AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ನಿಯಮ ಪಾಲಿಸದ್ದಕ್ಕೆ ಕೆಲಸದಿಂದ ಕಿತ್ತು ಹಾಕಿದ ಕಂಪನಿ, ಕೋರ್ಟ್ ಮೊರೆ ಹೋದಾತನಿಗೆ ಬಂಪರ್

ಕಂಪನಿಯು ತನ್ನನ್ನು ಕೆಲಸದಿಂದ ತೆಗೆದು ಹಾಕಿತು ಎಂದು ಆರೋಪಿಸಿ ನ್ಯಾಯ ಕೇಳಿಕೊಂಡು ಕೋರ್ಟ್ ಮೆಟ್ಟಿಲೇರಿದ ಉದ್ಯೋಗ ಕಳೆದುಕೊಂಡ ವ್ಯಕ್ತಿಯ ಬ್ಯಾಂಕ್ ಅಕೌಂಟ್​ಗೆ ಲಕ್ಷಾಂತರ ರೂಪಾಯಿ ಬೀಳುವಂತಾಯಿತು.

Trending: ನಿಯಮ ಪಾಲಿಸದ್ದಕ್ಕೆ ಕೆಲಸದಿಂದ ಕಿತ್ತು ಹಾಕಿದ ಕಂಪನಿ, ಕೋರ್ಟ್ ಮೊರೆ ಹೋದಾತನಿಗೆ ಬಂಪರ್
ನಿಯಮ ಪಾಲಿಸದ್ದಕ್ಕೆ ಕೆಲಸದಿಂದ ಕಿತ್ತು ಹಾಕಿದ ಕಂಪನಿ; ಕೋರ್ಟ್ ಮೊರೆ ಹೋದಾತನಿಗೆ ಬಂಪರ್Image Credit source: ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Oct 16, 2022 | 5:40 PM

ಕೊರೋನಾ ವೈರಸ್ ಹರಡಿದ ನಂತರ ಮನೆಯಿಂದಲೇ ಕೆಲಸ ಮಾಡುವುದು ಆದ್ಯತೆಯಾಗಿದೆ. ಲಾಕ್‌ಡೌನ್‌ನಿಂದಾಗಿ ಅನೇಕ ಕಂಪನಿಗಳು ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ ಮಾಡುವ ಆಯ್ಕೆಯನ್ನು ನೀಡಿದೆ. ಪ್ರಸ್ತುತ ಪ್ರಪಂಚದಾದ್ಯಂತ ಅನೇಕ ಕಂಪನಿಗಳು ಈ ವಿಧಾನವನ್ನು ಅನುಸರಿಸುತ್ತಿವೆ. ಆದರೆ ಈಗ ಕೊರೋನಾ ಹರಡುವಿಕೆ ಕಡಿಮೆಯಾಗಿದೆ ಮತ್ತು ಪರಿಸ್ಥಿತಿಗಳು ಸುಧಾರಿಸಿರುವುದರಿಂದ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ತಮ್ಮ ಕಚೇರಿಗಳಲ್ಲಿ ಕೆಲಸ ಮಾಡುವಂತೆ ಸೂಚಿಸುತ್ತಿವೆ. ಆದರೆ ಕೆಲವು ಕಂಪನಿಗಳು ತಮ್ಮ ಉದ್ಯೋಗಿಗಳ ಮೇಲೆ ವಿಚಿತ್ರ ನಿಯಮಗಳನ್ನು ಹೇರುತ್ತಿವೆ. ತಾವು ಸೂಚಿಸುವ ನಿಯಮಗಳನ್ನು ಅನುಸರಿಸಬೇಕು ಎಂದು ಕಟ್ಟುನಿಟ್ಟಾಗಿ ಹೇಳುತ್ತವೆ. ಈ ಕ್ರಮದಲ್ಲಿ ಅಮೆರಿಕದ ಕಂಪನಿಯೊಂದು ವಿಚಿತ್ರ ನಿಯಮ ಜಾರಿ ಮಾಡಿ ಅದನ್ನು ಪಾಲಿಸದ ಉದ್ಯೋಗಿಯನ್ನು ವಜಾ ಮಾಡಿದೆ. ಕಂಪನಿಯ ವರ್ತನೆ ವಿರುದ್ಧ ಉದ್ಯೋಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರಿಂದ ಅವರಿಗೆ ನ್ಯಾಯದ ಜತೆಗೆ ಪರಿಹಾರವೂ ಸಿಕ್ಕಿದೆ.

ಫ್ಲೋರಿಡಾ ಮೂಲದ ಟೆಲಿಮಾರ್ಕೆಟಿಂಗ್ ಕಂಪನಿಯು ತನ್ನ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವ ಆಯ್ಕೆಯನ್ನು ಒದಗಿಸಿದೆ. ಆದರೆ ಇದಕ್ಕೆ ವಿಚಿತ್ರ ನಿಯಮವೊಂದನ್ನ ಕೂಡ ಜಾರಿಗೊಳಿಸಿತು. ಉದ್ಯೋಗಿಗಳು ದಿನಕ್ಕೆ ಒಂಬತ್ತು ಗಂಟೆಗಳ ಕಾಲ ಕ್ಯಾಮೆರಾವನ್ನು ಆನ್ ಮಾಡಬೇಕು ಮತ್ತು ತಮ್ಮ ಲ್ಯಾಪ್‌ಟಾಪ್ ಪರದೆಯನ್ನು ಹಂಚಿಕೊಳ್ಳಬೇಕು. ಆದರೆ ಕಂಪನಿ ಹಾಕಿದ್ದ ಈ ಷರತ್ತನ್ನು ಉದ್ಯೋಗಿಯೊಬ್ಬರು ಒಪ್ಪಿರಲಿಲ್ಲ. ಇದು ತನ್ನ ಖಾಸಗಿತನದ ಮೇಲಿನ ಆಕ್ರಮಣ ಎಂದು ಅವರು ಭಾವಿಸಿ ನಿಯಮಗಳನ್ನು ಬದಿಗಿಟ್ಟರು. ನೌಕರನ ವರ್ತನೆಯಿಂದ ಕೋಪಗೊಂಡ ಕಂಪನಿಯು ಆತನನ್ನು ಕೆಲಸದಿಂದ ತೆಗೆದುಹಾಕಿತು.

ಕಂಪನಿ ವಿನಾಕಾರಣ ವಜಾ ಮಾಡಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ವ್ಯಕ್ತಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿ ಕಂಪನಿಯ ಆದೇಶಗಳು ಸರಿಯಾಗಿಲ್ಲ ಮತ್ತು ಉದ್ಯೋಗಿಯನ್ನು ವಜಾಗೊಳಿಸಲು ಯಾವುದೇ ಮಾನ್ಯ ಕಾರಣಗಳಿಲ್ಲ ಎಂದು ಹೇಳಿದೆ. ಇದಲ್ಲದೇ ಉದ್ಯೋಗಿಗೆ 72,700 ಅಮೆರಿಕನ್ ಡಾಲರ್ (ಸುಮಾರು 60 ಲಕ್ಷ ರೂ.) ಪಾವತಿಸುವಂತೆ ಆದೇಶಿಸಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Sun, 16 October 22

ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK