AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವೇ ಕೇಕ್​ ಕಟ್​ ಮಾಡಿ; ಝೊಮ್ಯಾಟೋ ಡೆಲಿವರಿ ಏಜೆಂಟ್​ರನ್ನು ಹೊಸ ವರ್ಷದ ಸಂಭ್ರಮಾಚರಣೆಗೆ ಆಹ್ವಾನಿಸಿದ ವಿಡಿಯೋ ವೈರಲ್

New Year Celebration : ಹೀಗೆ ಸಂತೋಷವನ್ನು ಹಂಚುತ್ತಲೇ ಇರಿ, ಎಂದಾದರೊಂದು ದಿನ ಇದು ಯಾವುದಾದರೊಂದು ರೂಪದಲ್ಲಿ ನಿಮಗೆ ಮರಳುತ್ತದೆ ಎಂದು ನೆಟ್ಟಿಗರು ಬೆಂಗಳೂರಿನ ಯುವಕರನ್ನು ಹಾರೈಸುತ್ತಿದ್ದಾರೆ.

ನೀವೇ ಕೇಕ್​ ಕಟ್​ ಮಾಡಿ; ಝೊಮ್ಯಾಟೋ ಡೆಲಿವರಿ ಏಜೆಂಟ್​ರನ್ನು ಹೊಸ ವರ್ಷದ ಸಂಭ್ರಮಾಚರಣೆಗೆ ಆಹ್ವಾನಿಸಿದ ವಿಡಿಯೋ ವೈರಲ್
ಡೆಲಿವರಿಗೆ ಬಂದ ಝೊಮ್ಯಾಟೋ ಡೆಲಿವರಿ ಏಜೆಂಟ್​ ಕೇಕ್​ ಕಟ್ ಮಾಡುತ್ತಿರುವುದು
TV9 Web
| Edited By: |

Updated on: Jan 04, 2023 | 11:19 AM

Share

Viral Video : ಹೀಗೊಂದು ಅನಿರೀಕ್ಷಿತ ಸಂತೋಷ ನೆಟ್ಟಿಗರ ಮನಸ್ಸನ್ನು ಸೂರೆಗೊಳ್ಳುತ್ತಿದೆ. ಫುಡ್ ಡೆಲಿವರಿ ಮಾಡಲು ಬಂದ ಝೊಮ್ಯಾಟೋ ಡೆಲಿವರಿ ಏಜೆಂಟ್​ರನ್ನು ಟೆರೇಸಿಗೆ ಆಹ್ವಾನಿಸಿ ಅವರಿಂದಲೇ ಕೇಕ್​ ಮಾಡಿಸಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ ಬೆಂಗಳೂರಿನ ಈ ಯುವಕರು. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.

ಕಿಶನ್​ ಶ್ರೀವತ್ಸ ಎನ್ನುವವರು ಈ ವಿಡಿಯೋ ಅನ್ನು ಟ್ವೀಟ್ ಮಾಡಿದ್ದಾರೆ. ‘ನಾವು ಡಿಸೆಂಬರ್ 31ರ ರಾತ್ರಿ 11ಕ್ಕೆ ಫುಡ್​ ಆರ್ಡರ್ ಮಾಡಿದೆವು. ಆರ್ಡರ್ ತಲುಪಿದಾಗ ಸರಿಯಾಗಿ 12 ಗಂಟೆ. ಹಾಗಾಗಿ ಡೆಲಿವರಿ ಏಜೆಂಟ್​ ಅವರಿಗೆ ಕೇಕ್ ಕಟ್ ಮಾಡಲು ಹೇಳಿ ಅವರೊಂದಿಗೆ ಹೊಸ ವರ್ಷದ ಸಂಭ್ರಮವನ್ನು ಆಚರಿಸಿದೆವು’ ಎಂದು ನೋಟ್​ ಬರೆದಿದ್ದಾರೆ ಕಿಶನ್.

ಇದನ್ನೂ ಓದಿ : ಹಸುಗೂಸಿಗೆ ಲಾಲಿ ಹಾಡುತ್ತಿರುವ ಉಕ್ರೇನಿಯನ್​ ಸೈನಿಕನ ವಿಡಿಯೋ ವೈರಲ್; ಭಾವುಕರಾದ ನೆಟ್ಟಿಗರು

ಗ್ರಾಹಕರು ಕೇಕ್​ ಕಟ್ ಮಾಡಲು ಹೇಳಿದಾಗ ಡೆಲಿವರಿ ಏಜೆಂಟ್​ ಸಂಕೋಚ ಪಡುತ್ತಾರೆ. ಆದರೆ ಯುವಕರು ಅವರನ್ನು ಒತ್ತಾಯಿಸಿ ಕೇಕ್​ ಕಟ್ ಮಾಡಿಸುತ್ತಾರೆ. ಜೊತೆಗೆ ಪರಸ್ಪರ ಕೇಕ್ ಕೂಡ ತಿನ್ನಿಸುತ್ತಾರೆ. ಈ ವಿಡಿಯೋ ಅನ್ನು ಜನವರಿ 1 ರಂದು ಪೋಸ್ಟ್ ಮಾಡಲಾಗಿದೆ. ಈತನಕ 32,000 ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ಧಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೆಸರೆಂಬ ಸ್ವರ್ಗಸುಖ ನಿಮಗೇನು ಗೊತ್ತು ಹುಲುಮಾನವರೇ; ನಾಯಿಯ ವೈರಲ್ ವಿಡಿಯೋ

ಆಶ್ಚರ್ಯಕರ! ಈ ನಡೆಯು ಅತ್ಯುತ್ತಮವಾಗಿದೆ. ಹೀಗೆ ಸಂತೋಷವನ್ನು ಹಂಚುತ್ತಲೇ ಇರಿ. ಇದು ಎಂದಾದರೂ ಯಾವುದಾದರೂ ರೂಪದಲ್ಲಿ ಮರಳುತ್ತದೆ ಎಂದು ಒಬ್ಬರು ಹೇಳಿದ್ದಾರೆ. ನಿಮ್ಮೆಲ್ಲರ ಬಗ್ಗೆ ಹೆಮ್ಮೆಯಾಯಿತು, ಹೀಗೆಯೇ ಮುಂದುವರಿಯಿರಿ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ