AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: BMTC ಬಸ್ ಕಂಡಕ್ಟರ್ 5 ರೂ. ಚಿಲ್ಲರೆ ವಾಪಸ್ ಕೊಟ್ಟಿಲ್ಲ; ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಪ್ರಯಾಣಿಕ

ಬಿ.ಎಂ.ಟಿ.ಸಿ ಬಸ್ ಕಂಡಕ್ಟರ್ 5 ರೂಪಾಯಿ ಚಿಲ್ಲರೆ ಹಣವನ್ನು ವಾಪಸ್ ನೀಡಿಲ್ಲ ಎಂದು ಪ್ರಯಾಣಿಕರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. 

Viral Post: BMTC ಬಸ್ ಕಂಡಕ್ಟರ್ 5 ರೂ. ಚಿಲ್ಲರೆ ವಾಪಸ್ ಕೊಟ್ಟಿಲ್ಲ; ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಪ್ರಯಾಣಿಕ
ವೈರಲ್​​ ಪೋಸ್ಟ್​​​
ಮಾಲಾಶ್ರೀ ಅಂಚನ್​
| Edited By: |

Updated on:Apr 17, 2024 | 11:46 AM

Share

ಸಾಮಾನ್ಯವಾಗಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಚಿಲ್ಲರೆ ಹಣದ ವಿಷಯವಾಗಿ ಆಗಾಗ್ಗೆ ಜಗಳಗಳು ನಡೆಯುತ್ತಿರುತ್ತವೆ. ಹೆಚ್ಚಾಗಿ ಕಂಡಕ್ಟರ್ ಗಳು  ಚಿಲ್ಲರೆ ಕೊಟ್ಟು ಸಹಕರಿಸಿ ಎಂದು ಕೇಳಿಕೊಳ್ಳುತ್ತಾರೆ. ಏನಾದ್ರೂ ಬಸ್ ಟಿಕೆಟ್ 19 ರೂ. ಇದ್ದರೆ ಕೆಲವೊಂದು ಕಂಡಕ್ಟರ್ 1 ರೂಪಾಯಿ ಚಿಲ್ಲರೆ ಹಣವನ್ನು ಮತ್ತೆ ಕೊಡುತ್ತೇನೆ ಎಂದು ಪ್ರಯಾಣಿಕರಿಗೆ ವಾಪಸ್ ಹಿಂದಿರುಗಿಸೋದೇ ಇಲ್ಲ. ಇದೀಗ ಅದೇ ರೀತಿಯ ಘಟನೆಯೊಂದು ಬೆಂಗಳೂರಿನ ಬಿ.ಎಂ.ಟಿ.ಸಿ ಬಸ್ ಒಂದರಲ್ಲಿ ನಡೆದಿದ್ದು, ಕಂಡಕ್ಟರ್ 5 ರೂಪಾಯಿ ಚಿಲ್ಲರೆ ಹಣ ವಾಪಸ್ ಕೊಟ್ಟಿಲ್ಲ ಎಂದು ಆ ಪ್ರಯಾಣಿಕ  ತನ್ನ ಅಸಮಾಧಾನವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾನೆ. ಈ ಕುರಿತ ಪೋಸ್ಟ್ ಒಂದು ಸಖತ್ ವೈರಲ್ ಆಗುತ್ತಿದೆ.

ಈ ಪೋಸ್ಟ್​​ನ್ನು ನಿತೀನ್ ಕೃಷ್ಣ (N_4_NITHIN) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಕಂಡಕ್ಟರ್ ಬಳಿ 1 ರೂಪಾಯಿ ಚೇಂಜ್ ಕೂಡಾ ಇಲ್ಲವೇ? ನಾನು ನನ್ನ 5 ರೂಪಾಯಿ ಹಣವನ್ನು ಕಳೆದುಕೊಂಡೆ, ಇದಕ್ಕೆ ಏನಾದರೂ ಪರಿಹಾರ ಇದೆಯೇ?” ಎಂದು ಬಿ.ಎಂ.ಟಿ.ಸಿಯ ಅಧೀಕೃತ ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ನಿತೀನ್ ಅವರು ಬಿ.ಎಂ.ಟಿ.ಸಿ ಬಸ್ಸಿನಲ್ಲಿ ರಾಗಿಗುಡ್ಡ ದೇವಸ್ಥಾನದಿಂದ ಹೆಚ್.ಎಸ್.ಆರ್ ಡಿಪೋದ ಕಡೆ ಹೋಗುತ್ತಾರೆ. ಟಿಕೆಟ್ ಬೆಲೆ ರೂಪಾಯಿ 15 ಆಗಿದ್ದರಿಂದ ನಿತೀನ್ 20 ರೂಪಾಯಿ ನೋಟನ್ನು ಕಂಡಕ್ಟರ್ ಗೆ ನೀಡುತ್ತಾರೆ. ಆದರೆ ಆ ಕಂಡಕ್ಟರ್ ವಾಪಸ್ 5 ರೂಪಾಯಿ ಚಿಲ್ಲರೆ ಹಣವನ್ನು ನೀಡಲೇ ಇಲ್ಲ. ಹೀಗೆ ಕಂಡಕ್ಟರ್  ಚಿಲ್ಲರೆ ಹಣವನ್ನು ವಾಪಸ್ ನೀಡಿಲ್ಲ ಎಂಬ ವಿಚಾರವನ್ನು ನಿತೀನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಸಂಗಾತಿಯೊಂದಿಗೆ ಸ್ನಾನ ಮಾಡಿ ನೀರು ಉಳಿಸಿ; ಸರ್ಕಾರ ಘೋಷಣೆ

ಏಪ್ರಿಲ್ 14 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 72 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ರೀತಿ ಸಮಸ್ಯೆಯಾಗಬಾರದೆಂದರೆ UPI ಮೂಲಕ ಟಿಕೆಟ್ ಹಣ ನೀಡಬೇಕು ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:46 am, Wed, 17 April 24

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು