AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ

Shiva Chouhan : ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ
ಸಿಯಾಚಿನ್​ನಲ್ಲಿ ನಿಯೋಜಿತಗೊಂಡು ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್
TV9 Web
| Edited By: ಶ್ರೀದೇವಿ ಕಳಸದ|

Updated on:Jan 04, 2023 | 12:21 PM

Share

Viral Video : ಜಗತ್ತಿನ ಅತೀ ಎತ್ತರದ ಯುದ್ಧಭೂಮಿ ಸಿಯಾಚಿನ್​ಗೆ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕ್ಯಾಪ್ಟನ್ ಶಿವಾ ಚೌಹಾಣ್. ಈ ಕುರಿತು ಉದ್ಯಮಿ ಆನಂದ ಮಹೀಂದ್ರಾ ಟ್ವೀಟ್ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಅನೇಕರು ಶಿವಾ ಅವರಿಗೆ ಗೌರವದಿಂದ ಮೆಚ್ಚುಗೆ ಸೂಚಿಸುತ್ತಿದ್ಧಾರೆ ಮತ್ತು ಅಭಿನಂದಿಸುತ್ತಿದ್ದಾರೆ.

ಸಿಯಾಚಿನ್​ನಲ್ಲಿ ಯುದ್ಧ ಸಂಬಂಧಿ ಚಟುವಟಿಕೆಗಳನ್ನು ನಿರ್ವಹಿಸಲು ಮೊದಲ ಸಲ ಮಹಿಳಾ ಅಧಿಕಾರಿಯನ್ನು ನಿಯೋಜಿಸಲಾದ ವಿಷಯವನ್ನು ಎಎನ್​ಐ ತನ್ನ ಟ್ವೀಟ್​ನಲ್ಲಿ ಹಂಚಿಕೊಂಡಿದೆ. ಜನವರಿ 2ರಂದು ಎಎನ್​ಐನ ವಿಡಿಯೋ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ್ದಾರೆ ಆನಂದ ಮಹೀಂದ್ರಾ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ. ನೂರಾರು ಜನರು ಈ ವಿಡಿಯೋಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಮದುವೆಯಲ್ಲಿ ವರ, ವಧುವಿನ ಲೈವ್ ಪೋರ್ಟ್ರೇಟ್ ಮಾಡಿದ ವಿಡಿಯೋ ವೈರಲ್; ಎಂಥಾ ಅದೃಷ್ಟ ಎಂದ ನೆಟ್ಟಿಗರು ​

ಇಂಥ ಧೈರ್ಯಶಾಲಿಯನ್ನು ಹೆತ್ತ ಪೋಷಕರಿಗೆ ಸೆಲ್ಯೂಟ್​, ದೇವರು ಇವರೆಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ ಅನೇಕರು. ಈ ಹುದ್ದೆಯನ್ನೇರಿದ ಅವರಿಗೆ, ಅವರ ಕುಟುಂಬದ ಧೈರ್ಯಕ್ಕೆ ಸೆಲ್ಯೂಟ್​! ಎಂದಿದ್ದಾರೆ ಮತ್ತೊಬ್ಬರು. ನಿಮ್ಮ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:19 pm, Wed, 4 January 23

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು