AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ

Shiva Chouhan : ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ
ಸಿಯಾಚಿನ್​ನಲ್ಲಿ ನಿಯೋಜಿತಗೊಂಡು ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್
TV9 Web
| Edited By: |

Updated on:Jan 04, 2023 | 12:21 PM

Share

Viral Video : ಜಗತ್ತಿನ ಅತೀ ಎತ್ತರದ ಯುದ್ಧಭೂಮಿ ಸಿಯಾಚಿನ್​ಗೆ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕ್ಯಾಪ್ಟನ್ ಶಿವಾ ಚೌಹಾಣ್. ಈ ಕುರಿತು ಉದ್ಯಮಿ ಆನಂದ ಮಹೀಂದ್ರಾ ಟ್ವೀಟ್ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಅನೇಕರು ಶಿವಾ ಅವರಿಗೆ ಗೌರವದಿಂದ ಮೆಚ್ಚುಗೆ ಸೂಚಿಸುತ್ತಿದ್ಧಾರೆ ಮತ್ತು ಅಭಿನಂದಿಸುತ್ತಿದ್ದಾರೆ.

ಸಿಯಾಚಿನ್​ನಲ್ಲಿ ಯುದ್ಧ ಸಂಬಂಧಿ ಚಟುವಟಿಕೆಗಳನ್ನು ನಿರ್ವಹಿಸಲು ಮೊದಲ ಸಲ ಮಹಿಳಾ ಅಧಿಕಾರಿಯನ್ನು ನಿಯೋಜಿಸಲಾದ ವಿಷಯವನ್ನು ಎಎನ್​ಐ ತನ್ನ ಟ್ವೀಟ್​ನಲ್ಲಿ ಹಂಚಿಕೊಂಡಿದೆ. ಜನವರಿ 2ರಂದು ಎಎನ್​ಐನ ವಿಡಿಯೋ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ್ದಾರೆ ಆನಂದ ಮಹೀಂದ್ರಾ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ. ನೂರಾರು ಜನರು ಈ ವಿಡಿಯೋಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಮದುವೆಯಲ್ಲಿ ವರ, ವಧುವಿನ ಲೈವ್ ಪೋರ್ಟ್ರೇಟ್ ಮಾಡಿದ ವಿಡಿಯೋ ವೈರಲ್; ಎಂಥಾ ಅದೃಷ್ಟ ಎಂದ ನೆಟ್ಟಿಗರು ​

ಇಂಥ ಧೈರ್ಯಶಾಲಿಯನ್ನು ಹೆತ್ತ ಪೋಷಕರಿಗೆ ಸೆಲ್ಯೂಟ್​, ದೇವರು ಇವರೆಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ ಅನೇಕರು. ಈ ಹುದ್ದೆಯನ್ನೇರಿದ ಅವರಿಗೆ, ಅವರ ಕುಟುಂಬದ ಧೈರ್ಯಕ್ಕೆ ಸೆಲ್ಯೂಟ್​! ಎಂದಿದ್ದಾರೆ ಮತ್ತೊಬ್ಬರು. ನಿಮ್ಮ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:19 pm, Wed, 4 January 23

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?