AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ

Shiva Chouhan : ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ
ಸಿಯಾಚಿನ್​ನಲ್ಲಿ ನಿಯೋಜಿತಗೊಂಡು ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್
TV9 Web
| Edited By: |

Updated on:Jan 04, 2023 | 12:21 PM

Share

Viral Video : ಜಗತ್ತಿನ ಅತೀ ಎತ್ತರದ ಯುದ್ಧಭೂಮಿ ಸಿಯಾಚಿನ್​ಗೆ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕ್ಯಾಪ್ಟನ್ ಶಿವಾ ಚೌಹಾಣ್. ಈ ಕುರಿತು ಉದ್ಯಮಿ ಆನಂದ ಮಹೀಂದ್ರಾ ಟ್ವೀಟ್ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಅನೇಕರು ಶಿವಾ ಅವರಿಗೆ ಗೌರವದಿಂದ ಮೆಚ್ಚುಗೆ ಸೂಚಿಸುತ್ತಿದ್ಧಾರೆ ಮತ್ತು ಅಭಿನಂದಿಸುತ್ತಿದ್ದಾರೆ.

ಸಿಯಾಚಿನ್​ನಲ್ಲಿ ಯುದ್ಧ ಸಂಬಂಧಿ ಚಟುವಟಿಕೆಗಳನ್ನು ನಿರ್ವಹಿಸಲು ಮೊದಲ ಸಲ ಮಹಿಳಾ ಅಧಿಕಾರಿಯನ್ನು ನಿಯೋಜಿಸಲಾದ ವಿಷಯವನ್ನು ಎಎನ್​ಐ ತನ್ನ ಟ್ವೀಟ್​ನಲ್ಲಿ ಹಂಚಿಕೊಂಡಿದೆ. ಜನವರಿ 2ರಂದು ಎಎನ್​ಐನ ವಿಡಿಯೋ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ್ದಾರೆ ಆನಂದ ಮಹೀಂದ್ರಾ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ. ನೂರಾರು ಜನರು ಈ ವಿಡಿಯೋಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಮದುವೆಯಲ್ಲಿ ವರ, ವಧುವಿನ ಲೈವ್ ಪೋರ್ಟ್ರೇಟ್ ಮಾಡಿದ ವಿಡಿಯೋ ವೈರಲ್; ಎಂಥಾ ಅದೃಷ್ಟ ಎಂದ ನೆಟ್ಟಿಗರು ​

ಇಂಥ ಧೈರ್ಯಶಾಲಿಯನ್ನು ಹೆತ್ತ ಪೋಷಕರಿಗೆ ಸೆಲ್ಯೂಟ್​, ದೇವರು ಇವರೆಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ ಅನೇಕರು. ಈ ಹುದ್ದೆಯನ್ನೇರಿದ ಅವರಿಗೆ, ಅವರ ಕುಟುಂಬದ ಧೈರ್ಯಕ್ಕೆ ಸೆಲ್ಯೂಟ್​! ಎಂದಿದ್ದಾರೆ ಮತ್ತೊಬ್ಬರು. ನಿಮ್ಮ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:19 pm, Wed, 4 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ