AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ಮನೆಯೇ ಇಲ್ಲದ ಭಾರತದ ವಿಶಿಷ್ಟ ಹಳ್ಳಿ ಇದು, ಊಟ ತಿಂಡಿಗಾಗಿ ಏನ್ ಮಾಡ್ತಾರೆ ಇಲ್ಲಿನ ಜನ ಗೊತ್ತಾ?

ಊರಲ್ಲಿ ದೇವರ ಉತ್ಸವ, ಜಾತ್ರೆಯಿದ್ದರೆ ಊರಿಗೆ ಊರೇ ಒಂದೆಡೆ ಸೇರಿ ಸಂಭ್ರಮಿಸುತ್ತಾರೆ. ಆದರೆ ಈ ಹಳ್ಳಿಯಲ್ಲಿರುವ ಜನರು ಪ್ರತಿದಿನ ಒಂದೆಡೆ ಸೇರಿ ಊಟ ಸವಿದು ಕಷ್ಟ ಸುಖ ಮಾತನಾಡುತ್ತಾರೆ. ಈ ಹಳ್ಳಿಯಲ್ಲಿ ವೃದ್ದರೇ ಹೆಚ್ಚಿದ್ದು, ಅವರಿಗಾಗಿ ಪ್ರತಿದಿನ ಒಂದೇ ಮನೆಯಲ್ಲಿ ಅಡುಗೆ ತಯಾರಾಗುತ್ತಂತೆ. ಸಹೋದರತ್ವ ಹಾಗೂ ಏಕತೆಗೆ ಈ ಗ್ರಾಮವು ಉದಾಹರಣೆಯಾಗಿದ್ದು ಹಾಗಾದ್ರೆ ಈ ಕುರಿತಾದ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಅಡುಗೆ ಮನೆಯೇ ಇಲ್ಲದ ಭಾರತದ ವಿಶಿಷ್ಟ ಹಳ್ಳಿ ಇದು, ಊಟ ತಿಂಡಿಗಾಗಿ ಏನ್ ಮಾಡ್ತಾರೆ ಇಲ್ಲಿನ ಜನ ಗೊತ್ತಾ?
ಚಂದಂಕಿ ಗ್ರಾಮದಲ್ಲಿ ಕಮ್ಯುನಿಟಿ ಕಿಚನ್Image Credit source: Social Media
ಸಾಯಿನಂದಾ
|

Updated on: Jul 03, 2025 | 6:53 PM

Share

ಒಂದು ಮನೆ ಎಂದ ಮೇಲೆ ಅಡುಗೆ ಮನೆ (kitchen) ಬಹಳ ಮುಖ್ಯ. ಅಡುಗೆ ಮನೆ ಇಲ್ಲದ ಮನೆಯನ್ನು ಊಹಿಸಲು ಅಸಾಧ್ಯ. ಆದರೆ ಈ ಹಳ್ಳಿಯಲ್ಲಿ ಮಾತ್ರ ಯಾವ ಮನೆಗೆ ಹೋದ್ರು ಅಡುಗೆ ಮನೆ ಕಾಣಲು ಸಿಗಲ್ಲ. ಹಾಗಂತ ಈ ಊರಲ್ಲಿರುವ ಜನರು ಊಟ ಮಾಡದೇ ಉಪವಾಸ ಇರುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡಬಹುದು. ಈ ಗ್ರಾಮದಲ್ಲಿ ವೃದ್ಧರೇ ವಾಸಿಸುತ್ತಿದ್ದು, ಇಲ್ಲಿನ ಜನರು ಹೊತ್ತೊತ್ತಿಗೆ ಊಟ ತಿಂಡಿ ಮಾಡುತ್ತಾರೆ. ಅಡುಗೆ ಮನೆಯೇ ಇಲ್ಲದ ಭಾರತದ ಈ ಹಳ್ಳಿ (Indian village) ಯಾವುದು, ಇದು ಇರುವುದು ಎಲ್ಲಿ? ಈ ಹಳ್ಳಿಯ ವಿಶೇಷತೆಯೇನು? ಎನ್ನುವ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಭಾರತದಲ್ಲಿದೆ ವಿಶಿಷ್ಟ ಗ್ರಾಮ

ಭಾರತದಲ್ಲಿರುವ ಈ ಗ್ರಾಮವು ತುಂಬಾನೇ ಅಭಿವೃದ್ಧಿಯಾಗಿದ್ದು, ಇಲ್ಲಿದ್ದ ಯುವಕರೆಲ್ಲರೂ ಒಳ್ಳೆಯ ಶಿಕ್ಷಣ ಪಡೆದು, ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಂಡು ಪಟ್ಟಣ ಸೇರಿದ್ದಾರೆ. ಹೀಗಾಗಿ ಇಲ್ಲಿ ಕಾಣಸಿಗುವವರು ವೃದ್ಧರು ಮಾತ್ರ. ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದ್ದ ಈ ಗ್ರಾಮದಲ್ಲಿ ಈಗ ಇರುವುದು 500 ಜನರು ಮಾತ್ರ. ಈ ವಿಶಿಷ್ಟ ಹಳ್ಳಿಯ ಹೆಸರು ಚಂದಂಕಿ, ಇದು ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿದೆ. ಅಭಿವೃದ್ಧಿ ಕಂಡಿರುವ ಈ ಗ್ರಾಮಗಳಲ್ಲಿ ಕಾಂಕ್ರೀಟ್ ಹಾಕಿದ ರಸ್ತೆಗಳು ಹಾಗೂ ದಿನದ 24 ಗಂಟೆಗಳ ಕಾಲ ವಿದ್ಯುತ್ ಇರುತ್ತದೆ. ಆದ್ರೆ, ಈ ಗ್ರಾಮದ ಯಾವುದೇ ಮನೆಯಲ್ಲಿ ಅಡುಗೆ ಮನೆಯಿಲ್ಲ. ಹೀಗಾಗಿ ವಿಶಿಷ್ಟ ವ್ಯವಸ್ಥೆಯನ್ನು ಇಲ್ಲಿನ ಜನರು ಮಾಡಿಕೊಂಡಿದ್ದಾರೆ. ಕಮ್ಯುನಿಟಿ ಕಿಚನ್ ಎನ್ನುವ ವಿಶಿಷ್ಟ ವ್ಯವಸ್ಥೆಯಿದ್ದು, ಗ್ರಾಮಸ್ಥರು ಎಲ್ಲರೂ ಸೇರಿ ಒಂದೆಡೆ ಕುಳಿತು ಊಟ ಮಾಡುತ್ತಾರೆ.

ಇದನ್ನೂ ಓದಿ
Image
ಮಹಿಳೆಯರನ್ನು ಮೆಚ್ಚಿಸಲು ಈ ಪುರುಷರು ಮಾಡ್ತಾರೆ ವಿಶೇಷ ನೃತ್ಯ
Image
ಬೆಡ್‌ರೂಮಿನ ಕರ್ಟನ್ ಮೇಲೆ ಹೆಡೆಯೆತ್ತಿ ಕುಳಿತ ಬುಸ್ ನಾಗಪ್ಪ
Image
20 ವರ್ಷದ ನಂತರ ತಂದೆಯ ಧ್ವನಿ ಕೇಳಿದ ಬೆಂಗಳೂರಿನ ಯುವತಿ
Image
ಕೆಲಸ ಕಳೆದುಕೊಂಡ ಬೆಂಗಳೂರಿನ ಇಂಜಿನಿಯರ್ ಕಥೆಯಿದು

ಏನಿದು ಕಮ್ಯುನಿಟಿ ಕಿಚನ್

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಚಂದಂಕಿ ಗ್ರಾಮದಲ್ಲಿ ಯಾವುದೇ ಮನೆಯಲ್ಲಿ ಅಡುಗೆ ಮಾಡುವುದೇ ಇಲ್ಲ. ಇಲ್ಲಿ ಕಮ್ಯುನಿಟಿ ಕಿಚನ್ ವ್ಯವಸ್ಥೆಯಿದ್ದು, ಇಲ್ಲಿರುವ ವೃದ್ಧರಿಗೆ ಬೇಕಾದ ಆಹಾರವನ್ನು ಇಲ್ಲಿಯೇ ತಯಾರಿಸಲಾಗುತ್ತದೆ. ಇಲ್ಲಿನ ಯುವಕರು ಪಟ್ಟಣಗಳಿಗೆ ಹೋದ ಕಾರಣ ಸಹಜವಾಗಿ ವೃದ್ಧರನ್ನು ಒಂಟಿಯಾಗಿದ್ದಾರೆ. ಹೀಗಾಗಿ ಮೂರೊತ್ತು ಊಟ ತಿಂಡಿಗೆ ವೃದ್ಧರೆಲ್ಲರೂ ಒಂದೆಡೆ ಸೇರುವ ಮೂಲಕ ಎಲ್ಲರೊಂದಿಗೆ ಬೆರೆತು ತಮ್ಮ ನೋವನ್ನು ಮರೆಯುತ್ತಾರೆ.

ಇದನ್ನೂ ಓದಿ : Video : ರಸಭರಿತ ತಾಜಾ ಕಲ್ಲಂಗಡಿ ಹಣ್ಣನ್ನು ಗುರುತಿಸೋದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್

ಕಮ್ಯುನಿಟಿ ಕಿಚನ್ ಕಾರಣಿಕರ್ತರು ಯಾರು?

ಕಮ್ಯುನಿಟಿ ಕಿಚನ್ ಎನ್ನುವ ವಿಶಿಷ್ಟ ವ್ಯವಸ್ಥೆಯನ್ನು ಸ್ಥಾಪಿಸಿದ್ದು ಗ್ರಾಮದ ಸರಪಂಚ್ ಪೂನಂಬಾಯಿ ಪಟೇಲ್ ಎನ್ನುವ ವ್ಯಕ್ತಿ. ಗ್ರಾಮದಲ್ಲಿರುವ ಈ ಹಾಲ್ ನಲ್ಲಿ 35-40 ಜನರು ಒಟ್ಟಿಗೆ ಕುಳಿತು ಊಟ ಮಾಡಬಹುದು. ಇಲ್ಲಿ ಹವಾನಿಯಂತ್ರಿತ ವ್ಯವಸ್ಥೆಯೂ ಇದೆ. ಕಮ್ಯುನಿಟಿ ಕಿಚನ್ ನಲ್ಲಿ ಅಡುಗೆ ಮಾಡಲು ಅಡುಗೆ ಭಟ್ಟರನ್ನು ನೇಮಿಸಿಕೊಳ್ಳಲಾಗಿದ್ದು, ಇವರ ತಿಂಗಳ ಸಂಬಳ ಹನ್ನೊಂದು ಸಾವಿರ ರೂಪಾಯಿಯಂತೆ. ಇನ್ನು, ಮೆನುವಿನಲ್ಲಿ ದಾಲ್, ಅನ್ನ, ಚಪಾತಿ, ಖಿಚಡಿ ಭಕ್ರಿ-ರೋಟಿ, ಮೇಥಿ ಗೋಟಾ, ಧೋಕ್ಲಾ, ಇಡ್ಲಿ ಸಾಂಬಾರ್ ಸೇರಿದಂತೆ ವಿವಿಧ ಸಿಹಿತಿಂಡಿಗಳಿವೆ. ವೃದ್ಧರೆಲ್ಲರೂ ಒಟ್ಟು ಸೇರಿ ತಿಂಡಿ ಊಟ ಸವಿಯುತ್ತಾರೆ. ಇನ್ನೊಂದು ವಿಶೇಷವೆಂದರೆ ಮೊದಲು ಮಹಿಳೆಯರು ಆಹಾರ ಸೇವಿಸಿದ ಬಳಿಕ ಪುರುಷರು ಆಹಾರ ಸೇವಿಸುತ್ತಾರೆರಂತೆ. ಸಹೋದರತ್ವ ಹಾಗೂ ಏಕತೆಗೆ ಉದಾಹರಣೆಯಂತಿರುವ ಈ ವಿಶಿಷ್ಟ ಗ್ರಾಮವನ್ನು ನೋಡಲು ಬೇರೆ ಬೇರೆ ರಾಜ್ಯಗಳಿಂದ ಜನರು ಭೇಟಿ ನೀಡುತ್ತಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!