AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಭಾರತಕ್ಕೆ ಹೋಲಿಸಿದ್ರೆ ವಿದೇಶದಲ್ಲಿ ಈ ಸಮಸ್ಯೆಗಳೇ ಇರಲ್ಲ; ಅನಿವಾಸಿ ಭಾರತೀಯ ಹೀಗೆಂದಿದ್ದೇಕೆ?

ವಿದೇಶದಲ್ಲಿ ನೆಲೆಸಿರುವವರು ಭಾರತಕ್ಕೆ ಮರಳಿದಾಗ ಇಲ್ಲಿನ ಜೀವನಶೈಲಿಗೆ ಹೊಂದಿಕೊಳ್ಳಲು ಕಷ್ಟ ಪಡುತ್ತಾರೆ. ಅನಿವಾಸಿ ಭಾರತೀಯರೊಬ್ಬರು ಭಾರತಕ್ಕೆ ಹಿಂದಿರುಗಿದ ಬಳಿಕ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಬಿಚ್ಚಿಟ್ಟಿದ್ದಾರೆ. ಐರ್ಲೆಂಡ್‌ನಲ್ಲಿ ಎಂದಿಗೂ ಯೋಚಿಸದ ಸಮಸ್ಯೆಗಳ ಬಗ್ಗೆ ಇಲ್ಲಿ ಚಿಂತಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ವ್ಯಕ್ತಿಯ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

Viral: ಭಾರತಕ್ಕೆ ಹೋಲಿಸಿದ್ರೆ ವಿದೇಶದಲ್ಲಿ ಈ ಸಮಸ್ಯೆಗಳೇ ಇರಲ್ಲ; ಅನಿವಾಸಿ ಭಾರತೀಯ ಹೀಗೆಂದಿದ್ದೇಕೆ?
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on:Dec 08, 2025 | 1:13 PM

Share

ವಿದೇಶದಲ್ಲಿ ಉದ್ಯೋಗಕ್ಕಾಗಿ ನೆಲೆಸಿರುವ ವ್ಯಕ್ತಿಗಳು ವರ್ಷಗಳು ಉರುಳಿದಂತೆ ತಮ್ಮ ದೇಶಕ್ಕೆ ಮರಳುವುದು ಸಹಜ. ಹೌದು, ಐರ್ಲೆಂಡ್‌ನಿಂದ (Ireland) ಭಾರತಕ್ಕೆ(India) ಮರಳಿದ ಬಳಿಕ ತಾನು ಎದುರಿಸಿದ ಹಲವಾರು ಸಮಸ್ಯೆಗಳ ಬಗ್ಗೆ ಕಾನ್ಪುರ ಮೂಲದ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. ಕೋರ್ಸೆರಾದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ನಾವೀನ್ಯತೆ ತಂತ್ರಜ್ಞಾನ ವ್ಯವಸ್ಥಾಪಕ ಆಗಿರುವ ಆಕಾಶ್ ತಿವಾರಿ, ಐರ್ಲೆಂಡ್‌ನಲ್ಲಿ ಎಂದಿಗೂ ಯೋಚಿಸದ ಸಮಸ್ಯೆಗಳ ಬಗ್ಗೆ ಇಲ್ಲಿ ಚಿಂತಿಸಬೇಕಾಗಿದೆ ಎಂದು ಹೇಳಿದ್ದಾರೆ. ಮೂರು ಸಮಸ್ಯೆಗಳ ಪಟ್ಟಿ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಂತೆ  ನೆಟ್ಟಿಗರು ಇಲ್ಲಿನ ಸಮಸ್ಯೆಗಳಿಗೆ ಹೊಂದಿಕೊಳ್ಳುವುದು ಅನಿರ್ವಾಯ ಎಂದು ಹೇಳಿದ್ದಾರೆ.

ಆಕಾಶ್ ತಿವಾರಿ (@akashtivari1007) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಭಾರತಕ್ಕೆ ಮರಳಿದ ಬಳಿಕ ನನ್ನ ಜೀವನದಲ್ಲಿ ಹಲವು ಸಮಸ್ಯೆಗಳನ್ನು ತಂದಿದೆ, ಐರ್ಲೆಂಡ್‌ನಲ್ಲಿ ನಾನು ಎಂದಿಗೂ ಈ ಬಗ್ಗೆ ಚಿಂತಿಸಬೇಕಾಗಿರಲಿಲ್ಲ ಎಂದು ಹೇಳಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ನಾನು ಕಾನ್ಪುರದಲ್ಲಿದ್ದೇನೆ. ಸರಾಸರಿ ಪ್ರತಿದಿನ 4-5 ಗಂಟೆಗಳ ಕಾಲ ವಿದ್ಯುತ್ ಕಡಿತಗೊಳ್ಳುತ್ತದೆ.ಈ ಪೋಸ್ಟ್‌ ಮಾಡುವ ಸಮಯದಲ್ಲೂ ನಮಗೆ ವಿದ್ಯುತ್ ಇಲ್ಲ. ಡಬ್ಲಿನ್‌ನಲ್ಲಿ ನನ್ನ ಮೂರು ವರ್ಷಗಳ ವಾಸ್ತವ್ಯದಲ್ಲಿ, ನನ್ನ ಮೀಟರ್ ಬದಲಾಯಿಸಲು ಕೇವಲ ಒಂದು ಬಾರಿ ಮಾತ್ರ 15 ನಿಮಿಷಗಳ ಕಾಲ ವಿದ್ಯುತ್ ಕಡಿತಗೊಳಿಸಲಾಯಿತು. ಈ ಕಡಿತದ ಬಗ್ಗೆ 1 ತಿಂಗಳ ಮುಂಚಿತವಾಗಿ ನನಗೆ ತಿಳಿಸಲಾಯಿತು. ಇನ್ನು ಇಲ್ಲಿ ವಾಯು ಮಾಲಿನ್ಯ,  ಸಂಚಾರ ದಟ್ಟಣೆ ಹಾಗೂ ಹಾರ್ನ್ ಶಬ್ದ. ಇವು ಮಾನವ ನಿರ್ಮಿತ ಕೃತಕವಾಗಿ ಸೃಷ್ಟಿಸಲಾದ ಸಮಸ್ಯೆಗಳು. ಇವುಗಳು ಮೊದಲ ಸ್ಥಾನದಲ್ಲಿ ಇರಬಾರದು.  ಹೀಗಿದ್ದಾಗ ಜನರು ಜೀವನದ ಇತರ ಪ್ರಮುಖ ವಿಷಯಗಳತ್ತ ಗಮನ ಹರಿಸಬಹುದು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಐದು ವರ್ಷಗಳ ಬಳಿಕ ಕೆನಾಡದಿಂದ ಭಾರತಕ್ಕೆ ಮರಳುವ ನಿರ್ಧಾರ; ಅಸಲಿ ಕಾರಣ ಬಿಚ್ಚಿಟ್ಟ ಅನಿವಾಸಿ ಭಾರತೀಯ

ಈ ಪೋಸ್ಟ್ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಭಾರತ ನಿಮ್ಮನ್ನು ಆಹ್ವಾನಿಸಿದೆಯೇ… ಅದು ನಿಮ್ಮ ಆಯ್ಕೆ ಎಂದು ಭಾವಿಸುತ್ತೇವೆ. ನೀವು ಇಲ್ಲಿ ಕಾಣುವ ಐರ್ಲೆಂಡ್‌ನಲ್ಲಿ ಕಾಣದ ಹಲವಾರು ವಿಷಯಗಳಿವೆ… ದಯವಿಟ್ಟು ಅದನ್ನೂ ಹೇಳಿ ಎಂದಿದ್ದಾರೆ. ಮತ್ತೊಬ್ಬರು, ಇಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರ ಭಾರತ ಸರ್ಕಾರವು ಹೆಚ್ಚು ಹೆಚ್ಚು ವಿದ್ಯುತ್ ಸ್ಥಾವರಗಳನ್ನು ಯಾವುದಕ್ಕಾಗಿ ಎಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Mon, 8 December 25

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ