AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: BMTC ಬಸ್ ಕಂಡಕ್ಟರ್ 5 ರೂ. ಚಿಲ್ಲರೆ ವಾಪಸ್ ಕೊಟ್ಟಿಲ್ಲ; ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಪ್ರಯಾಣಿಕ

ಬಿ.ಎಂ.ಟಿ.ಸಿ ಬಸ್ ಕಂಡಕ್ಟರ್ 5 ರೂಪಾಯಿ ಚಿಲ್ಲರೆ ಹಣವನ್ನು ವಾಪಸ್ ನೀಡಿಲ್ಲ ಎಂದು ಪ್ರಯಾಣಿಕರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. 

Viral Post: BMTC ಬಸ್ ಕಂಡಕ್ಟರ್ 5 ರೂ. ಚಿಲ್ಲರೆ ವಾಪಸ್ ಕೊಟ್ಟಿಲ್ಲ; ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಪ್ರಯಾಣಿಕ
ವೈರಲ್​​ ಪೋಸ್ಟ್​​​
ಮಾಲಾಶ್ರೀ ಅಂಚನ್​
| Edited By: |

Updated on:Apr 17, 2024 | 11:46 AM

Share

ಸಾಮಾನ್ಯವಾಗಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಚಿಲ್ಲರೆ ಹಣದ ವಿಷಯವಾಗಿ ಆಗಾಗ್ಗೆ ಜಗಳಗಳು ನಡೆಯುತ್ತಿರುತ್ತವೆ. ಹೆಚ್ಚಾಗಿ ಕಂಡಕ್ಟರ್ ಗಳು  ಚಿಲ್ಲರೆ ಕೊಟ್ಟು ಸಹಕರಿಸಿ ಎಂದು ಕೇಳಿಕೊಳ್ಳುತ್ತಾರೆ. ಏನಾದ್ರೂ ಬಸ್ ಟಿಕೆಟ್ 19 ರೂ. ಇದ್ದರೆ ಕೆಲವೊಂದು ಕಂಡಕ್ಟರ್ 1 ರೂಪಾಯಿ ಚಿಲ್ಲರೆ ಹಣವನ್ನು ಮತ್ತೆ ಕೊಡುತ್ತೇನೆ ಎಂದು ಪ್ರಯಾಣಿಕರಿಗೆ ವಾಪಸ್ ಹಿಂದಿರುಗಿಸೋದೇ ಇಲ್ಲ. ಇದೀಗ ಅದೇ ರೀತಿಯ ಘಟನೆಯೊಂದು ಬೆಂಗಳೂರಿನ ಬಿ.ಎಂ.ಟಿ.ಸಿ ಬಸ್ ಒಂದರಲ್ಲಿ ನಡೆದಿದ್ದು, ಕಂಡಕ್ಟರ್ 5 ರೂಪಾಯಿ ಚಿಲ್ಲರೆ ಹಣ ವಾಪಸ್ ಕೊಟ್ಟಿಲ್ಲ ಎಂದು ಆ ಪ್ರಯಾಣಿಕ  ತನ್ನ ಅಸಮಾಧಾನವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾನೆ. ಈ ಕುರಿತ ಪೋಸ್ಟ್ ಒಂದು ಸಖತ್ ವೈರಲ್ ಆಗುತ್ತಿದೆ.

ಈ ಪೋಸ್ಟ್​​ನ್ನು ನಿತೀನ್ ಕೃಷ್ಣ (N_4_NITHIN) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಕಂಡಕ್ಟರ್ ಬಳಿ 1 ರೂಪಾಯಿ ಚೇಂಜ್ ಕೂಡಾ ಇಲ್ಲವೇ? ನಾನು ನನ್ನ 5 ರೂಪಾಯಿ ಹಣವನ್ನು ಕಳೆದುಕೊಂಡೆ, ಇದಕ್ಕೆ ಏನಾದರೂ ಪರಿಹಾರ ಇದೆಯೇ?” ಎಂದು ಬಿ.ಎಂ.ಟಿ.ಸಿಯ ಅಧೀಕೃತ ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ನಿತೀನ್ ಅವರು ಬಿ.ಎಂ.ಟಿ.ಸಿ ಬಸ್ಸಿನಲ್ಲಿ ರಾಗಿಗುಡ್ಡ ದೇವಸ್ಥಾನದಿಂದ ಹೆಚ್.ಎಸ್.ಆರ್ ಡಿಪೋದ ಕಡೆ ಹೋಗುತ್ತಾರೆ. ಟಿಕೆಟ್ ಬೆಲೆ ರೂಪಾಯಿ 15 ಆಗಿದ್ದರಿಂದ ನಿತೀನ್ 20 ರೂಪಾಯಿ ನೋಟನ್ನು ಕಂಡಕ್ಟರ್ ಗೆ ನೀಡುತ್ತಾರೆ. ಆದರೆ ಆ ಕಂಡಕ್ಟರ್ ವಾಪಸ್ 5 ರೂಪಾಯಿ ಚಿಲ್ಲರೆ ಹಣವನ್ನು ನೀಡಲೇ ಇಲ್ಲ. ಹೀಗೆ ಕಂಡಕ್ಟರ್  ಚಿಲ್ಲರೆ ಹಣವನ್ನು ವಾಪಸ್ ನೀಡಿಲ್ಲ ಎಂಬ ವಿಚಾರವನ್ನು ನಿತೀನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಸಂಗಾತಿಯೊಂದಿಗೆ ಸ್ನಾನ ಮಾಡಿ ನೀರು ಉಳಿಸಿ; ಸರ್ಕಾರ ಘೋಷಣೆ

ಏಪ್ರಿಲ್ 14 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 72 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ರೀತಿ ಸಮಸ್ಯೆಯಾಗಬಾರದೆಂದರೆ UPI ಮೂಲಕ ಟಿಕೆಟ್ ಹಣ ನೀಡಬೇಕು ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:46 am, Wed, 17 April 24

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ