AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಸರಿನಲ್ಲಿ ಪ್ರೀ-ವೆಡ್ಡಿಂಗ್​ ಫೋಟೋಶೂಟ್​ ಮಾಡಿಸಿಕೊಂಡ ಜೋಡಿ: ವೈರಲ್​ ಆದ ಫೋಟೋಗಳು

ಸರಿನಲ್ಲಿ ಮಾಡಿಕೊಂಡಿರುವ ಪ್ರೀ ವೆಡ್ಡಿಂಗ್​ ಫೋಟೋಶೂಟ್​ ಸದ್ಯ ನೆಟ್ಟಿಗರ ಮನ ಸೆಳೆದಿದೆ. ಈ ಹೊಸ ಪರಿಕಲ್ಪನೆಯ ಪೋಟೋಶೂಟ್​ಗೆ ಬಳಕೆದಾರರು ವಾವ್​ ಎಂದಿದ್ದಾರೆ.

ಕೆಸರಿನಲ್ಲಿ ಪ್ರೀ-ವೆಡ್ಡಿಂಗ್​ ಫೋಟೋಶೂಟ್​ ಮಾಡಿಸಿಕೊಂಡ ಜೋಡಿ: ವೈರಲ್​ ಆದ ಫೋಟೋಗಳು
ಕೆಸರಿನಲ್ಲಿ ಫೋಟೋಶೂಟ್​ ಮಾಡಿಸಿಕೊಂಡ ಜೋಡಿ
TV9 Web
| Edited By: |

Updated on: Jan 06, 2022 | 2:46 PM

Share

ಪ್ರೀ ವೆಡ್ಡಿಂಗ್ ಫೋಟೋಶೂಟ್​ ಎಂದರೆ ಹೊಸ ಟ್ರೆಂಡ್​ ಆಗಿದೆ. ಅದರಲ್ಲೂ ವಿಭಿನ್ನ ರೀತಿಯ ಪರಿಕಲ್ಪನೆಗಳೊಂದಿಗೆ ಮದುವೆಗೂ ಮೊದಲು ಫೋಟೋ ತೆಗೆಸಿಕೊಳ್ಳಬೇಕು ಎನ್ನುವುದು ಎಲ್ಲಾ ಹೊಸ ಜೋಡಿಗಳ ಹೆಬ್ಬಯಕೆಯಾಗಿರುತ್ತದೆ. ಇದಕ್ಕೆ ತಕ್ಕ ಹಾಗೆ ಫೋಟೋಗ್ರಾಫರ್​ಗಳು ಹಲವು ರೀತಿಯ ಕ್ಯಾಮಾರಾಗಳನ್ನು ಹಿಡಿದು ಫೋಟೋಶೂಟ್​ಗೆ ಬರುತ್ತಾರೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ​ ಈ ಪ್ರೀ ವೆಡ್ಡಿಂಗ್​ ಫೋಟೋಶೂಟ್​ ಜಾರಿಯಲ್ಲಿದೆ. ಮದುವೆಗೂ ಮೊದಲು ಒಂದಷ್ಟು ಫೋಟೋಗಳನ್ನು ತಗೆಸಿಕೊಂಡು ಅದಕ್ಕೊಂದು ಚೆಂದದ ಫ್ರೆಮ್​ ಹಾಕಿ ಮನೆಯ ಗೋಡೆಯ ಮೇಲೆ ತೂಗುಹಾಕಬೇಕೆಂದು ಕನಸು ಕಾಣುತ್ತಾರೆ. ಇದಕ್ಕೆ ಮಾಡುವ ವಿಭಿನ್ನ ಪರಿಕಲ್ಪನೆಗಳು ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತವೆ. 

ಇದೀಗ ತಜಕಿಸ್ತಾನದ ಜೋಡಿಯೊಂದು ಮಾಡಿಕೊಂಡಿರುವ ಪ್ರೀ ವೆಡ್ಡಿಂಗ್​ ಫೋಟೋಶೂಟ್​ ಫೂಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಕೆಸರಿನಲ್ಲಿ ಮಾಡಿಕೊಂಡಿರುವ ಪ್ರೀ ವೆಡ್ಡಿಂಗ್​  ಫೋಟೋಶೂಟ್​ ಸದ್ಯ ನೆಟ್ಟಿಗರ ಮನ ಸೆಳೆದಿದೆ. ಈ ಹೊಸ ಪರಿಕಲ್ಪನೆಯ ಪೋಟೋಶೂಟ್​ಗೆ ಬಳಕೆದಾರರು ವಾವ್​ ಎಂದಿದ್ದಾರೆ.

View this post on Instagram

A post shared by ????? ?????? (@bumagaz)

ಮುರಾತ್ ಜುರಾಯೆವ್ ಮತ್ತು ಕಮಿಲ್ಲಾ  ಎನ್ನುವ ಜೋಡಿ ಕೆಸರಿನಲ್ಲಿ ಪ್ರೀ ವೆಡ್ಡಿಂಗ್​ ಫೋಟೋಶೂಟ್​ ಮಾಡಿಸಿಕೊಂಡಿದ್ದಾರೆ. ಕೆಮಿಲ್ಲಾ ಅಂದವಾದ ಬಿಳಿಬಣ್ಣದ ಗೌನ್​ ತೊಟ್ಟಿದ್ದು ಮುರಾತ್​ ಕಪ್ಪು-ಬಿಳಿಯ ಸೂಟ್​ ಧರಿಸಿದ್ದಾರೆ. ಇನ್ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದು, ಕೆಸರನಲ್ಲಿ ಜಾರಿಬಿದ್ದ, ಬಟ್ಟೆ ತುಂಬಾ ಕೆಸರು ಮೆತ್ತಿಕೊಂಡ ಫೋಟೋಗಳು ವೈರಲ್​ ಆಗಿವೆ.  ಕೆಮಿಲ್ಲಾ ಜೋಡಿ ಹಂಚಿಕೊಂಡ ಪೋಟೋಗಳಿಗೆ 9 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳು ಬಂದಿದ್ದು, ಹಲವರು ಶೇರ್​ ಮಾಡಿದ್ದಾರೆ.

ಇದನ್ನೂ ಓದಿ:

ಬಂಗಾರದ ಹೊದಿಕೆಯಿರುವ ಈ ಮಿಠಾಯಿಯ ಬೆಲೆ ಕೆಜಿಗೆ 16 ಸಾವಿರ ರೂ.!

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ