AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವೇ ಕೇಕ್​ ಕಟ್​ ಮಾಡಿ; ಝೊಮ್ಯಾಟೋ ಡೆಲಿವರಿ ಏಜೆಂಟ್​ರನ್ನು ಹೊಸ ವರ್ಷದ ಸಂಭ್ರಮಾಚರಣೆಗೆ ಆಹ್ವಾನಿಸಿದ ವಿಡಿಯೋ ವೈರಲ್

New Year Celebration : ಹೀಗೆ ಸಂತೋಷವನ್ನು ಹಂಚುತ್ತಲೇ ಇರಿ, ಎಂದಾದರೊಂದು ದಿನ ಇದು ಯಾವುದಾದರೊಂದು ರೂಪದಲ್ಲಿ ನಿಮಗೆ ಮರಳುತ್ತದೆ ಎಂದು ನೆಟ್ಟಿಗರು ಬೆಂಗಳೂರಿನ ಯುವಕರನ್ನು ಹಾರೈಸುತ್ತಿದ್ದಾರೆ.

ನೀವೇ ಕೇಕ್​ ಕಟ್​ ಮಾಡಿ; ಝೊಮ್ಯಾಟೋ ಡೆಲಿವರಿ ಏಜೆಂಟ್​ರನ್ನು ಹೊಸ ವರ್ಷದ ಸಂಭ್ರಮಾಚರಣೆಗೆ ಆಹ್ವಾನಿಸಿದ ವಿಡಿಯೋ ವೈರಲ್
ಡೆಲಿವರಿಗೆ ಬಂದ ಝೊಮ್ಯಾಟೋ ಡೆಲಿವರಿ ಏಜೆಂಟ್​ ಕೇಕ್​ ಕಟ್ ಮಾಡುತ್ತಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on: Jan 04, 2023 | 11:19 AM

Share

Viral Video : ಹೀಗೊಂದು ಅನಿರೀಕ್ಷಿತ ಸಂತೋಷ ನೆಟ್ಟಿಗರ ಮನಸ್ಸನ್ನು ಸೂರೆಗೊಳ್ಳುತ್ತಿದೆ. ಫುಡ್ ಡೆಲಿವರಿ ಮಾಡಲು ಬಂದ ಝೊಮ್ಯಾಟೋ ಡೆಲಿವರಿ ಏಜೆಂಟ್​ರನ್ನು ಟೆರೇಸಿಗೆ ಆಹ್ವಾನಿಸಿ ಅವರಿಂದಲೇ ಕೇಕ್​ ಮಾಡಿಸಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ ಬೆಂಗಳೂರಿನ ಈ ಯುವಕರು. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.

ಕಿಶನ್​ ಶ್ರೀವತ್ಸ ಎನ್ನುವವರು ಈ ವಿಡಿಯೋ ಅನ್ನು ಟ್ವೀಟ್ ಮಾಡಿದ್ದಾರೆ. ‘ನಾವು ಡಿಸೆಂಬರ್ 31ರ ರಾತ್ರಿ 11ಕ್ಕೆ ಫುಡ್​ ಆರ್ಡರ್ ಮಾಡಿದೆವು. ಆರ್ಡರ್ ತಲುಪಿದಾಗ ಸರಿಯಾಗಿ 12 ಗಂಟೆ. ಹಾಗಾಗಿ ಡೆಲಿವರಿ ಏಜೆಂಟ್​ ಅವರಿಗೆ ಕೇಕ್ ಕಟ್ ಮಾಡಲು ಹೇಳಿ ಅವರೊಂದಿಗೆ ಹೊಸ ವರ್ಷದ ಸಂಭ್ರಮವನ್ನು ಆಚರಿಸಿದೆವು’ ಎಂದು ನೋಟ್​ ಬರೆದಿದ್ದಾರೆ ಕಿಶನ್.

ಇದನ್ನೂ ಓದಿ : ಹಸುಗೂಸಿಗೆ ಲಾಲಿ ಹಾಡುತ್ತಿರುವ ಉಕ್ರೇನಿಯನ್​ ಸೈನಿಕನ ವಿಡಿಯೋ ವೈರಲ್; ಭಾವುಕರಾದ ನೆಟ್ಟಿಗರು

ಗ್ರಾಹಕರು ಕೇಕ್​ ಕಟ್ ಮಾಡಲು ಹೇಳಿದಾಗ ಡೆಲಿವರಿ ಏಜೆಂಟ್​ ಸಂಕೋಚ ಪಡುತ್ತಾರೆ. ಆದರೆ ಯುವಕರು ಅವರನ್ನು ಒತ್ತಾಯಿಸಿ ಕೇಕ್​ ಕಟ್ ಮಾಡಿಸುತ್ತಾರೆ. ಜೊತೆಗೆ ಪರಸ್ಪರ ಕೇಕ್ ಕೂಡ ತಿನ್ನಿಸುತ್ತಾರೆ. ಈ ವಿಡಿಯೋ ಅನ್ನು ಜನವರಿ 1 ರಂದು ಪೋಸ್ಟ್ ಮಾಡಲಾಗಿದೆ. ಈತನಕ 32,000 ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ಆಶ್ಚರ್ಯಕರ! ಈ ನಡೆಯು ಅತ್ಯುತ್ತಮವಾಗಿದೆ. ಹೀಗೆ ಸಂತೋಷವನ್ನು ಹಂಚುತ್ತಲೇ ಇರಿ. ಇದು ಎಂದಾದರೂ ಯಾವುದಾದರೂ ರೂಪದಲ್ಲಿ ಮರಳುತ್ತದೆ ಎಂದು ಒಬ್ಬರು ಹೇಳಿದ್ದಾರೆ. ನಿಮ್ಮೆಲ್ಲರ ಬಗ್ಗೆ ಹೆಮ್ಮೆಯಾಯಿತು, ಹೀಗೆಯೇ ಮುಂದುವರಿಯಿರಿ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು