AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ

Shiva Chouhan : ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ
ಸಿಯಾಚಿನ್​ನಲ್ಲಿ ನಿಯೋಜಿತಗೊಂಡು ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್
TV9 Web
| Edited By: ಶ್ರೀದೇವಿ ಕಳಸದ|

Updated on:Jan 04, 2023 | 12:21 PM

Share

Viral Video : ಜಗತ್ತಿನ ಅತೀ ಎತ್ತರದ ಯುದ್ಧಭೂಮಿ ಸಿಯಾಚಿನ್​ಗೆ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕ್ಯಾಪ್ಟನ್ ಶಿವಾ ಚೌಹಾಣ್. ಈ ಕುರಿತು ಉದ್ಯಮಿ ಆನಂದ ಮಹೀಂದ್ರಾ ಟ್ವೀಟ್ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಅನೇಕರು ಶಿವಾ ಅವರಿಗೆ ಗೌರವದಿಂದ ಮೆಚ್ಚುಗೆ ಸೂಚಿಸುತ್ತಿದ್ಧಾರೆ ಮತ್ತು ಅಭಿನಂದಿಸುತ್ತಿದ್ದಾರೆ.

ಸಿಯಾಚಿನ್​ನಲ್ಲಿ ಯುದ್ಧ ಸಂಬಂಧಿ ಚಟುವಟಿಕೆಗಳನ್ನು ನಿರ್ವಹಿಸಲು ಮೊದಲ ಸಲ ಮಹಿಳಾ ಅಧಿಕಾರಿಯನ್ನು ನಿಯೋಜಿಸಲಾದ ವಿಷಯವನ್ನು ಎಎನ್​ಐ ತನ್ನ ಟ್ವೀಟ್​ನಲ್ಲಿ ಹಂಚಿಕೊಂಡಿದೆ. ಜನವರಿ 2ರಂದು ಎಎನ್​ಐನ ವಿಡಿಯೋ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ್ದಾರೆ ಆನಂದ ಮಹೀಂದ್ರಾ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ. ನೂರಾರು ಜನರು ಈ ವಿಡಿಯೋಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಮದುವೆಯಲ್ಲಿ ವರ, ವಧುವಿನ ಲೈವ್ ಪೋರ್ಟ್ರೇಟ್ ಮಾಡಿದ ವಿಡಿಯೋ ವೈರಲ್; ಎಂಥಾ ಅದೃಷ್ಟ ಎಂದ ನೆಟ್ಟಿಗರು ​

ಇಂಥ ಧೈರ್ಯಶಾಲಿಯನ್ನು ಹೆತ್ತ ಪೋಷಕರಿಗೆ ಸೆಲ್ಯೂಟ್​, ದೇವರು ಇವರೆಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ ಅನೇಕರು. ಈ ಹುದ್ದೆಯನ್ನೇರಿದ ಅವರಿಗೆ, ಅವರ ಕುಟುಂಬದ ಧೈರ್ಯಕ್ಕೆ ಸೆಲ್ಯೂಟ್​! ಎಂದಿದ್ದಾರೆ ಮತ್ತೊಬ್ಬರು. ನಿಮ್ಮ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:19 pm, Wed, 4 January 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ