AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video; ವಿರೋಧಗಳನ್ನು ಎದುರಿಸಿ ಶ್ರವಣದೋಷವುಳ್ಳ ಭಾರತದ ಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

ಅದಾಗಲೇ ಒಂದು ಮಗುವಿರುವಾಗ ವಿದೇಶಿ ದಂಪತಿಯೊಂದು ಭಾರತದ ಮಗುವೊಂದನ್ನು ದತ್ತು ಪಡೆದಿದೆ. ಅದು ಶ್ರವಣ ದೋಷವುಳ್ಳ ಮಗುವನ್ನು ದತ್ತು ಪಡೆಯುವ ಮೂಲಕ ಇದೀಗ ಜಗತ್ತಿನಾದ್ಯಂತ ಸುದ್ದಿಯಾಗಿದ್ದಾರೆ.

Video; ವಿರೋಧಗಳನ್ನು ಎದುರಿಸಿ ಶ್ರವಣದೋಷವುಳ್ಳ ಭಾರತದ ಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
ಮಗುವನ್ನು ದತ್ತು ಪಡೆದ ದಂಪತಿ
TV9 Web
| Edited By: |

Updated on:Jan 25, 2022 | 4:02 PM

Share

ಅನಾಥ ಮಕ್ಕಳನ್ನು ದತ್ತು ಪಡೆಯುವುದು ಅಥವಾ ಮಕ್ಕಳಿಲ್ಲದವರು ಮಕ್ಕಳನ್ನು ದತ್ತು ಪಡೆಯುವುದು ಸಾಮಾನ್ಯ. ಆದರೆ ಅದಾಗಲೇ ಒಂದು ಮಗುವಿರುವಾಗ ವಿದೇಶಿ ದಂಪತಿಯೊಂದು ಭಾರತದ ಮಗುವೊಂದನ್ನು ದತ್ತು ಪಡೆದಿದೆ. ಅದು ಶ್ರವಣ ದೋಷವುಳ್ಳ ಮಗುವನ್ನು ದತ್ತು ಪಡೆಯುವ ಮೂಲಕ ಇದೀಗ ಜಗತ್ತಿನಾದ್ಯಂತ ಸುದ್ದಿಯಾಗಿದ್ದಾರೆ. ಶೇನ್​ ಮೈಕೆಲ್ ​ಮೈಲಿಯಸ್​ ಮತ್ತು ಜೊಹೊನ್ನಾ ಜೋ ಮೈಲಿಯಸ್ ಎನ್ನುವ ದಂಪತಿ ಭಾರತದಲ್ಲಿದ್ದ ಶ್ರವಣದೋಷವುಳ್ಳ ಮಗುವನ್ನು ದತ್ತು (Adopt) ಪಡೆದಿದ್ದಾರೆ. ಈ ಕುರಿತು ಹ್ಯೂಮನ್​ ಆಪ್​ ಬಾಂಬೆ (Humans of Bombay) ಎಂಬ ಇನ್ಸ್ಟಾಗ್ರಾಮ್ (Insagram)​ ಖಾತೆ ಹಂಚಿಕೊಂಡಿದೆ.

ದಂಪತಿಗೆ ಅದಾಗಲೇ ಒಬ್ಬಳು ಮಗಳಿದ್ದಾಳೆ. ಆದರೂ ಭಾರತದ ಮಗುವನ್ನು ದತ್ತು ಪಡೆಯಲು ನಿರ್ಧರಿಸಿದ್ದರು. ಹೀಗಾಗಿ ಏಜೆನ್ಸಿಗಳ ಮೂಲಕ ಸಂಪರ್ಕ ಸಾಧಿಸಿ  2 ವರ್ಷಗಳ ನಂತರ ನೈನಾ ಎನ್ನುವ ಮಗುವನ್ನು ದತ್ತು ಪಡೆದಿದ್ದಾರೆ. ಎರಡು ವರ್ಷಗಳ ಬಳಿಕ ಭಾರತಕ್ಕೆ ಬಂದು ಮಗುವನ್ನು ನೋಡಿದಾಗ ದಂಪತಿ ಖುಷಿಯಿಂದ ಕಣ್ಣೀರು ಹಾಕಿರುವುದನ್ನು ಕಾಣಬಹುದು. ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ಇದರ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.  ಕುಟುಂಬವಾಗಿರಲು ಒಂದೇ ಡಿಎನ್​ಎಯನ್ನು ಹೊಂದಿರಬೇಕಿಲ್ಲ ಎಂದು ಕ್ಯಾಪ್ಷನ್​ ನೀಡಲಾಗಿದೆ. ಸದ್ಯ ನೈನಾ ತನ್ನ ದತ್ತು ಪಡೆದ ತಂದೆ ತಾಯಿಗಳೊಂದಿಗೆ ಇದ್ದಾಳೆ. ನಮ್ಮ ಹಿರಿಯ ಮಗಳು ಕೂಡ ನೈನಾಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾಳೆ ಎಂದು ದಂಪತಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದ್ದು, 31 ಸಾವಿರಕ್ಕೂ ಹೆಚ್ಚು ಲೈಕ್ಸ್​​ ಗಳಿಸಿದೆ. ವಿಡಿಯೋ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಎಲ್ಲಾ ವಿರೋಧಗಳನ್ನು ಎದುರಿಸಿ, ಕಟ್ಟುಪಾಡುಗಳನ್ನು ದೂಡಿ ಶ್ರವಣ ದೋಷವುಳ್ಳ ಮಗುವನ್ನು ದತ್ತು ಪಡೆದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ವರ್ಕೌಟ್​​ ವೇಳೆಯೂ ಮುತ್ತನಿಟ್ಟುಕೊಂಡ ಜೋಡಿ; ವಿಡಿಯೋ ವೈರಲ್​

Published On - 4:01 pm, Tue, 25 January 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ