AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ

ಈ ದಂಪತಿ ಹಸುಗೂಸನ್ನು ಸುಮಾರು 83 ಸಾವಿರ ರೂ. ನಗದು ಹಣ ಮತ್ತು ಬಿಯರ್​ಗಾಗಿ ಮಾರಾಟ ಮಾಡಲು ಒಪ್ಪಿ ಸಹಿ ಹಾಕಿರುವ ಪತ್ರ ವಾಸಿಸುತ್ತಿದ್ದ ಟೆಂಟ್‌ನಲ್ಲಿ ಪತ್ತೆಯಾಗಿದೆ. ಪೊಲೀಸರು ಮಗುವನ್ನು ರಕ್ಷಿಸಿದ್ದು, ದಂಪತಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.

Viral News: ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ
ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ
ಅಕ್ಷತಾ ವರ್ಕಾಡಿ
|

Updated on: Oct 01, 2024 | 10:55 AM

Share

ವಾಷಿಂಗ್ಟನ್: ಬಿಯರ್‌ಗಾಗಿ ದಂಪತಿಯೊಂದು ತಮ್ಮ ಮೂರು ತಿಂಗಳ ಹಸುಗೂಸನ್ನೇ ಮಾರಾಟ ಮಾಡಿರುವ ಘಟನೆ ಅಮೆರಿಕದ ವಾಷಿಂಗ್ಟನ್​​​ನಲ್ಲಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ರೋಜರ್ಸ್‌ನ ಕ್ಯಾಂಪ್‌ಗ್ರೌಂಡ್​​ಗೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ಪೋಷಕರಾದ ಡೇರಿಯನ್ ಅರ್ಬನ್ ಮತ್ತು ಶಲೇನ್ ಎಹ್ಲರ್​ನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸೆಪ್ಟೆಂಬರ್ 21 ರಂದು ಹಸುಗೂಸನ್ನು ಸುಮಾರು 83 ಸಾವಿರ ರೂ. ನಗದು ಹಣ ಮತ್ತು ಬಿಯರ್ ಗೆ ಮಾರಾಟ ಮಾಡಿದ್ದರು. ಈ ಬಗ್ಗೆ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು,ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದಾರೆ. ಆದರೆ ಅದಾಗಲೇ ಮಗುವಿನ ಪೋಷಕರು ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ದಂಪತಿ ಸಾವಿರ ಡಾಲರ್‌ಗಳಿಗೆ ಮಾರಾಟ ಮಾಡಲು ಒಪ್ಪಿದ ಪತ್ರ ವಾಸಿಸುತ್ತಿದ್ದ ಟೆಂಟ್‌ನಲ್ಲಿ ಪತ್ತೆಯಾಗಿವೆ. ಇದರಲ್ಲಿ ನಗದು ಜೊತೆಗೆ ಬಿಯರ್ ನೀಡಲು ಒಪ್ಪಂದ ಮಾಡಿಕೊಂಡಿರುವುದನ್ನು ಕಂಡು ಪೊಲೀಸರು ದಂಗಾಗಿ ಹೋಗಿದ್ದಾರೆ. ಇಬ್ಬರೂ ಪೋಷಕರು ಪತ್ರಕ್ಕೆ ಸಹಿ ಹಾಕಿರುವ ಸೆಲ್‌ಫೋನ್ ವಿಡಿಯೋವನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಇದೀಗ ಮಗುವಿನ ಪೋಷಕರಾದ ಡೇರಿಯನ್ ಅರ್ಬನ್ ಮತ್ತು ಶಲೇನ್ ಎಹ್ಲರ್​ನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!