AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ

Shiva Chouhan : ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ.

ಸಿಯಾಚಿನ್​ನಲ್ಲಿ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್​ಗೆ ನೆಟ್ಟಿಗರಿಂದ ಅಭಿನಂದನೆ
ಸಿಯಾಚಿನ್​ನಲ್ಲಿ ನಿಯೋಜಿತಗೊಂಡು ಮೊದಲ ಮಹಿಳಾ ಕ್ಯಾಪ್ಟನ್​ ಶಿವಾ ಚೌಹಾಣ್
TV9 Web
| Edited By: |

Updated on:Jan 04, 2023 | 12:21 PM

Share

Viral Video : ಜಗತ್ತಿನ ಅತೀ ಎತ್ತರದ ಯುದ್ಧಭೂಮಿ ಸಿಯಾಚಿನ್​ಗೆ ನಿಯೋಜಿಸಲಾದ ಮೊದಲ ಮಹಿಳಾ ಕ್ಯಾಪ್ಟನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕ್ಯಾಪ್ಟನ್ ಶಿವಾ ಚೌಹಾಣ್. ಈ ಕುರಿತು ಉದ್ಯಮಿ ಆನಂದ ಮಹೀಂದ್ರಾ ಟ್ವೀಟ್ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಅನೇಕರು ಶಿವಾ ಅವರಿಗೆ ಗೌರವದಿಂದ ಮೆಚ್ಚುಗೆ ಸೂಚಿಸುತ್ತಿದ್ಧಾರೆ ಮತ್ತು ಅಭಿನಂದಿಸುತ್ತಿದ್ದಾರೆ.

ಸಿಯಾಚಿನ್​ನಲ್ಲಿ ಯುದ್ಧ ಸಂಬಂಧಿ ಚಟುವಟಿಕೆಗಳನ್ನು ನಿರ್ವಹಿಸಲು ಮೊದಲ ಸಲ ಮಹಿಳಾ ಅಧಿಕಾರಿಯನ್ನು ನಿಯೋಜಿಸಲಾದ ವಿಷಯವನ್ನು ಎಎನ್​ಐ ತನ್ನ ಟ್ವೀಟ್​ನಲ್ಲಿ ಹಂಚಿಕೊಂಡಿದೆ. ಜನವರಿ 2ರಂದು ಎಎನ್​ಐನ ವಿಡಿಯೋ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ್ದಾರೆ ಆನಂದ ಮಹೀಂದ್ರಾ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ಶಿವಾ ಶಕ್ತಿ! ಶಿವಾ ಅವರ ಯಶಸ್ಸು ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸೋಣ. ಅವರು ಲಿಂಗತಾರತಮ್ಯವನ್ನು ಸಿಯಾಚನ್​ನ ಹಿಮದ ಆಳದಲ್ಲಿ ಹೂತುಹಾಕುವಂತಾಗಲಿ ಎಂದಿದ್ಧಾರೆ ಆನಂದ ಮಹೀಂದ್ರಾ. ನೂರಾರು ಜನರು ಈ ವಿಡಿಯೋಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಮದುವೆಯಲ್ಲಿ ವರ, ವಧುವಿನ ಲೈವ್ ಪೋರ್ಟ್ರೇಟ್ ಮಾಡಿದ ವಿಡಿಯೋ ವೈರಲ್; ಎಂಥಾ ಅದೃಷ್ಟ ಎಂದ ನೆಟ್ಟಿಗರು ​

ಇಂಥ ಧೈರ್ಯಶಾಲಿಯನ್ನು ಹೆತ್ತ ಪೋಷಕರಿಗೆ ಸೆಲ್ಯೂಟ್​, ದೇವರು ಇವರೆಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ ಅನೇಕರು. ಈ ಹುದ್ದೆಯನ್ನೇರಿದ ಅವರಿಗೆ, ಅವರ ಕುಟುಂಬದ ಧೈರ್ಯಕ್ಕೆ ಸೆಲ್ಯೂಟ್​! ಎಂದಿದ್ದಾರೆ ಮತ್ತೊಬ್ಬರು. ನಿಮ್ಮ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:19 pm, Wed, 4 January 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ