ನೀವೇ ಕೇಕ್​ ಕಟ್​ ಮಾಡಿ; ಝೊಮ್ಯಾಟೋ ಡೆಲಿವರಿ ಏಜೆಂಟ್​ರನ್ನು ಹೊಸ ವರ್ಷದ ಸಂಭ್ರಮಾಚರಣೆಗೆ ಆಹ್ವಾನಿಸಿದ ವಿಡಿಯೋ ವೈರಲ್

New Year Celebration : ಹೀಗೆ ಸಂತೋಷವನ್ನು ಹಂಚುತ್ತಲೇ ಇರಿ, ಎಂದಾದರೊಂದು ದಿನ ಇದು ಯಾವುದಾದರೊಂದು ರೂಪದಲ್ಲಿ ನಿಮಗೆ ಮರಳುತ್ತದೆ ಎಂದು ನೆಟ್ಟಿಗರು ಬೆಂಗಳೂರಿನ ಯುವಕರನ್ನು ಹಾರೈಸುತ್ತಿದ್ದಾರೆ.

ನೀವೇ ಕೇಕ್​ ಕಟ್​ ಮಾಡಿ; ಝೊಮ್ಯಾಟೋ ಡೆಲಿವರಿ ಏಜೆಂಟ್​ರನ್ನು ಹೊಸ ವರ್ಷದ ಸಂಭ್ರಮಾಚರಣೆಗೆ ಆಹ್ವಾನಿಸಿದ ವಿಡಿಯೋ ವೈರಲ್
ಡೆಲಿವರಿಗೆ ಬಂದ ಝೊಮ್ಯಾಟೋ ಡೆಲಿವರಿ ಏಜೆಂಟ್​ ಕೇಕ್​ ಕಟ್ ಮಾಡುತ್ತಿರುವುದು
Follow us
| Updated By: ಶ್ರೀದೇವಿ ಕಳಸದ

Updated on: Jan 04, 2023 | 11:19 AM

Viral Video : ಹೀಗೊಂದು ಅನಿರೀಕ್ಷಿತ ಸಂತೋಷ ನೆಟ್ಟಿಗರ ಮನಸ್ಸನ್ನು ಸೂರೆಗೊಳ್ಳುತ್ತಿದೆ. ಫುಡ್ ಡೆಲಿವರಿ ಮಾಡಲು ಬಂದ ಝೊಮ್ಯಾಟೋ ಡೆಲಿವರಿ ಏಜೆಂಟ್​ರನ್ನು ಟೆರೇಸಿಗೆ ಆಹ್ವಾನಿಸಿ ಅವರಿಂದಲೇ ಕೇಕ್​ ಮಾಡಿಸಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ ಬೆಂಗಳೂರಿನ ಈ ಯುವಕರು. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.

ಕಿಶನ್​ ಶ್ರೀವತ್ಸ ಎನ್ನುವವರು ಈ ವಿಡಿಯೋ ಅನ್ನು ಟ್ವೀಟ್ ಮಾಡಿದ್ದಾರೆ. ‘ನಾವು ಡಿಸೆಂಬರ್ 31ರ ರಾತ್ರಿ 11ಕ್ಕೆ ಫುಡ್​ ಆರ್ಡರ್ ಮಾಡಿದೆವು. ಆರ್ಡರ್ ತಲುಪಿದಾಗ ಸರಿಯಾಗಿ 12 ಗಂಟೆ. ಹಾಗಾಗಿ ಡೆಲಿವರಿ ಏಜೆಂಟ್​ ಅವರಿಗೆ ಕೇಕ್ ಕಟ್ ಮಾಡಲು ಹೇಳಿ ಅವರೊಂದಿಗೆ ಹೊಸ ವರ್ಷದ ಸಂಭ್ರಮವನ್ನು ಆಚರಿಸಿದೆವು’ ಎಂದು ನೋಟ್​ ಬರೆದಿದ್ದಾರೆ ಕಿಶನ್.

ಇದನ್ನೂ ಓದಿ : ಹಸುಗೂಸಿಗೆ ಲಾಲಿ ಹಾಡುತ್ತಿರುವ ಉಕ್ರೇನಿಯನ್​ ಸೈನಿಕನ ವಿಡಿಯೋ ವೈರಲ್; ಭಾವುಕರಾದ ನೆಟ್ಟಿಗರು

ಗ್ರಾಹಕರು ಕೇಕ್​ ಕಟ್ ಮಾಡಲು ಹೇಳಿದಾಗ ಡೆಲಿವರಿ ಏಜೆಂಟ್​ ಸಂಕೋಚ ಪಡುತ್ತಾರೆ. ಆದರೆ ಯುವಕರು ಅವರನ್ನು ಒತ್ತಾಯಿಸಿ ಕೇಕ್​ ಕಟ್ ಮಾಡಿಸುತ್ತಾರೆ. ಜೊತೆಗೆ ಪರಸ್ಪರ ಕೇಕ್ ಕೂಡ ತಿನ್ನಿಸುತ್ತಾರೆ. ಈ ವಿಡಿಯೋ ಅನ್ನು ಜನವರಿ 1 ರಂದು ಪೋಸ್ಟ್ ಮಾಡಲಾಗಿದೆ. ಈತನಕ 32,000 ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ಆಶ್ಚರ್ಯಕರ! ಈ ನಡೆಯು ಅತ್ಯುತ್ತಮವಾಗಿದೆ. ಹೀಗೆ ಸಂತೋಷವನ್ನು ಹಂಚುತ್ತಲೇ ಇರಿ. ಇದು ಎಂದಾದರೂ ಯಾವುದಾದರೂ ರೂಪದಲ್ಲಿ ಮರಳುತ್ತದೆ ಎಂದು ಒಬ್ಬರು ಹೇಳಿದ್ದಾರೆ. ನಿಮ್ಮೆಲ್ಲರ ಬಗ್ಗೆ ಹೆಮ್ಮೆಯಾಯಿತು, ಹೀಗೆಯೇ ಮುಂದುವರಿಯಿರಿ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ