಿಸಿಬಿಟ್ಟೆಯಲ್ಲಾ ಪಾಪಿ… ಎಂದು ಕೋಪಗೊಂಡ ತಾಯಿ ಹಕ್ಕಿ ರೋಷದಿಂದ ಕಾಗೆಯನ್ನು ಹೊಡೆದು ಸಾಯಿಸಿದೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

Viral Video: ತಾಯಿಗಿಂತ ದೊಡ್ಡ ಯೋಧ ಯಾರೂ ಇಲ್ಲ; ತನ್ನ ಮೊಟ್ಟೆಯನ್ನೇ ತಿಂದ ಕಾಗೆಯನ್ನು ಹೊಡೆದು ಸಾಯಿಸಿದ ಹಕ್ಕಿ   
ಮಾಲಾಶ್ರೀ ಅಂಚನ್​
| Edited By: |

Updated on: May 21, 2024 | 2:55 PM

Share

ಈ ಪ್ರಪಂಚದಲ್ಲಿ ತಾಯಿಗಿಂತ ದೊಡ್ಡ ಯೋಧ ಯಾರೂ ಯಾರೂ ಇಲ್ಲ ಎಂದು ಹೇಳುತ್ತಾರೆ. ಮನುಷ್ಯರೇ ಆಗಲಿ ಪ್ರಾಣಿ ಪಕ್ಷಿಗಳೇ ಆಗಲಿ,  ತನ್ನ  ಕಂದಮ್ಮನನ್ನು ರಕ್ಷಿಸಲು ತಾಯಿಯಾದವಳು ಪ್ರಾಣವನ್ನೇ ತ್ಯಾಗ ಮಾಡುತ್ತಾಳೆ. ಆಕೆ ತನ್ನ  ಹೆತ್ತ ಕರುಳಿಗೆ ಸ್ವಲ್ಪ ನೋವಾದರೂ ಸಹಿಸಲಾರಳು. ಇದಕ್ಕೆ ಉತ್ತಮ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಇನ್ನೇನೂ ತನ್ನ ಕಂದಮ್ಮ ಈ ಪ್ರಪಂಚಕ್ಕೆ ಕಾಲಿಡುತ್ತೇ ಎಂದು ಸಂತೋಷದಿಂದ ಕಾದು ಕುಳಿದಿದ್ದತಹ  ಡೇಗೆ ಹಕ್ಕಿ (Common Kestrel) ಯ ಮೊಟ್ಟೆಯನ್ನು ಕಾಗೆಯೊಂದು ತಿಂದು ಹಾಕುತ್ತದೆ. ಇದರಿಂದ ಕೋಪಗೊಂಡ ತಾಯಿ ಹಕ್ಕಿ ಕಾಗೆಯನ್ನೇ ಹೊಡೆದು ಸಾಯಿಸಿದೆ.

ಈ ಕುರಿತ ವಿಡಿಯೋವನ್ನು @Alphafox78 ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಡೇಗೆ ಹಕ್ಕಿ (Common Kestrel) ಯೊಂದು ಮರದ ಪೊಟರೆಯಲ್ಲಿ ಮೊಟ್ಟೆಯನ್ನಿಟ್ಟು, ಆಹಾರವನ್ನರಸುತ್ತಾ ಆಚೆ ಕಡೆ ಹೋಗಿರುತ್ತೆ. ಇದೇ ಒಳ್ಳೆಯ ಸಮಯ ಎಂದು ಪೊಟರೆಯೊಳಗೆ ನುಗ್ಗಿದ ಕಾಗೆಯೊಂದು ಮೂರು ಮೊಟ್ಟೆಗಳಲ್ಲಿ ಒಂದು ಮೊಟ್ಟೆಯನ್ನು ತಿಂದು ಹಾಕುತ್ತದೆ. ಡೇಗೆ ಹಕ್ಕಿ ವಾಪಸ್ ಬಂದು ನೋಡಿದಾಗ ಒಂದು ಮೊಟ್ಟೆ ಒಡೆದು ಹೋಗಿರುತ್ತದೆ. ಯಾರೋ ನನ್ನ ಮೊಟ್ಟೆಯನ್ನು ತಿಂದು ಹಾಕಿದ್ದಾರೆ, ಅವರಿಗೆ ಸರಿಯಾಗಿ ಪಾಠ ಕಲಿಸಬೇಕು ಎಂದು ಹೊಂಚು ಹಾಕಿ ಕುಳಿತಿದ್ದ ಈ ಹಕ್ಕಿ ಕಾಗೆ ಇನ್ನೊಂದು ಬಾರಿ ಪೊಟರೆಯೊಳಗೆ ಕಾಲಿಡುತ್ತಿದ್ದಂತೆ ಅದರ ಮೇಲೆ ದಾಳಿ ನಡೆಸಿ, ರೋಷದಿಂದ ಕಾಗೆಯನ್ನು ಹೊಡೆದು ಸಾಯಿಸುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮದುವೆ ಮಂಟಪಕ್ಕೆ ನುಗ್ಗಿ ವರನಿಗೆ ಹಿಗ್ಗಾಮುಗ್ಗಾ ಥಳಿಸಿದ ವಧುವಿನ ಮಾಜಿ ಪ್ರಿಯಕರ 

ವೈರಲ್​​ ವಿಡಿಯೋ ಇಲ್ಲಿದೆ

ಮೇ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.3 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ದೃಶ್ಯ ನೋಡಲು ತುಂಬಾ ರೋಮಾಂಚನಕಾರಿಯಾಗಿತ್ತು ಎಂದು ನೋಡುಗರು ಕಾಮೆಂಟ್ಸ್ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ